Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀನಗರದಲ್ಲಿ ಇಬ್ಬರು ಶಿಕ್ಷಕರನ್ನು ಹತ್ಯೆಗೈದ ಭಯೋತ್ಪಾದಕರು; 3 ನಾಗರಿಕರು ಕೊಲೆಯಾದ ಎರಡೇ ದಿನದಲ್ಲಿ ಘಟನೆ

ಶಿಕ್ಷಕರಿಬ್ಬರ ಹತ್ಯೆಯನ್ನು ಬಿಜೆಪಿಯ ಜಮ್ಮು-ಕಾಶ್ಮೀರ ವಕ್ತಾರ ಅಲ್ತಫ್​ ಠಾಕೂರ್​ ತೀವ್ರವಾಗಿ ಖಂಡಿಸಿದ್ದಾರೆ. ಏನೇನೂ ರಾಜಕೀಯ ಮಾಡದ, ಶಿಕ್ಷಣ ವೃತ್ತಿಯಲ್ಲಿರುವ ಶಿಕ್ಷಕರನ್ನು ಕೊಂದಿದ್ದು ನಿಜಕ್ಕೂ ಅಮಾನವೀಯ ಕೃತ್ಯ ಎಂದಿದ್ದಾರೆ.

ಶ್ರೀನಗರದಲ್ಲಿ ಇಬ್ಬರು ಶಿಕ್ಷಕರನ್ನು ಹತ್ಯೆಗೈದ ಭಯೋತ್ಪಾದಕರು; 3 ನಾಗರಿಕರು ಕೊಲೆಯಾದ ಎರಡೇ ದಿನದಲ್ಲಿ ಘಟನೆ
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Oct 07, 2021 | 1:35 PM

ಶ್ರೀನಗರ: ಇಲ್ಲಿನ ಸಾಫಾ ಕಡಲ್​ ಪ್ರದೇಶದಲ್ಲಿರುವ ಶಾಲೆಯೊಂದರ ಪ್ರಿನ್ಸಿಪಾಲ್​ ಮತ್ತು ಶಿಕ್ಷಕರೊಬ್ಬರನ್ನು ಉಗ್ರರು(Terrorists) ಹತ್ಯೆಗೈದಿದ್ದಾರೆ. ಶ್ರೀನಗರ ಮತ್ತು ಬಂಡಿಪೋರಾದಲ್ಲಿ ಎರಡು ದಿನಗಳ ಹಿಂದೆ ಒಟ್ಟು ಮೂವರು ನಾಗರಿಕರನ್ನು ಉಗ್ರರು ಗುಂಡುಹೊಡೆದು ಕೊಂದಿದ್ದರು. ಇದೀಗ ಇಬ್ಬರು ಶಿಕ್ಷಕರನ್ನು ಹತ್ಯೆಗೈದಿದ್ದಾರೆ. ಮೃತರನ್ನು ಸತೀಂದರ್​ ಕೌರ್​ ಮತ್ತು ದೀಪಕ್​ ಚಾಂದ್​ ಎಂದು ಗುರುತಿಸಲಾಗಿದ್ದು, ಇಬ್ಬರೂ ಅಲೋಚಿಬಾಗ್ ನಿವಾಸಿಗಳು ಎನ್ನಲಾಗಿದೆ. ಉಗ್ರರಿಂದ ಗುಂಡೇಟು ತಿಂದು ಗಂಭೀರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಕರೆದುಕೊಂಡು ಬರುವಷ್ಟರಲ್ಲಿಯೇ ಇಬ್ಬರೂ ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. 

ಘಟನೆಯ ಬಗ್ಗೆ ಜಮ್ಮು-ಕಾಶ್ಮೀರದ ಡಿಜಿಪಿ ದಿಲ್​ಬಗ್​ ಸಿಂಗ್​, ಹೀಗೆ ನಾಗರಿಕರನ್ನು ಹತ್ಯೆ ಮಾಡುತ್ತಿರುವುದನ್ನು ನಾವು ಸಹಿಸುವುದಿಲ್ಲ. ಕಾಶ್ಮೀರದ ಸಮುದಾಯವನ್ನು ವಿಭಜಿಸುವ ಜತೆ, ಭಯೋತ್ಪಾದಕತೆಯನ್ನು ಹರಡುವ ಯತ್ನ ಇದಾಗಿದೆ. ಈ ಪ್ರಕರಣಗಳನ್ನು ನಾವು ಕೂಲಂಕಷವಾಗಿ ತನಿಖೆ ನಡೆಸಲಿದ್ದೇವೆ. ಅಪರಾಧ ಮಾಡಿದವರನ್ನು ಶೀಘ್ರವೇ ಪತ್ತೆಹಚ್ಚುತ್ತೇವೆ.  ಪಾಕಿಸ್ತಾನಿಗಳ ಅಣತಿ ಮೇರೆಗೆ, ನಮ್ಮ ಗಡಿಭಾಗಗಳಲ್ಲಿ ನಿರಂತರವಾಗಿ ಇದು ನಡೆಯುತ್ತಿದೆ ಎಂಬುದು ನಮಗೆ ಗೊತ್ತು ಎಂದೂ ಹೇಳಿದ್ದಾರೆ.

ಹಾಗೇ, ಶಿಕ್ಷಕರಿಬ್ಬರ ಹತ್ಯೆಯನ್ನು ಬಿಜೆಪಿಯ ಜಮ್ಮು-ಕಾಶ್ಮೀರ ವಕ್ತಾರ ಅಲ್ತಫ್​ ಠಾಕೂರ್​ ತೀವ್ರವಾಗಿ ಖಂಡಿಸಿದ್ದಾರೆ. ಏನೇನೂ ರಾಜಕೀಯ ಮಾಡದ, ಶಿಕ್ಷಣ ವೃತ್ತಿಯಲ್ಲಿರುವ ಶಿಕ್ಷಕರನ್ನು ಕೊಂದಿದ್ದು ನಿಜಕ್ಕೂ ಅಮಾನವೀಯ ಕೃತ್ಯ. ಇದು ಭಯೋತ್ಪಾದಕರ ಹತಾಶೆಯ ಪರಮಾವಧಿಯನ್ನು ತೋರಿಸುತ್ತದೆ. ವಿದ್ಯಾರ್ಥಿಗಳಿಗೆ ವಿದ್ಯೆ ಕಲಿಸುವ ಈ ಶಿಕ್ಷಕರು ಮಾಡಿದ ತಪ್ಪಾದರೂ ಏನು ಎಂದು ಠಾಕೂರ್​ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: GGVV: ಬಹುನಿರೀಕ್ಷಿತ ‘ಗರುಡ ಗಮನ ವೃಷಭ ವಾಹನ’ ಚಿತ್ರ ತಂಡದಿಂದ ಹೊರಬಿತ್ತು ಮಹತ್ವದ ಅಪ್ಡೇಟ್; ಇಲ್ಲಿದೆ ಮಾಹಿತಿ

ಲಖಿಂಪುರ ಖೇರಿ ಹಿಂಸಾಚಾರದ ಸ್ಥಿತಿ ವರದಿ ನಾಳೆಯೊಳಗೆ ಸಲ್ಲಿಸುವಂತೆ ಯುಪಿ ಸರ್ಕಾರಕ್ಕೆ ಸುಪ್ರೀಂಕೋರ್ಟ್​ ಸೂಚನೆ

Published On - 12:44 pm, Thu, 7 October 21

ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ