AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: 20 ವರ್ಷದ ಯುವತಿಯ ಬಾಯಿ ಕಟ್ಟಿ, 51 ಬಾರಿ ಇರಿದು ಕೊಂದ ಪಾಗಲ್ ಪ್ರೇಮಿ

ಜಶ್ಪುರ್ ಜಿಲ್ಲೆಯವನಾದ ಆರೋಪಿಯು 3 ವರ್ಷಗಳ ಹಿಂದೆ ಆ ಯುವತಿಯೊಂದಿಗೆ ಪರಿಚಯವಾಗಿದ್ದ. ಬಸ್‌ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದಾಗ ಅದೇ ಬಸ್​ನಲ್ಲಿ ಆ ಯುವತಿ ಕೂಡ ಪ್ರಯಾಣಿಸುತ್ತಿದ್ದಳು.

Crime News: 20 ವರ್ಷದ ಯುವತಿಯ ಬಾಯಿ ಕಟ್ಟಿ, 51 ಬಾರಿ ಇರಿದು ಕೊಂದ ಪಾಗಲ್ ಪ್ರೇಮಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 27, 2022 | 3:35 PM

Share

ಕೊರ್ಬಾ: ಛತ್ತೀಸ್‌ಗಢದ  (Chhattisgarh) ಕೊರ್ಬಾ ಜಿಲ್ಲೆಯಲ್ಲಿ ಪಾಗಲ್ ಪ್ರೇಮಿಯೊಬ್ಬ ತನ್ನೊಂದಿಗೆ ಮಾತನಾಡಲು ನಿರಾಕರಿಸಿದ 20 ವರ್ಷದ ಯುವತಿಯನ್ನು ಕಟ್ಟಿ ಹಾಕಿ, ಆಕೆಯ ಬಾಯಿಯನ್ನು ಮುಚ್ಚಿ, 51 ಬಾರಿ ಸ್ಕ್ರೂಡ್ರೈವರ್‌ನಿಂದ ಇರಿದು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿಸೆಂಬರ್ 24ರಂದು ಸೌತ್ ಈಸ್ಟರ್ನ್ ಕೋಲ್ ಫೀಲ್ಡ್ ಲಿಮಿಟೆಡ್ (SECL) ಪಂಪ್ ಹೌಸ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಆರೋಪಿ ಯುವಕ ಅಲ್ಲಿಗೆ ಬಂದಾಗ ಆ ಯುವತಿ ಮನೆಯಲ್ಲಿ ಒಬ್ಬಳೇ ಇದ್ದಳು. ಆಕೆಯ ಕಿರುಚಾಟವನ್ನು ತಡೆಯಲು ಆಕೆಯ ಬಾಯಿಗೆ ಬಟ್ಟೆ ತುರುಕಿ, ಆಕೆಗೆ ಸ್ಕ್ರೂ ಡ್ರೈವರ್‌ನಿಂದ 51 ಬಾರಿ ಇರಿದಿದ್ದಾನೆ. ಇದರಿಂದ ಆ ಯುವತಿ ಸಾವನ್ನಪ್ಪಿದ್ದಾಳೆ.

ಆ ಯುವತಿಯ ತಮ್ಮ ಸಂಜೆ ಮನೆಗೆ ಬಂದಾಗ ಆಕೆ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ಗಾಬರಿಯಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಜಶ್ಪುರ್ ಜಿಲ್ಲೆಯವನಾದ ಆರೋಪಿಯು 3 ವರ್ಷಗಳ ಹಿಂದೆ ಆ ಯುವತಿಯೊಂದಿಗೆ ಪರಿಚಯವಾಗಿದ್ದ. ಬಸ್‌ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದಾಗ ಅದೇ ಬಸ್​ನಲ್ಲಿ ಆ ಯುವತಿ ಕೂಡ ಪ್ರಯಾಣಿಸುತ್ತಿದ್ದಳು. ಆಗ ಅವರಿಬ್ಬರಿಗೂ ಪರಿಚಯವಾಗಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿ ಯುವಕ ನಂತರ ಕೆಲಸಕ್ಕಾಗಿ ಗುಜರಾತ್‌ನ ಅಹಮದಾಬಾದ್‌ಗೆ ತೆರಳಿದ್ದ. ಆಮೇಲೆ ಅವರಿಬ್ಬರೂ ಫೋನ್‌ನಲ್ಲಿ ಸಂಪರ್ಕದಲ್ಲಿದ್ದರು. ಆ ಯುವತಿ ಆತನೊಂದಿಗೆ ಫೋನ್‌ನಲ್ಲಿ ಮಾತನಾಡುವುದನ್ನು ನಿಲ್ಲಿಸಿದ ನಂತರ ಆ ಯುವಕ ಆಕೆಯ ಪೋಷಕರಿಗೂ ಬೆದರಿಕೆ ಹಾಕಿದ್ದ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಆಸ್ತಿಗಾಗಿ ತಮ್ಮನ ಮರ್ಡರ್, 3 ದಿನಗಳ ಬಳಿಕ ಶವ ಪತ್ತೆ, ಕೊಲೆ ರಹಸ್ಯ ಬೇಧಿಸಿದ ಸೊರಬ ಪೊಲೀಸರು

ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ ಆರೋಪಿಯ ಪತ್ತೆಗೆ 4 ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:31 pm, Tue, 27 December 22

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'