AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರರಾಜಧಾನಿಯಲ್ಲಿ ವೈದ್ಯಕೀಯ ಆಕ್ಸಿಜನ್​ ಅಭಾವದ ಭೀಕರತೆ; ಜೈಪುರ ಗೋಲ್ಡನ್​ ಆಸ್ಪತ್ರೆಯಲ್ಲಿ 25 ರೋಗಿಗಳು ಸಾವು

ದೆಹಲಿಯಾದ್ಯಂತ ಹಲವು ಸಣ್ಣಸಣ್ಣ ಆಸ್ಪತ್ರೆಗಳಲ್ಲಿ ಆಮ್ಲಜನಕ ಕೊರತೆ ಎದುರಾಗಿದೆ. ಜೈಪುರ ಗೋಲ್ಡನ್​ ಆಸ್ಪತ್ರೆಗೂ ಮೊದಲು ದೆಹಲಿಯ ಗಂಗಾರಾಮ ಆಸ್ಪತ್ರೆಯಲ್ಲಿ 25 ರೋಗಿಗಳು ಆಕ್ಸಿಜನ್​ ಇಲ್ಲದೆ ಸಾವನ್ನಪ್ಪಿದ್ದಾರೆ.

ರಾಷ್ಟ್ರರಾಜಧಾನಿಯಲ್ಲಿ ವೈದ್ಯಕೀಯ ಆಕ್ಸಿಜನ್​ ಅಭಾವದ ಭೀಕರತೆ; ಜೈಪುರ ಗೋಲ್ಡನ್​ ಆಸ್ಪತ್ರೆಯಲ್ಲಿ 25 ರೋಗಿಗಳು ಸಾವು
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:Apr 24, 2021 | 1:43 PM

Share

ದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವೈದ್ಯಕೀಯ ಆಕ್ಸಿಜನ್ ಅಭಾವದ ಭೀಕರತೆ ದಿನದಿನಕ್ಕೂ ಹೆಚ್ಚುತ್ತಿದೆ. ದೆಹಲಿಯ ಜೈಪುರ ಗೋಲ್ಡನ್ ಆಸ್ಪತ್ರೆಯ ಐಸಿಯುನಲ್ಲಿದ್ದ ಸುಮಾರು 20 ರೋಗಿಗಳು ಆಮ್ಲಜನಕ ಕೊರತೆಯಿಂದ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಇಂದು ಬೆಳಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜೈಪುರ ಗೋಲ್ಡನ್ ಆಸ್ಪತ್ರೆ ನಿರ್ದೇಶಕರಾದ ಡಾ. ಡಿ.ಕೆ.ಬಾಲುಜಾ, ನಮಗೆ ನಿನ್ನೆ 3600 ಮೆಟ್ರಿಕ್​ ಟನ್​ಗಳಷ್ಟು ಆಕ್ಸಿಜನ್ ಬರಬೇಕಿತ್ತು. ಆದರೆ ಕೇವಲ 1500 ಲೀಟರ್​ಗಳನ್ನಷ್ಟೇ ನೀಡಲಾಗಿತ್ತು. ನಿನ್ನೆ ರಾತ್ರಿ ಸುಮಾರು 20 ರೋಗಿಗಳು ಆಕ್ಸಿಜನ್​ ಕೊರತೆಯಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಹಾಗೇ, ವೈದ್ಯಕೀಯ ಆಮ್ಲಜನಕವನ್ನು ಶೀಘ್ರವೇ ಪೂರೈಸಿ ಎಂದು ಶನಿವಾರ ಮುಂಜಾನೆ ದೆಹಲಿ ಸರ್ಕಾರಕ್ಕೆ ಒಂದು ಎಸ್​ಒಎಸ್​ ಕೂಡ ಕಳಿಸಿದ್ದಾಗಿ ತಿಳಿಸಿದ್ದಾರೆ.

ದೆಹಲಿಯಾದ್ಯಂತ ಹಲವು ಸಣ್ಣಸಣ್ಣ ಆಸ್ಪತ್ರೆಗಳಲ್ಲಿ ಆಮ್ಲಜನಕ ಕೊರತೆ ಎದುರಾಗಿದೆ. ಜೈಪುರ ಗೋಲ್ಡನ್​ ಆಸ್ಪತ್ರೆಗೂ ಮೊದಲು ದೆಹಲಿಯ ಗಂಗಾರಾಮ ಆಸ್ಪತ್ರೆಯಲ್ಲಿ 25 ರೋಗಿಗಳು ಆಕ್ಸಿಜನ್​ ಇಲ್ಲದೆ ಸಾವನ್ನಪ್ಪಿದ್ದಾರೆ. ದೆಹಲಿಯ ಮ್ಯಾಕ್ಸ್ ಆಸ್ಪತ್ರೆಯೂ ಕೂಡ ತಮ್ಮಲ್ಲಿ ಆಕ್ಸಿಜನ್​ಅಭಾವ ಇದೆ ಎಂದು ಸರ್ಕಾರಕ್ಕೆ ತಿಳಿಸಿದೆ. ಒಂದೊಮ್ಮೆ ವೈದ್ಯಕೀಯ ಆಕ್ಸಿಜನ್​ ಪೂರ್ತಿಯಾಗಿ ಖಾಲಿ ಆದರೆ 700 ರೋಗಿಗಳ ಜೀವ ಅಪಾಯದಲ್ಲಿರುತ್ತದೆ ಎಂದೂ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಎಫೆಕ್ಟ್​: 15 ಕೆಜಿ ಟೊಮ್ಯಾಟೋಗೆ ಕೇವಲ 15 ರೂಪಾಯಿ; ಮನನೊಂದ ರೈತನಿಂದ ಫಸಲು ತುಂಬಿದ ಹೊಲ ನಾಶ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎನ್​.ವಿ.ರಮಣ ಪ್ರಮಾಣವಚನ ಸ್ವೀಕಾರ

Published On - 12:19 pm, Sat, 24 April 21

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ