AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀನಗರದಲ್ಲಿ ಇಬ್ಬರು ಶಿಕ್ಷಕರನ್ನು ಹತ್ಯೆಗೈದ ಭಯೋತ್ಪಾದಕರು; 3 ನಾಗರಿಕರು ಕೊಲೆಯಾದ ಎರಡೇ ದಿನದಲ್ಲಿ ಘಟನೆ

ಶಿಕ್ಷಕರಿಬ್ಬರ ಹತ್ಯೆಯನ್ನು ಬಿಜೆಪಿಯ ಜಮ್ಮು-ಕಾಶ್ಮೀರ ವಕ್ತಾರ ಅಲ್ತಫ್​ ಠಾಕೂರ್​ ತೀವ್ರವಾಗಿ ಖಂಡಿಸಿದ್ದಾರೆ. ಏನೇನೂ ರಾಜಕೀಯ ಮಾಡದ, ಶಿಕ್ಷಣ ವೃತ್ತಿಯಲ್ಲಿರುವ ಶಿಕ್ಷಕರನ್ನು ಕೊಂದಿದ್ದು ನಿಜಕ್ಕೂ ಅಮಾನವೀಯ ಕೃತ್ಯ ಎಂದಿದ್ದಾರೆ.

ಶ್ರೀನಗರದಲ್ಲಿ ಇಬ್ಬರು ಶಿಕ್ಷಕರನ್ನು ಹತ್ಯೆಗೈದ ಭಯೋತ್ಪಾದಕರು; 3 ನಾಗರಿಕರು ಕೊಲೆಯಾದ ಎರಡೇ ದಿನದಲ್ಲಿ ಘಟನೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 07, 2021 | 1:35 PM

Share

ಶ್ರೀನಗರ: ಇಲ್ಲಿನ ಸಾಫಾ ಕಡಲ್​ ಪ್ರದೇಶದಲ್ಲಿರುವ ಶಾಲೆಯೊಂದರ ಪ್ರಿನ್ಸಿಪಾಲ್​ ಮತ್ತು ಶಿಕ್ಷಕರೊಬ್ಬರನ್ನು ಉಗ್ರರು(Terrorists) ಹತ್ಯೆಗೈದಿದ್ದಾರೆ. ಶ್ರೀನಗರ ಮತ್ತು ಬಂಡಿಪೋರಾದಲ್ಲಿ ಎರಡು ದಿನಗಳ ಹಿಂದೆ ಒಟ್ಟು ಮೂವರು ನಾಗರಿಕರನ್ನು ಉಗ್ರರು ಗುಂಡುಹೊಡೆದು ಕೊಂದಿದ್ದರು. ಇದೀಗ ಇಬ್ಬರು ಶಿಕ್ಷಕರನ್ನು ಹತ್ಯೆಗೈದಿದ್ದಾರೆ. ಮೃತರನ್ನು ಸತೀಂದರ್​ ಕೌರ್​ ಮತ್ತು ದೀಪಕ್​ ಚಾಂದ್​ ಎಂದು ಗುರುತಿಸಲಾಗಿದ್ದು, ಇಬ್ಬರೂ ಅಲೋಚಿಬಾಗ್ ನಿವಾಸಿಗಳು ಎನ್ನಲಾಗಿದೆ. ಉಗ್ರರಿಂದ ಗುಂಡೇಟು ತಿಂದು ಗಂಭೀರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಕರೆದುಕೊಂಡು ಬರುವಷ್ಟರಲ್ಲಿಯೇ ಇಬ್ಬರೂ ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. 

ಘಟನೆಯ ಬಗ್ಗೆ ಜಮ್ಮು-ಕಾಶ್ಮೀರದ ಡಿಜಿಪಿ ದಿಲ್​ಬಗ್​ ಸಿಂಗ್​, ಹೀಗೆ ನಾಗರಿಕರನ್ನು ಹತ್ಯೆ ಮಾಡುತ್ತಿರುವುದನ್ನು ನಾವು ಸಹಿಸುವುದಿಲ್ಲ. ಕಾಶ್ಮೀರದ ಸಮುದಾಯವನ್ನು ವಿಭಜಿಸುವ ಜತೆ, ಭಯೋತ್ಪಾದಕತೆಯನ್ನು ಹರಡುವ ಯತ್ನ ಇದಾಗಿದೆ. ಈ ಪ್ರಕರಣಗಳನ್ನು ನಾವು ಕೂಲಂಕಷವಾಗಿ ತನಿಖೆ ನಡೆಸಲಿದ್ದೇವೆ. ಅಪರಾಧ ಮಾಡಿದವರನ್ನು ಶೀಘ್ರವೇ ಪತ್ತೆಹಚ್ಚುತ್ತೇವೆ.  ಪಾಕಿಸ್ತಾನಿಗಳ ಅಣತಿ ಮೇರೆಗೆ, ನಮ್ಮ ಗಡಿಭಾಗಗಳಲ್ಲಿ ನಿರಂತರವಾಗಿ ಇದು ನಡೆಯುತ್ತಿದೆ ಎಂಬುದು ನಮಗೆ ಗೊತ್ತು ಎಂದೂ ಹೇಳಿದ್ದಾರೆ.

ಹಾಗೇ, ಶಿಕ್ಷಕರಿಬ್ಬರ ಹತ್ಯೆಯನ್ನು ಬಿಜೆಪಿಯ ಜಮ್ಮು-ಕಾಶ್ಮೀರ ವಕ್ತಾರ ಅಲ್ತಫ್​ ಠಾಕೂರ್​ ತೀವ್ರವಾಗಿ ಖಂಡಿಸಿದ್ದಾರೆ. ಏನೇನೂ ರಾಜಕೀಯ ಮಾಡದ, ಶಿಕ್ಷಣ ವೃತ್ತಿಯಲ್ಲಿರುವ ಶಿಕ್ಷಕರನ್ನು ಕೊಂದಿದ್ದು ನಿಜಕ್ಕೂ ಅಮಾನವೀಯ ಕೃತ್ಯ. ಇದು ಭಯೋತ್ಪಾದಕರ ಹತಾಶೆಯ ಪರಮಾವಧಿಯನ್ನು ತೋರಿಸುತ್ತದೆ. ವಿದ್ಯಾರ್ಥಿಗಳಿಗೆ ವಿದ್ಯೆ ಕಲಿಸುವ ಈ ಶಿಕ್ಷಕರು ಮಾಡಿದ ತಪ್ಪಾದರೂ ಏನು ಎಂದು ಠಾಕೂರ್​ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: GGVV: ಬಹುನಿರೀಕ್ಷಿತ ‘ಗರುಡ ಗಮನ ವೃಷಭ ವಾಹನ’ ಚಿತ್ರ ತಂಡದಿಂದ ಹೊರಬಿತ್ತು ಮಹತ್ವದ ಅಪ್ಡೇಟ್; ಇಲ್ಲಿದೆ ಮಾಹಿತಿ

ಲಖಿಂಪುರ ಖೇರಿ ಹಿಂಸಾಚಾರದ ಸ್ಥಿತಿ ವರದಿ ನಾಳೆಯೊಳಗೆ ಸಲ್ಲಿಸುವಂತೆ ಯುಪಿ ಸರ್ಕಾರಕ್ಕೆ ಸುಪ್ರೀಂಕೋರ್ಟ್​ ಸೂಚನೆ

Published On - 12:44 pm, Thu, 7 October 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ