AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Terrorist Attack: ಕಾಶ್ಮೀರದ ಬಂಡಿಪೊರದಲ್ಲಿ ಉಗ್ರರ ದಾಳಿ; ಇಬ್ಬರು ಪೊಲೀಸರ ಸಾವು

ಬಂಡಿಪೋರಾ ಟೌನ್‌ಶಿಪ್‌ನ ಗುಲ್ಶನ್ ಚೌಕ್‌ನಲ್ಲಿ ಉಗ್ರರು ನಡೆಸಿದ ಹಠಾತ್ ದಾಳಿಯಲ್ಲಿ ಇಬ್ಬರು ಪೊಲೀಸರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Terrorist Attack: ಕಾಶ್ಮೀರದ ಬಂಡಿಪೊರದಲ್ಲಿ ಉಗ್ರರ ದಾಳಿ; ಇಬ್ಬರು ಪೊಲೀಸರ ಸಾವು
ಪ್ರಾತಿನಿಧಿಕ ಚಿತ್ರ
ಸುಷ್ಮಾ ಚಕ್ರೆ
|

Updated on:Dec 10, 2021 | 8:04 PM

Share

ಶ್ರೀನಗರ: ಜಮ್ಮು ಕಾಶ್ಮೀರದ ಬಂಡೀಪೊರ ಜಿಲ್ಲೆಯ ಗುಲ್​ಶಾನ್ ಚೌಕ್ ಬಳಿ ಮುಸುಕುಧಾರಿ ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಪೊಲೀಸ್‌ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಜಮ್ಮು-ಕಾಶ್ಮೀರದ ಗುಲ್ಶನ್ ಚೌಕ್‌ನಲ್ಲಿ ಉಗ್ರರ ದಾಳಿ ನಡೆದಿದ್ದು, ಮೊಹಮದ್ ಸುಲ್ತಾನ್, ಫಯಾಜ್ ಅಹ್ಮದ್‌ ಸಾವನ್ನಪ್ಪಿದ್ದಾರೆ. ಪೊಲೀಸರನ್ನು ಗುರಿಯಾಗಿಸಿ ಫೈರಿಂಗ್ ನಡೆಸಿದ್ದ ಉಗ್ರರು ಲಷ್ಕರ್ ಸಂಘಟನೆಯ ಭಯೋತ್ಪಾದಕರೆಂಬ ಅನುಮಾನ ವ್ಯಕ್ತವಾಗಿದೆ.

ಬಂಡಿಪೋರಾ ಟೌನ್‌ಶಿಪ್‌ನ ಗುಲ್ಶನ್ ಚೌಕ್‌ನಲ್ಲಿ ಉಗ್ರರು ನಡೆಸಿದ ಹಠಾತ್ ದಾಳಿಯಲ್ಲಿ ಇಬ್ಬರು ಪೊಲೀಸರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರೂ ಪೊಲೀಸರು ಕರ್ತವ್ಯದಲ್ಲಿದ್ದಾಗ ಅವರ ಮೇಲೆ ಗುಂಡು ಹಾರಿಸಲಾಗಿದೆ. ತಕ್ಷಣ ಆ ಇಬ್ಬರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅಲ್ಲಿ ಅವರು ಸಾವನ್ನಪ್ಪಿದ್ದಾರೆ. ಈ ಘಟನೆಯ ಬಗ್ಗೆ ಪೊಲೀಸ್ ಇಲಾಖೆ ತನಿಖೆ ನಡೆಸುತ್ತಿದ್ದಾರೆ.

ಇಂದು ನಡೆದ ದಾಳಿಯನ್ನು ಖಂಡಿಸಿ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ. ಉತ್ತರ ಕಾಶ್ಮೀರದ ಬಂಡಿಪೋರ್ ಪ್ರದೇಶದಲ್ಲಿ ಇಂದು ಮುಂಜಾನೆ ಪೊಲೀಸರ ಮೇಲೆ ಉಗ್ರಗಾಮಿ ದಾಳಿಯನ್ನು ನಾನು ಖಂಡಿಸುತ್ತೇನೆ,ಈ ಘಟನೆಯಲ್ಲಿ ಜಮ್ಮು ಕಾಶ್ಮೀರದ ಪೊಲೀಸ್ ಸಿಬ್ಬಂದಿಯಾದ ಮೊಹಮ್ಮದ್ ಸುಲ್ತಾನ್ ಮತ್ತು ಫಯಾಜ್ ಅಹ್ಮದ್ ಸಾವನ್ನಪ್ಪಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ.

ಕೆಲವು ವಾರಗಳ ಹಿಂದೆ ನಾಗರಿಕನೊಬ್ಬನ ಹತ್ಯೆಯನ್ನು ಹೊರತುಪಡಿಸಿ ಬಂಡಿಪೋರ್ ಕಳೆದ ವರ್ಷದಿಂದ ಕೊಂಚ ಶಾಂತಿಯುತವಾಗಿದೆ. ಬಂಡಿಪೋರ್ ಟೌನ್‌ಶಿಪ್‌ನಲ್ಲಿ ನಡೆದ ಕೊನೆಯ ದಾಳಿಯಲ್ಲಿ ಜುಲೈ 2020ರಲ್ಲಿ ಬಿಜೆಪಿ ನಾಯಕ ವಸೀಂ ಬಾರಿ, ಅವರ ತಂದೆ ಮತ್ತು ಸಹೋದರನನ್ನು ಕೊಲ್ಲಲಾಗಿತ್ತು.

ಇದನ್ನೂ ಓದಿ: ಶೋಪಿಯಾನ್​​ನಲ್ಲಿ ಇಬ್ಬರು ಎಲ್​ಇಟಿ ಉಗ್ರರ ಬಂಧನ; ಅವರ ಬಳಿಯಿದ್ದ ಚೈನೀಸ್​ ಪಿಸ್ತೂಲ್, ಗ್ರೆನೇಡ್​ ವಶ​

Pulwama Encounter: ಪುಲ್ವಾಮಾದಲ್ಲಿ ಕಾರ್ಯಾಚರಣೆ; ಜೈಷ್​ ಎ ಮೊಹಮ್ಮದ್​ ಉನ್ನತ ಕಮಾಂಡರ್ ಸೇರಿ ಇಬ್ಬರು ಉಗ್ರರ ಸಾವು

Published On - 8:02 pm, Fri, 10 December 21

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ