AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಶ್ರೀನಗರದಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈದ ಭದ್ರತಾ ಪಡೆ; ಮುಂದುವರಿದ ಕಾರ್ಯಾಚರಣೆ

ನಿನ್ನೆ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಜೈಷ್ ಇ ಮೊಹಮ್ಮದ್ ಸಂಘಟನೆಯ ಸ್ಥಳೀಯ ಉಗ್ರನೊಬ್ಬನನ್ನು ಕೊಂದಿದ್ದರು. ಭಾರತೀಯ ಸೇನೆಯ 42ನೇ ರಾಷ್ಟ್ರೀಯ ರೈಫಲ್​ ಮತ್ತು ಕೇಂದ್ರೀಯ ಮೀಸಲು ಪಡೆ ಸಿಬ್ಬಂದಿ ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದರು.

ಇಂದು ಶ್ರೀನಗರದಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈದ ಭದ್ರತಾ ಪಡೆ; ಮುಂದುವರಿದ ಕಾರ್ಯಾಚರಣೆ
ಭಾರತೀಯ ಸೈನಿಕರು (ಸಂಗ್ರಹ ಚಿತ್ರ)
TV9 Web
| Edited By: |

Updated on:Dec 13, 2021 | 3:49 PM

Share

ಶ್ರೀನಗರದ ರಾಂಗ್ರೆಥ್​​ ಪ್ರದೇಶದಲ್ಲಿ ಇಬ್ಬರು ಉಗ್ರರನ್ನು (Terrorists) ಭದ್ರತಾ ಪಡೆ ಸಿಬ್ಬಂದಿ ಹತ್ಯೆ ಮಾಡಿದ್ದಾರೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ಇಂದು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದವು. ಈ ವೇಳೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಆದರೆ ಅವರು ಯಾರೆಂಬುದು ಇನ್ನೂ ಗುರುತು ಪತ್ತೆಯಾಗಿಲ್ಲ ಎಂದು ಕಾಶ್ಮೀರಿ ಪೊಲೀಸರು ಟ್ವೀಟ್ ಮಾಡಿದ್ದಾರೆ. 

ನಿನ್ನೆ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಜೈಷ್ ಇ ಮೊಹಮ್ಮದ್ ಸಂಘಟನೆಯ ಸ್ಥಳೀಯ ಉಗ್ರನೊಬ್ಬನನ್ನು ಕೊಂದಿದ್ದರು. ಭಾರತೀಯ ಸೇನೆಯ 42ನೇ ರಾಷ್ಟ್ರೀಯ ರೈಫಲ್​ ಮತ್ತು ಕೇಂದ್ರೀಯ ಮೀಸಲು ಪಡೆ ಸಿಬ್ಬಂದಿ ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದರು. ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆಸಿ, ಜೈಷ್​ ಇ ಮೊಹಮ್ಮದ್​ ಸಂಘಟನೆಯ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿತ್ತು. ಮೊದಲು ಉಗ್ರನನ್ನು ವಶಕ್ಕೆ ಪಡೆಯಲಾಯಿತು. ಆದರೆ ಆತ ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಲು ಯತ್ನಿಸಿದಾಗ ಅವನನ್ನು ಕೊಲ್ಲಲಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ:BWF World Championship: ಮೊದಲ ಸುತ್ತಿನಲ್ಲೇ ಸಾಯಿ ಪ್ರಣೀತ್ ಔಟ್! ಡಬಲ್ಸ್‌ನಲ್ಲೂ ಸೋಲು; ಕಿಡಂಬಿಗೆ ಜಯ

Published On - 3:48 pm, Mon, 13 December 21

Follow Us
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು