AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Terrorist Attack: ಕಾಶ್ಮೀರದ ಬಂಡಿಪೊರದಲ್ಲಿ ಉಗ್ರರ ದಾಳಿ; ಇಬ್ಬರು ಪೊಲೀಸರ ಸಾವು

ಬಂಡಿಪೋರಾ ಟೌನ್‌ಶಿಪ್‌ನ ಗುಲ್ಶನ್ ಚೌಕ್‌ನಲ್ಲಿ ಉಗ್ರರು ನಡೆಸಿದ ಹಠಾತ್ ದಾಳಿಯಲ್ಲಿ ಇಬ್ಬರು ಪೊಲೀಸರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Terrorist Attack: ಕಾಶ್ಮೀರದ ಬಂಡಿಪೊರದಲ್ಲಿ ಉಗ್ರರ ದಾಳಿ; ಇಬ್ಬರು ಪೊಲೀಸರ ಸಾವು
ಪ್ರಾತಿನಿಧಿಕ ಚಿತ್ರ
ಸುಷ್ಮಾ ಚಕ್ರೆ
|

Updated on:Dec 10, 2021 | 8:04 PM

Share

ಶ್ರೀನಗರ: ಜಮ್ಮು ಕಾಶ್ಮೀರದ ಬಂಡೀಪೊರ ಜಿಲ್ಲೆಯ ಗುಲ್​ಶಾನ್ ಚೌಕ್ ಬಳಿ ಮುಸುಕುಧಾರಿ ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಪೊಲೀಸ್‌ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಜಮ್ಮು-ಕಾಶ್ಮೀರದ ಗುಲ್ಶನ್ ಚೌಕ್‌ನಲ್ಲಿ ಉಗ್ರರ ದಾಳಿ ನಡೆದಿದ್ದು, ಮೊಹಮದ್ ಸುಲ್ತಾನ್, ಫಯಾಜ್ ಅಹ್ಮದ್‌ ಸಾವನ್ನಪ್ಪಿದ್ದಾರೆ. ಪೊಲೀಸರನ್ನು ಗುರಿಯಾಗಿಸಿ ಫೈರಿಂಗ್ ನಡೆಸಿದ್ದ ಉಗ್ರರು ಲಷ್ಕರ್ ಸಂಘಟನೆಯ ಭಯೋತ್ಪಾದಕರೆಂಬ ಅನುಮಾನ ವ್ಯಕ್ತವಾಗಿದೆ.

ಬಂಡಿಪೋರಾ ಟೌನ್‌ಶಿಪ್‌ನ ಗುಲ್ಶನ್ ಚೌಕ್‌ನಲ್ಲಿ ಉಗ್ರರು ನಡೆಸಿದ ಹಠಾತ್ ದಾಳಿಯಲ್ಲಿ ಇಬ್ಬರು ಪೊಲೀಸರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರೂ ಪೊಲೀಸರು ಕರ್ತವ್ಯದಲ್ಲಿದ್ದಾಗ ಅವರ ಮೇಲೆ ಗುಂಡು ಹಾರಿಸಲಾಗಿದೆ. ತಕ್ಷಣ ಆ ಇಬ್ಬರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅಲ್ಲಿ ಅವರು ಸಾವನ್ನಪ್ಪಿದ್ದಾರೆ. ಈ ಘಟನೆಯ ಬಗ್ಗೆ ಪೊಲೀಸ್ ಇಲಾಖೆ ತನಿಖೆ ನಡೆಸುತ್ತಿದ್ದಾರೆ.

ಇಂದು ನಡೆದ ದಾಳಿಯನ್ನು ಖಂಡಿಸಿ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ. ಉತ್ತರ ಕಾಶ್ಮೀರದ ಬಂಡಿಪೋರ್ ಪ್ರದೇಶದಲ್ಲಿ ಇಂದು ಮುಂಜಾನೆ ಪೊಲೀಸರ ಮೇಲೆ ಉಗ್ರಗಾಮಿ ದಾಳಿಯನ್ನು ನಾನು ಖಂಡಿಸುತ್ತೇನೆ,ಈ ಘಟನೆಯಲ್ಲಿ ಜಮ್ಮು ಕಾಶ್ಮೀರದ ಪೊಲೀಸ್ ಸಿಬ್ಬಂದಿಯಾದ ಮೊಹಮ್ಮದ್ ಸುಲ್ತಾನ್ ಮತ್ತು ಫಯಾಜ್ ಅಹ್ಮದ್ ಸಾವನ್ನಪ್ಪಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ.

ಕೆಲವು ವಾರಗಳ ಹಿಂದೆ ನಾಗರಿಕನೊಬ್ಬನ ಹತ್ಯೆಯನ್ನು ಹೊರತುಪಡಿಸಿ ಬಂಡಿಪೋರ್ ಕಳೆದ ವರ್ಷದಿಂದ ಕೊಂಚ ಶಾಂತಿಯುತವಾಗಿದೆ. ಬಂಡಿಪೋರ್ ಟೌನ್‌ಶಿಪ್‌ನಲ್ಲಿ ನಡೆದ ಕೊನೆಯ ದಾಳಿಯಲ್ಲಿ ಜುಲೈ 2020ರಲ್ಲಿ ಬಿಜೆಪಿ ನಾಯಕ ವಸೀಂ ಬಾರಿ, ಅವರ ತಂದೆ ಮತ್ತು ಸಹೋದರನನ್ನು ಕೊಲ್ಲಲಾಗಿತ್ತು.

ಇದನ್ನೂ ಓದಿ: ಶೋಪಿಯಾನ್​​ನಲ್ಲಿ ಇಬ್ಬರು ಎಲ್​ಇಟಿ ಉಗ್ರರ ಬಂಧನ; ಅವರ ಬಳಿಯಿದ್ದ ಚೈನೀಸ್​ ಪಿಸ್ತೂಲ್, ಗ್ರೆನೇಡ್​ ವಶ​

Pulwama Encounter: ಪುಲ್ವಾಮಾದಲ್ಲಿ ಕಾರ್ಯಾಚರಣೆ; ಜೈಷ್​ ಎ ಮೊಹಮ್ಮದ್​ ಉನ್ನತ ಕಮಾಂಡರ್ ಸೇರಿ ಇಬ್ಬರು ಉಗ್ರರ ಸಾವು

Published On - 8:02 pm, Fri, 10 December 21

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ