AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pulwama Encounter: ಪುಲ್ವಾಮಾದಲ್ಲಿ ಕಾರ್ಯಾಚರಣೆ; ಜೈಷ್​ ಎ ಮೊಹಮ್ಮದ್​ ಉನ್ನತ ಕಮಾಂಡರ್ ಸೇರಿ ಇಬ್ಬರು ಉಗ್ರರ ಸಾವು

ಪುಲ್ವಾಮಾದ ಕಸ್ಬಾಯರ್​ ರಾಜ್​ಪೋರ್​​ನಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಸಿಕ್ಕ ಬೆನ್ನಲ್ಲೇ ಭದ್ರತಾ ಪಡೆಗಳು ಕಾರ್ಯಾಚರಣೆಗೆ ಇಳಿದಿದ್ದವು. ಸ್ಥಳವನ್ನು ಸಂಪೂರ್ಣವಾಗಿ ಸುತ್ತುವರಿಯಲಾಗಿತ್ತು.

Pulwama Encounter: ಪುಲ್ವಾಮಾದಲ್ಲಿ ಕಾರ್ಯಾಚರಣೆ; ಜೈಷ್​ ಎ ಮೊಹಮ್ಮದ್​ ಉನ್ನತ ಕಮಾಂಡರ್ ಸೇರಿ ಇಬ್ಬರು ಉಗ್ರರ ಸಾವು
ಯಾಸಿರ್​ ಮತ್ತು ಫರ್ಕೂನ್​ (ಫೋಟೋ ಕೃಪೆ ಟಿವಿ 9 ಭಾರತ್​ವರ್ಷ್)
Follow us
TV9 Web
| Updated By: Lakshmi Hegde

Updated on: Dec 01, 2021 | 12:41 PM

ಜಮ್ಮು-ಕಾಶ್ಮೀರದ ಪುಲ್ವಾಮಾ (Pulwama Encounter) ಜಿಲ್ಲೆಯಲ್ಲಿ ಇಂದು ಮುಂಜಾನೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್​ಕೌಂಟರ್​ ನಡೆದಿದ್ದು, ಇದರಲ್ಲಿ ಇಬ್ಬರು ಉಗ್ರರು ಹತ್ಯೆಗೀಡಾಗಿದ್ದಾರೆ. ಕಸ್ಬಾಯರ್ ರಾಜಪೋರಾ ಎಂಬ ಏರಿಯಾದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಮೃತಪಟ್ಟ ಉಗ್ರರಲ್ಲಿ ಒಬ್ಬಾತ ಜೈಷ್​ ಎ ಮೊಹಮ್ಮದ್ ಸಂಘಟನೆಯ ಉನ್ನತ ಕಮಾಂಡರ್​ ಎಂದು ಹೇಳಲಾಗಿದೆ.  

ಎನ್​ಕೌಂಟರ್​ ಬಗ್ಗೆ ಕಾಶ್ಮೀರ ಐಜಿಪಿ ವಿಜಯ್​ ಕುಮಾರ್​ ಪ್ರತಿಕ್ರಿಯೆ ನೀಡಿದ್ದು, ಜೈಷ್​ ಎ ಮೊಹಮ್ಮದ್​ ಸಂಘಟನೆಯ ಉನ್ನತ ಕಮಾಂಡರ್ ಯಾಸಿರ್​ ಪರ್ರೆ ಮತ್ತು ಫುರ್ಕಾನ್​ ಎಂಬ ವಿದೇಶಿ ಉಗ್ರ ಭದ್ರತಾ ಪಡೆಗಳ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದರಲ್ಲಿ ಯಾಸಿರ್​ ಐಇಡಿ ಎಕ್ಸ್​ಪರ್ಟ್​ ಆಗಿದ್ದು, ಹಲವು ಭಯೋತ್ಪಾದಕ ಚಟುವಟಿಕೆಗಳಲ್ಲಿ ಪಾಲ್ಗೊಂಡವನಾಗಿದ್ದಾನೆ ಎಂದೂ ಹೇಳಿದ್ದಾರೆ. ಸದ್ಯ ಪ್ರದೇಶದಲ್ಲಿ ಇನ್ನೂ ಸಹ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಯುತ್ತಲೇ ಇದೆ.

ಪುಲ್ವಾಮಾದ ಕಸ್ಬಾಯರ್​ ರಾಜ್​ಪೋರ್​​ನಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಸಿಕ್ಕ ಬೆನ್ನಲ್ಲೇ ಭದ್ರತಾ ಪಡೆಗಳು ಕಾರ್ಯಾಚರಣೆಗೆ ಇಳಿದಿದ್ದವು. ಸ್ಥಳವನ್ನು ಸಂಪೂರ್ಣವಾಗಿ ಸುತ್ತುವರಿಯಲಾಗಿತ್ತು. ಭದ್ರತಾ ಪಡೆಗಳು ತಮ್ಮನ್ನು ಸುತ್ತುವರಿದಿದ್ದಾರೆ ಎಂದು ಗೊತ್ತಾಗುತ್ತಿದ್ದಂತೆ ಅಡಗಿದ್ದ ಉಗ್ರರು ನಿರಂತರವಾಗಿ ಗುಂಡಿನ ದಾಳಿ ನಡೆಸಲು ಶುರು ಮಾಡಿದರು. ಅದಕ್ಕೆ ಪ್ರತಿಯಾಗಿ ಭದ್ರತಾ ಸಿಬ್ಬಂದಿಯೂ ಫೈರಿಂಗ್​ ನಡೆಸಿದ್ದಾರೆ. ಈ ವೇಳೆ ಇಬ್ಬರು ಭಯೋತ್ಪಾದಕರು ಸತ್ತಿದ್ದಾರೆ.

ಜಮ್ಮು-ಕಾಶ್ಮೀರದ ಪ್ರದೇಶಗಳಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ನಿರಂತರವಾಗಿ ನಡೆಯುತತಲೇ ಇದೆ. ಕಳೆದ ತಿಂಗಳು ಲಷ್ಕರ್​ ಎ ತೊಯ್ಬಾದ ಉಗ್ರ ಸರ್ವಿರ್​ ಅಹ್ಮದ್​ ಮಿರ್​​ನನ್ನು ಸಿಆರ್​ಪಿಎಫ್​ ಸಿಬ್ಬಂದಿ ಸೆರೆ ಹಿಡಿದಿದ್ದರು. ಈತನನ್ನು ಪುಲ್ವಾಮಾದ ಮಿರ್ಗುಂಡ್​​ನಲ್ಲಿ ಬಂಧಿಸಲಾಗಿತ್ತು.

ಇದನ್ನೂ ಓದಿ: ಲಸಿಕೆ ಹಾಕದ ಕೊವಿಡ್ ರೋಗಿಗಳಿಗೆ ಕೇರಳ ಸರ್ಕಾರ ಉಚಿತ ಚಿಕಿತ್ಸೆ ನೀಡುವುದಿಲ್ಲ: ಪಿಣರಾಯಿ ವಿಜಯನ್

ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ