AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರರಾಜಧಾನಿಯಲ್ಲಿ ವೈದ್ಯಕೀಯ ಆಕ್ಸಿಜನ್​ ಅಭಾವದ ಭೀಕರತೆ; ಜೈಪುರ ಗೋಲ್ಡನ್​ ಆಸ್ಪತ್ರೆಯಲ್ಲಿ 25 ರೋಗಿಗಳು ಸಾವು

ದೆಹಲಿಯಾದ್ಯಂತ ಹಲವು ಸಣ್ಣಸಣ್ಣ ಆಸ್ಪತ್ರೆಗಳಲ್ಲಿ ಆಮ್ಲಜನಕ ಕೊರತೆ ಎದುರಾಗಿದೆ. ಜೈಪುರ ಗೋಲ್ಡನ್​ ಆಸ್ಪತ್ರೆಗೂ ಮೊದಲು ದೆಹಲಿಯ ಗಂಗಾರಾಮ ಆಸ್ಪತ್ರೆಯಲ್ಲಿ 25 ರೋಗಿಗಳು ಆಕ್ಸಿಜನ್​ ಇಲ್ಲದೆ ಸಾವನ್ನಪ್ಪಿದ್ದಾರೆ.

ರಾಷ್ಟ್ರರಾಜಧಾನಿಯಲ್ಲಿ ವೈದ್ಯಕೀಯ ಆಕ್ಸಿಜನ್​ ಅಭಾವದ ಭೀಕರತೆ; ಜೈಪುರ ಗೋಲ್ಡನ್​ ಆಸ್ಪತ್ರೆಯಲ್ಲಿ 25 ರೋಗಿಗಳು ಸಾವು
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:Apr 24, 2021 | 1:43 PM

Share

ದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವೈದ್ಯಕೀಯ ಆಕ್ಸಿಜನ್ ಅಭಾವದ ಭೀಕರತೆ ದಿನದಿನಕ್ಕೂ ಹೆಚ್ಚುತ್ತಿದೆ. ದೆಹಲಿಯ ಜೈಪುರ ಗೋಲ್ಡನ್ ಆಸ್ಪತ್ರೆಯ ಐಸಿಯುನಲ್ಲಿದ್ದ ಸುಮಾರು 20 ರೋಗಿಗಳು ಆಮ್ಲಜನಕ ಕೊರತೆಯಿಂದ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಇಂದು ಬೆಳಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜೈಪುರ ಗೋಲ್ಡನ್ ಆಸ್ಪತ್ರೆ ನಿರ್ದೇಶಕರಾದ ಡಾ. ಡಿ.ಕೆ.ಬಾಲುಜಾ, ನಮಗೆ ನಿನ್ನೆ 3600 ಮೆಟ್ರಿಕ್​ ಟನ್​ಗಳಷ್ಟು ಆಕ್ಸಿಜನ್ ಬರಬೇಕಿತ್ತು. ಆದರೆ ಕೇವಲ 1500 ಲೀಟರ್​ಗಳನ್ನಷ್ಟೇ ನೀಡಲಾಗಿತ್ತು. ನಿನ್ನೆ ರಾತ್ರಿ ಸುಮಾರು 20 ರೋಗಿಗಳು ಆಕ್ಸಿಜನ್​ ಕೊರತೆಯಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಹಾಗೇ, ವೈದ್ಯಕೀಯ ಆಮ್ಲಜನಕವನ್ನು ಶೀಘ್ರವೇ ಪೂರೈಸಿ ಎಂದು ಶನಿವಾರ ಮುಂಜಾನೆ ದೆಹಲಿ ಸರ್ಕಾರಕ್ಕೆ ಒಂದು ಎಸ್​ಒಎಸ್​ ಕೂಡ ಕಳಿಸಿದ್ದಾಗಿ ತಿಳಿಸಿದ್ದಾರೆ.

ದೆಹಲಿಯಾದ್ಯಂತ ಹಲವು ಸಣ್ಣಸಣ್ಣ ಆಸ್ಪತ್ರೆಗಳಲ್ಲಿ ಆಮ್ಲಜನಕ ಕೊರತೆ ಎದುರಾಗಿದೆ. ಜೈಪುರ ಗೋಲ್ಡನ್​ ಆಸ್ಪತ್ರೆಗೂ ಮೊದಲು ದೆಹಲಿಯ ಗಂಗಾರಾಮ ಆಸ್ಪತ್ರೆಯಲ್ಲಿ 25 ರೋಗಿಗಳು ಆಕ್ಸಿಜನ್​ ಇಲ್ಲದೆ ಸಾವನ್ನಪ್ಪಿದ್ದಾರೆ. ದೆಹಲಿಯ ಮ್ಯಾಕ್ಸ್ ಆಸ್ಪತ್ರೆಯೂ ಕೂಡ ತಮ್ಮಲ್ಲಿ ಆಕ್ಸಿಜನ್​ಅಭಾವ ಇದೆ ಎಂದು ಸರ್ಕಾರಕ್ಕೆ ತಿಳಿಸಿದೆ. ಒಂದೊಮ್ಮೆ ವೈದ್ಯಕೀಯ ಆಕ್ಸಿಜನ್​ ಪೂರ್ತಿಯಾಗಿ ಖಾಲಿ ಆದರೆ 700 ರೋಗಿಗಳ ಜೀವ ಅಪಾಯದಲ್ಲಿರುತ್ತದೆ ಎಂದೂ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಎಫೆಕ್ಟ್​: 15 ಕೆಜಿ ಟೊಮ್ಯಾಟೋಗೆ ಕೇವಲ 15 ರೂಪಾಯಿ; ಮನನೊಂದ ರೈತನಿಂದ ಫಸಲು ತುಂಬಿದ ಹೊಲ ನಾಶ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎನ್​.ವಿ.ರಮಣ ಪ್ರಮಾಣವಚನ ಸ್ವೀಕಾರ

Published On - 12:19 pm, Sat, 24 April 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ