ಕಾಶ್ಮೀರದಲ್ಲಿ ಮುಂಜಾನೆ ನಡೆದ ಎನ್​ಕೌಂಟರ್​​; ಇಬ್ಬರು ಉಗ್ರರ ಹತ್ಯೆ, ಮೂವರು ಯೋಧರಿಗೆ ಗಾಯ

Encounter In Kashmir: ಶೊಕ್ಬಾಬಾದ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ರಕ್ಷಣಾ ಪಡೆಗಳ ಜಂಟಿ ತಂಡಗಳು ಕಾರ್ಯಾಚರಣೆ ನಡೆಸಿದ್ದವು. ಭದ್ರತಾ ಪಡೆಗಳು ಅರಣ್ಯಕ್ಕೆ ತೆರಳುತ್ತಿದ್ದಂತೆ, ಅಡಗಿದ್ದ ಉಗ್ರರು ಗುಂಡಿನ ದಾಳಿ ನಡೆಸಲು ಶುರು ಮಾಡಿದರು.

ಕಾಶ್ಮೀರದಲ್ಲಿ ಮುಂಜಾನೆ ನಡೆದ ಎನ್​ಕೌಂಟರ್​​; ಇಬ್ಬರು ಉಗ್ರರ ಹತ್ಯೆ, ಮೂವರು ಯೋಧರಿಗೆ ಗಾಯ
ಸಾಂಕೇತಿಕ ಚಿತ್ರ
Follow us
| Updated By: Lakshmi Hegde

Updated on:Jul 24, 2021 | 1:36 PM

ಉತ್ತರ ಕಾಶ್ಮೀರ (North Kashmir)ದ ಬಂಡಿಪೋರಾದಲ್ಲಿ ಇಂದು ಮುಂಜಾನೆ ನಡೆದ ಎನ್​ಕೌಂಟರ್​ನಲ್ಲಿ ಇಬ್ಬರು ಉಗ್ರರ ಹತ್ಯೆ (Terrorists Killed)ಯಾಗಿದ್ದು, ಮೂವರು ಯೋಧರು ಗಾಯಗೊಂಡಿದ್ದಾರೆ. ಬಂಡಿಪೋರಾ ಜಿಲ್ಲೆಯ ಸುಮ್ಲಾರ್​ನ ಶೊಕ್ಬಾಬಾ ಎಂಬ ಪ್ರದೇಶದಲ್ಲಿ ರಕ್ಷಣಾ ಪಡೆಗಳು(Security Forces) ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಇದರಲ್ಲಿ ಇಬ್ಬರು ಉಗ್ರರನ್ನು ಕೊಲ್ಲಲಾಗಿದ್ದು, ಅವರು ಯಾವ ಸಂಘಟನೆಗೆ ಸೇರಿದವರು, ಹೆಸರೇನು ಎಂಬಿತ್ಯಾದಿ ಮಾಹಿತಿಗಳು ಇನ್ನೂ ಲಭ್ಯವಾಗಿಲ್ಲ.

ಶೊಕ್ಬಾಬಾದ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ರಕ್ಷಣಾ ಪಡೆಗಳ ಜಂಟಿ ತಂಡಗಳು ಕಾರ್ಯಾಚರಣೆ ನಡೆಸಿದ್ದವು. ಭದ್ರತಾ ಪಡೆಗಳು ಅರಣ್ಯಕ್ಕೆ ತೆರಳುತ್ತಿದ್ದಂತೆ, ಅಡಗಿದ್ದ ಉಗ್ರರು ಗುಂಡಿನ ದಾಳಿ ನಡೆಸಲು ಶುರು ಮಾಡಿದರು. ಹಾಗಾಗಿ ನಾವೂ ಪ್ರತಿ ದಾಳಿ ಮಾಡಬೇಕಾಯಿತು. ಈ ಗುಂಡಿನ ವಿನಿಮಯದ ವೇಳೆ ಮೂವರು ಯೋಧರಿಗೆ ಗಾಯವಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಭಾರತೀಯ ಸೇನೆಯ ಸಿಆರ್​ಪಿಎಫ್​ ಸೈನಿಕರೊಂದಿಗೆ, 13ಆರ್​ಆರ್ ಮತ್ತು 14 ಆರ್​ಆರ್​ ಯೋಧರು, ಪೊಲೀಸರು ಸೇರಿ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿದ್ದಾರೆ. ಇನ್ನಷ್ಟು ಉಗ್ರರು ಇರಬಹುದು ಎಂದು ಹೇಳಲಾಗಿದ್ದು, ರಕ್ಷಣಾ ಪಡೆಗಳ ಕಾರ್ಯಾಚರಣೆ ಮುಂದುವರಿದಿದೆ.

ಇದನ್ನೂ ಓದಿ: ಭೀಕರ ಪ್ರವಾಹಕ್ಕೆ ತತ್ತರಿಸಿದ ಬೆಳಗಾವಿ; ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ ಲೈನ್​ಮನ್​ಗಳು!

ಕೃಷಿ ಉತ್ಪನ್ನ ರಫ್ತಿನಲ್ಲಿ ಭಾರತಕ್ಕೆ 9ನೇ ಸ್ಥಾನ; ಪ್ರಧಾನಿ ಮೋದಿ ಸರ್ಕಾರದ ಪ್ರಯತ್ನಗಳ ಫಲವೆಂದ ಸಚಿವ ಪ್ರಲ್ಹಾದ್ ಜೋಶಿ

Published On - 1:34 pm, Sat, 24 July 21

ತಾಜಾ ಸುದ್ದಿ
‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು
‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು
Daily Horoscope: ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು
Daily Horoscope: ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು
Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ
Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!