AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರರಾಜಧಾನಿಯಲ್ಲಿ ವೈದ್ಯಕೀಯ ಆಕ್ಸಿಜನ್​ ಅಭಾವದ ಭೀಕರತೆ; ಜೈಪುರ ಗೋಲ್ಡನ್​ ಆಸ್ಪತ್ರೆಯಲ್ಲಿ 25 ರೋಗಿಗಳು ಸಾವು

ದೆಹಲಿಯಾದ್ಯಂತ ಹಲವು ಸಣ್ಣಸಣ್ಣ ಆಸ್ಪತ್ರೆಗಳಲ್ಲಿ ಆಮ್ಲಜನಕ ಕೊರತೆ ಎದುರಾಗಿದೆ. ಜೈಪುರ ಗೋಲ್ಡನ್​ ಆಸ್ಪತ್ರೆಗೂ ಮೊದಲು ದೆಹಲಿಯ ಗಂಗಾರಾಮ ಆಸ್ಪತ್ರೆಯಲ್ಲಿ 25 ರೋಗಿಗಳು ಆಕ್ಸಿಜನ್​ ಇಲ್ಲದೆ ಸಾವನ್ನಪ್ಪಿದ್ದಾರೆ.

ರಾಷ್ಟ್ರರಾಜಧಾನಿಯಲ್ಲಿ ವೈದ್ಯಕೀಯ ಆಕ್ಸಿಜನ್​ ಅಭಾವದ ಭೀಕರತೆ; ಜೈಪುರ ಗೋಲ್ಡನ್​ ಆಸ್ಪತ್ರೆಯಲ್ಲಿ 25 ರೋಗಿಗಳು ಸಾವು
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:Apr 24, 2021 | 1:43 PM

Share

ದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವೈದ್ಯಕೀಯ ಆಕ್ಸಿಜನ್ ಅಭಾವದ ಭೀಕರತೆ ದಿನದಿನಕ್ಕೂ ಹೆಚ್ಚುತ್ತಿದೆ. ದೆಹಲಿಯ ಜೈಪುರ ಗೋಲ್ಡನ್ ಆಸ್ಪತ್ರೆಯ ಐಸಿಯುನಲ್ಲಿದ್ದ ಸುಮಾರು 20 ರೋಗಿಗಳು ಆಮ್ಲಜನಕ ಕೊರತೆಯಿಂದ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಇಂದು ಬೆಳಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜೈಪುರ ಗೋಲ್ಡನ್ ಆಸ್ಪತ್ರೆ ನಿರ್ದೇಶಕರಾದ ಡಾ. ಡಿ.ಕೆ.ಬಾಲುಜಾ, ನಮಗೆ ನಿನ್ನೆ 3600 ಮೆಟ್ರಿಕ್​ ಟನ್​ಗಳಷ್ಟು ಆಕ್ಸಿಜನ್ ಬರಬೇಕಿತ್ತು. ಆದರೆ ಕೇವಲ 1500 ಲೀಟರ್​ಗಳನ್ನಷ್ಟೇ ನೀಡಲಾಗಿತ್ತು. ನಿನ್ನೆ ರಾತ್ರಿ ಸುಮಾರು 20 ರೋಗಿಗಳು ಆಕ್ಸಿಜನ್​ ಕೊರತೆಯಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಹಾಗೇ, ವೈದ್ಯಕೀಯ ಆಮ್ಲಜನಕವನ್ನು ಶೀಘ್ರವೇ ಪೂರೈಸಿ ಎಂದು ಶನಿವಾರ ಮುಂಜಾನೆ ದೆಹಲಿ ಸರ್ಕಾರಕ್ಕೆ ಒಂದು ಎಸ್​ಒಎಸ್​ ಕೂಡ ಕಳಿಸಿದ್ದಾಗಿ ತಿಳಿಸಿದ್ದಾರೆ.

ದೆಹಲಿಯಾದ್ಯಂತ ಹಲವು ಸಣ್ಣಸಣ್ಣ ಆಸ್ಪತ್ರೆಗಳಲ್ಲಿ ಆಮ್ಲಜನಕ ಕೊರತೆ ಎದುರಾಗಿದೆ. ಜೈಪುರ ಗೋಲ್ಡನ್​ ಆಸ್ಪತ್ರೆಗೂ ಮೊದಲು ದೆಹಲಿಯ ಗಂಗಾರಾಮ ಆಸ್ಪತ್ರೆಯಲ್ಲಿ 25 ರೋಗಿಗಳು ಆಕ್ಸಿಜನ್​ ಇಲ್ಲದೆ ಸಾವನ್ನಪ್ಪಿದ್ದಾರೆ. ದೆಹಲಿಯ ಮ್ಯಾಕ್ಸ್ ಆಸ್ಪತ್ರೆಯೂ ಕೂಡ ತಮ್ಮಲ್ಲಿ ಆಕ್ಸಿಜನ್​ಅಭಾವ ಇದೆ ಎಂದು ಸರ್ಕಾರಕ್ಕೆ ತಿಳಿಸಿದೆ. ಒಂದೊಮ್ಮೆ ವೈದ್ಯಕೀಯ ಆಕ್ಸಿಜನ್​ ಪೂರ್ತಿಯಾಗಿ ಖಾಲಿ ಆದರೆ 700 ರೋಗಿಗಳ ಜೀವ ಅಪಾಯದಲ್ಲಿರುತ್ತದೆ ಎಂದೂ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಎಫೆಕ್ಟ್​: 15 ಕೆಜಿ ಟೊಮ್ಯಾಟೋಗೆ ಕೇವಲ 15 ರೂಪಾಯಿ; ಮನನೊಂದ ರೈತನಿಂದ ಫಸಲು ತುಂಬಿದ ಹೊಲ ನಾಶ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎನ್​.ವಿ.ರಮಣ ಪ್ರಮಾಣವಚನ ಸ್ವೀಕಾರ

Published On - 12:19 pm, Sat, 24 April 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ