AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರರಾಜಧಾನಿಯಲ್ಲಿ ವೈದ್ಯಕೀಯ ಆಕ್ಸಿಜನ್​ ಅಭಾವದ ಭೀಕರತೆ; ಜೈಪುರ ಗೋಲ್ಡನ್​ ಆಸ್ಪತ್ರೆಯಲ್ಲಿ 25 ರೋಗಿಗಳು ಸಾವು

ದೆಹಲಿಯಾದ್ಯಂತ ಹಲವು ಸಣ್ಣಸಣ್ಣ ಆಸ್ಪತ್ರೆಗಳಲ್ಲಿ ಆಮ್ಲಜನಕ ಕೊರತೆ ಎದುರಾಗಿದೆ. ಜೈಪುರ ಗೋಲ್ಡನ್​ ಆಸ್ಪತ್ರೆಗೂ ಮೊದಲು ದೆಹಲಿಯ ಗಂಗಾರಾಮ ಆಸ್ಪತ್ರೆಯಲ್ಲಿ 25 ರೋಗಿಗಳು ಆಕ್ಸಿಜನ್​ ಇಲ್ಲದೆ ಸಾವನ್ನಪ್ಪಿದ್ದಾರೆ.

ರಾಷ್ಟ್ರರಾಜಧಾನಿಯಲ್ಲಿ ವೈದ್ಯಕೀಯ ಆಕ್ಸಿಜನ್​ ಅಭಾವದ ಭೀಕರತೆ; ಜೈಪುರ ಗೋಲ್ಡನ್​ ಆಸ್ಪತ್ರೆಯಲ್ಲಿ 25 ರೋಗಿಗಳು ಸಾವು
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:Apr 24, 2021 | 1:43 PM

Share

ದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವೈದ್ಯಕೀಯ ಆಕ್ಸಿಜನ್ ಅಭಾವದ ಭೀಕರತೆ ದಿನದಿನಕ್ಕೂ ಹೆಚ್ಚುತ್ತಿದೆ. ದೆಹಲಿಯ ಜೈಪುರ ಗೋಲ್ಡನ್ ಆಸ್ಪತ್ರೆಯ ಐಸಿಯುನಲ್ಲಿದ್ದ ಸುಮಾರು 20 ರೋಗಿಗಳು ಆಮ್ಲಜನಕ ಕೊರತೆಯಿಂದ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಇಂದು ಬೆಳಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜೈಪುರ ಗೋಲ್ಡನ್ ಆಸ್ಪತ್ರೆ ನಿರ್ದೇಶಕರಾದ ಡಾ. ಡಿ.ಕೆ.ಬಾಲುಜಾ, ನಮಗೆ ನಿನ್ನೆ 3600 ಮೆಟ್ರಿಕ್​ ಟನ್​ಗಳಷ್ಟು ಆಕ್ಸಿಜನ್ ಬರಬೇಕಿತ್ತು. ಆದರೆ ಕೇವಲ 1500 ಲೀಟರ್​ಗಳನ್ನಷ್ಟೇ ನೀಡಲಾಗಿತ್ತು. ನಿನ್ನೆ ರಾತ್ರಿ ಸುಮಾರು 20 ರೋಗಿಗಳು ಆಕ್ಸಿಜನ್​ ಕೊರತೆಯಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಹಾಗೇ, ವೈದ್ಯಕೀಯ ಆಮ್ಲಜನಕವನ್ನು ಶೀಘ್ರವೇ ಪೂರೈಸಿ ಎಂದು ಶನಿವಾರ ಮುಂಜಾನೆ ದೆಹಲಿ ಸರ್ಕಾರಕ್ಕೆ ಒಂದು ಎಸ್​ಒಎಸ್​ ಕೂಡ ಕಳಿಸಿದ್ದಾಗಿ ತಿಳಿಸಿದ್ದಾರೆ.

ದೆಹಲಿಯಾದ್ಯಂತ ಹಲವು ಸಣ್ಣಸಣ್ಣ ಆಸ್ಪತ್ರೆಗಳಲ್ಲಿ ಆಮ್ಲಜನಕ ಕೊರತೆ ಎದುರಾಗಿದೆ. ಜೈಪುರ ಗೋಲ್ಡನ್​ ಆಸ್ಪತ್ರೆಗೂ ಮೊದಲು ದೆಹಲಿಯ ಗಂಗಾರಾಮ ಆಸ್ಪತ್ರೆಯಲ್ಲಿ 25 ರೋಗಿಗಳು ಆಕ್ಸಿಜನ್​ ಇಲ್ಲದೆ ಸಾವನ್ನಪ್ಪಿದ್ದಾರೆ. ದೆಹಲಿಯ ಮ್ಯಾಕ್ಸ್ ಆಸ್ಪತ್ರೆಯೂ ಕೂಡ ತಮ್ಮಲ್ಲಿ ಆಕ್ಸಿಜನ್​ಅಭಾವ ಇದೆ ಎಂದು ಸರ್ಕಾರಕ್ಕೆ ತಿಳಿಸಿದೆ. ಒಂದೊಮ್ಮೆ ವೈದ್ಯಕೀಯ ಆಕ್ಸಿಜನ್​ ಪೂರ್ತಿಯಾಗಿ ಖಾಲಿ ಆದರೆ 700 ರೋಗಿಗಳ ಜೀವ ಅಪಾಯದಲ್ಲಿರುತ್ತದೆ ಎಂದೂ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಎಫೆಕ್ಟ್​: 15 ಕೆಜಿ ಟೊಮ್ಯಾಟೋಗೆ ಕೇವಲ 15 ರೂಪಾಯಿ; ಮನನೊಂದ ರೈತನಿಂದ ಫಸಲು ತುಂಬಿದ ಹೊಲ ನಾಶ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎನ್​.ವಿ.ರಮಣ ಪ್ರಮಾಣವಚನ ಸ್ವೀಕಾರ

Published On - 12:19 pm, Sat, 24 April 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್