Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರರಾಜಧಾನಿಯಲ್ಲಿ ವೈದ್ಯಕೀಯ ಆಕ್ಸಿಜನ್​ ಅಭಾವದ ಭೀಕರತೆ; ಜೈಪುರ ಗೋಲ್ಡನ್​ ಆಸ್ಪತ್ರೆಯಲ್ಲಿ 25 ರೋಗಿಗಳು ಸಾವು

ದೆಹಲಿಯಾದ್ಯಂತ ಹಲವು ಸಣ್ಣಸಣ್ಣ ಆಸ್ಪತ್ರೆಗಳಲ್ಲಿ ಆಮ್ಲಜನಕ ಕೊರತೆ ಎದುರಾಗಿದೆ. ಜೈಪುರ ಗೋಲ್ಡನ್​ ಆಸ್ಪತ್ರೆಗೂ ಮೊದಲು ದೆಹಲಿಯ ಗಂಗಾರಾಮ ಆಸ್ಪತ್ರೆಯಲ್ಲಿ 25 ರೋಗಿಗಳು ಆಕ್ಸಿಜನ್​ ಇಲ್ಲದೆ ಸಾವನ್ನಪ್ಪಿದ್ದಾರೆ.

ರಾಷ್ಟ್ರರಾಜಧಾನಿಯಲ್ಲಿ ವೈದ್ಯಕೀಯ ಆಕ್ಸಿಜನ್​ ಅಭಾವದ ಭೀಕರತೆ; ಜೈಪುರ ಗೋಲ್ಡನ್​ ಆಸ್ಪತ್ರೆಯಲ್ಲಿ 25 ರೋಗಿಗಳು ಸಾವು
ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on:Apr 24, 2021 | 1:43 PM

ದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವೈದ್ಯಕೀಯ ಆಕ್ಸಿಜನ್ ಅಭಾವದ ಭೀಕರತೆ ದಿನದಿನಕ್ಕೂ ಹೆಚ್ಚುತ್ತಿದೆ. ದೆಹಲಿಯ ಜೈಪುರ ಗೋಲ್ಡನ್ ಆಸ್ಪತ್ರೆಯ ಐಸಿಯುನಲ್ಲಿದ್ದ ಸುಮಾರು 20 ರೋಗಿಗಳು ಆಮ್ಲಜನಕ ಕೊರತೆಯಿಂದ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಇಂದು ಬೆಳಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜೈಪುರ ಗೋಲ್ಡನ್ ಆಸ್ಪತ್ರೆ ನಿರ್ದೇಶಕರಾದ ಡಾ. ಡಿ.ಕೆ.ಬಾಲುಜಾ, ನಮಗೆ ನಿನ್ನೆ 3600 ಮೆಟ್ರಿಕ್​ ಟನ್​ಗಳಷ್ಟು ಆಕ್ಸಿಜನ್ ಬರಬೇಕಿತ್ತು. ಆದರೆ ಕೇವಲ 1500 ಲೀಟರ್​ಗಳನ್ನಷ್ಟೇ ನೀಡಲಾಗಿತ್ತು. ನಿನ್ನೆ ರಾತ್ರಿ ಸುಮಾರು 20 ರೋಗಿಗಳು ಆಕ್ಸಿಜನ್​ ಕೊರತೆಯಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಹಾಗೇ, ವೈದ್ಯಕೀಯ ಆಮ್ಲಜನಕವನ್ನು ಶೀಘ್ರವೇ ಪೂರೈಸಿ ಎಂದು ಶನಿವಾರ ಮುಂಜಾನೆ ದೆಹಲಿ ಸರ್ಕಾರಕ್ಕೆ ಒಂದು ಎಸ್​ಒಎಸ್​ ಕೂಡ ಕಳಿಸಿದ್ದಾಗಿ ತಿಳಿಸಿದ್ದಾರೆ.

ದೆಹಲಿಯಾದ್ಯಂತ ಹಲವು ಸಣ್ಣಸಣ್ಣ ಆಸ್ಪತ್ರೆಗಳಲ್ಲಿ ಆಮ್ಲಜನಕ ಕೊರತೆ ಎದುರಾಗಿದೆ. ಜೈಪುರ ಗೋಲ್ಡನ್​ ಆಸ್ಪತ್ರೆಗೂ ಮೊದಲು ದೆಹಲಿಯ ಗಂಗಾರಾಮ ಆಸ್ಪತ್ರೆಯಲ್ಲಿ 25 ರೋಗಿಗಳು ಆಕ್ಸಿಜನ್​ ಇಲ್ಲದೆ ಸಾವನ್ನಪ್ಪಿದ್ದಾರೆ. ದೆಹಲಿಯ ಮ್ಯಾಕ್ಸ್ ಆಸ್ಪತ್ರೆಯೂ ಕೂಡ ತಮ್ಮಲ್ಲಿ ಆಕ್ಸಿಜನ್​ಅಭಾವ ಇದೆ ಎಂದು ಸರ್ಕಾರಕ್ಕೆ ತಿಳಿಸಿದೆ. ಒಂದೊಮ್ಮೆ ವೈದ್ಯಕೀಯ ಆಕ್ಸಿಜನ್​ ಪೂರ್ತಿಯಾಗಿ ಖಾಲಿ ಆದರೆ 700 ರೋಗಿಗಳ ಜೀವ ಅಪಾಯದಲ್ಲಿರುತ್ತದೆ ಎಂದೂ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಎಫೆಕ್ಟ್​: 15 ಕೆಜಿ ಟೊಮ್ಯಾಟೋಗೆ ಕೇವಲ 15 ರೂಪಾಯಿ; ಮನನೊಂದ ರೈತನಿಂದ ಫಸಲು ತುಂಬಿದ ಹೊಲ ನಾಶ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎನ್​.ವಿ.ರಮಣ ಪ್ರಮಾಣವಚನ ಸ್ವೀಕಾರ

Published On - 12:19 pm, Sat, 24 April 21

ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!