AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Terrorist Attack: ಕಾಶ್ಮೀರದ ಬಂಡಿಪೊರದಲ್ಲಿ ಉಗ್ರರ ದಾಳಿ; ಇಬ್ಬರು ಪೊಲೀಸರ ಸಾವು

ಬಂಡಿಪೋರಾ ಟೌನ್‌ಶಿಪ್‌ನ ಗುಲ್ಶನ್ ಚೌಕ್‌ನಲ್ಲಿ ಉಗ್ರರು ನಡೆಸಿದ ಹಠಾತ್ ದಾಳಿಯಲ್ಲಿ ಇಬ್ಬರು ಪೊಲೀಸರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Terrorist Attack: ಕಾಶ್ಮೀರದ ಬಂಡಿಪೊರದಲ್ಲಿ ಉಗ್ರರ ದಾಳಿ; ಇಬ್ಬರು ಪೊಲೀಸರ ಸಾವು
ಪ್ರಾತಿನಿಧಿಕ ಚಿತ್ರ
ಸುಷ್ಮಾ ಚಕ್ರೆ
|

Updated on:Dec 10, 2021 | 8:04 PM

Share

ಶ್ರೀನಗರ: ಜಮ್ಮು ಕಾಶ್ಮೀರದ ಬಂಡೀಪೊರ ಜಿಲ್ಲೆಯ ಗುಲ್​ಶಾನ್ ಚೌಕ್ ಬಳಿ ಮುಸುಕುಧಾರಿ ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಪೊಲೀಸ್‌ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಜಮ್ಮು-ಕಾಶ್ಮೀರದ ಗುಲ್ಶನ್ ಚೌಕ್‌ನಲ್ಲಿ ಉಗ್ರರ ದಾಳಿ ನಡೆದಿದ್ದು, ಮೊಹಮದ್ ಸುಲ್ತಾನ್, ಫಯಾಜ್ ಅಹ್ಮದ್‌ ಸಾವನ್ನಪ್ಪಿದ್ದಾರೆ. ಪೊಲೀಸರನ್ನು ಗುರಿಯಾಗಿಸಿ ಫೈರಿಂಗ್ ನಡೆಸಿದ್ದ ಉಗ್ರರು ಲಷ್ಕರ್ ಸಂಘಟನೆಯ ಭಯೋತ್ಪಾದಕರೆಂಬ ಅನುಮಾನ ವ್ಯಕ್ತವಾಗಿದೆ.

ಬಂಡಿಪೋರಾ ಟೌನ್‌ಶಿಪ್‌ನ ಗುಲ್ಶನ್ ಚೌಕ್‌ನಲ್ಲಿ ಉಗ್ರರು ನಡೆಸಿದ ಹಠಾತ್ ದಾಳಿಯಲ್ಲಿ ಇಬ್ಬರು ಪೊಲೀಸರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರೂ ಪೊಲೀಸರು ಕರ್ತವ್ಯದಲ್ಲಿದ್ದಾಗ ಅವರ ಮೇಲೆ ಗುಂಡು ಹಾರಿಸಲಾಗಿದೆ. ತಕ್ಷಣ ಆ ಇಬ್ಬರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅಲ್ಲಿ ಅವರು ಸಾವನ್ನಪ್ಪಿದ್ದಾರೆ. ಈ ಘಟನೆಯ ಬಗ್ಗೆ ಪೊಲೀಸ್ ಇಲಾಖೆ ತನಿಖೆ ನಡೆಸುತ್ತಿದ್ದಾರೆ.

ಇಂದು ನಡೆದ ದಾಳಿಯನ್ನು ಖಂಡಿಸಿ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ. ಉತ್ತರ ಕಾಶ್ಮೀರದ ಬಂಡಿಪೋರ್ ಪ್ರದೇಶದಲ್ಲಿ ಇಂದು ಮುಂಜಾನೆ ಪೊಲೀಸರ ಮೇಲೆ ಉಗ್ರಗಾಮಿ ದಾಳಿಯನ್ನು ನಾನು ಖಂಡಿಸುತ್ತೇನೆ,ಈ ಘಟನೆಯಲ್ಲಿ ಜಮ್ಮು ಕಾಶ್ಮೀರದ ಪೊಲೀಸ್ ಸಿಬ್ಬಂದಿಯಾದ ಮೊಹಮ್ಮದ್ ಸುಲ್ತಾನ್ ಮತ್ತು ಫಯಾಜ್ ಅಹ್ಮದ್ ಸಾವನ್ನಪ್ಪಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ.

ಕೆಲವು ವಾರಗಳ ಹಿಂದೆ ನಾಗರಿಕನೊಬ್ಬನ ಹತ್ಯೆಯನ್ನು ಹೊರತುಪಡಿಸಿ ಬಂಡಿಪೋರ್ ಕಳೆದ ವರ್ಷದಿಂದ ಕೊಂಚ ಶಾಂತಿಯುತವಾಗಿದೆ. ಬಂಡಿಪೋರ್ ಟೌನ್‌ಶಿಪ್‌ನಲ್ಲಿ ನಡೆದ ಕೊನೆಯ ದಾಳಿಯಲ್ಲಿ ಜುಲೈ 2020ರಲ್ಲಿ ಬಿಜೆಪಿ ನಾಯಕ ವಸೀಂ ಬಾರಿ, ಅವರ ತಂದೆ ಮತ್ತು ಸಹೋದರನನ್ನು ಕೊಲ್ಲಲಾಗಿತ್ತು.

ಇದನ್ನೂ ಓದಿ: ಶೋಪಿಯಾನ್​​ನಲ್ಲಿ ಇಬ್ಬರು ಎಲ್​ಇಟಿ ಉಗ್ರರ ಬಂಧನ; ಅವರ ಬಳಿಯಿದ್ದ ಚೈನೀಸ್​ ಪಿಸ್ತೂಲ್, ಗ್ರೆನೇಡ್​ ವಶ​

Pulwama Encounter: ಪುಲ್ವಾಮಾದಲ್ಲಿ ಕಾರ್ಯಾಚರಣೆ; ಜೈಷ್​ ಎ ಮೊಹಮ್ಮದ್​ ಉನ್ನತ ಕಮಾಂಡರ್ ಸೇರಿ ಇಬ್ಬರು ಉಗ್ರರ ಸಾವು

Published On - 8:02 pm, Fri, 10 December 21

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ