AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್​ನಿಂದ ಸೆಪ್ಟೆಂಬರ್ ಅವಧಿಯಲ್ಲಿ ದೇಶದಲ್ಲಿ 200 ಕೋಟಿ ಡೋಸ್ ಕೊವಿಡ್ ಲಸಿಕೆ ದೊರೆಯುವ ಸಾಧ್ಯತೆ

ದೇಶದಲ್ಲಿ ನಡೆಯುತ್ತಿರುವ ಕೊವಿಡ್ ವಿರುದ್ಧದ ಹೋರಾಟದಲ್ಲಿ ಈ ಲಸಿಕೆಗಳು ಬಹುಮುಖ್ಯ ಪಾತ್ರ ವಹಿಸಲಿವೆ ಎಂದು ಹೇಳಲಾಗಿದೆ.

ಆಗಸ್ಟ್​ನಿಂದ ಸೆಪ್ಟೆಂಬರ್ ಅವಧಿಯಲ್ಲಿ ದೇಶದಲ್ಲಿ 200 ಕೋಟಿ ಡೋಸ್ ಕೊವಿಡ್ ಲಸಿಕೆ ದೊರೆಯುವ ಸಾಧ್ಯತೆ
ಡಾ. ವಿ.ಕೆ.ಪೌಲ್​
guruganesh bhat
|

Updated on:May 13, 2021 | 9:19 PM

Share

ದೆಹಲಿ: ಮುಂದಿನ ಆಗಸ್ಟ್ ತಿಂಗಳಿಂದ ಡಿಸೆಂಬರ್ ತಿಂಗಳ ನಡುವೆ 200 ಕೋಟಿ ಡೋಸ್​ಗೂ ಹೆಚ್ಚು ಕೊವಿಡ್ ಲಸಿಕೆ ಭಾರತದಲ್ಲಿ ಲಭ್ಯವಾಗಲಿವೆ ಎಂದು ಕೇಂದ್ರ ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ. ದೇಶದಲ್ಲಿ ನಡೆಯುತ್ತಿರುವ ಕೊವಿಡ್ ವಿರುದ್ಧದ ಹೋರಾಟದಲ್ಲಿ ಈ ಲಸಿಕೆಗಳು ಬಹುಮುಖ್ಯ ಪಾತ್ರ ವಹಿಸಲಿವೆ ಎಂದು ಹೇಳಲಾಗಿದೆ.

ಈ ಲಸಿಕೆಗಳ ಪೈಕಿ ಸೇರಮ್ ಇನ್ಸ್​ಟಿಟ್ಯೂಟ್​ನ 75 ಕೋಟಿ ಡೋಸ್​ ಆಸ್ಟ್ರೋಜೆನೆಕಾ, ಭಾರತ್ ಬಯೋಟೆಕ್​ನ 55 ಕೋಟಿ ಡೋಸ್ ಕೋವ್ಯಾಕ್ಸಿನ್​ ಲಸಿಕೆ ಇರಲಿದೆ ಎಂದು ನೀತಿ ಆಯೋಗದ ಸದಸ್ಯ ವಿ.ಕೆ.ಪೌಲ್ ತಿಳಿಸಿದ್ದಾರೆ. ಒಟ್ಟು 216 ಕೋಟಿ ಡೋಸ್ ಲಸಿಕೆಗಳನ್ನು ಮುಂದಿನ ಅಗಸ್ಟ್​ನಿಂದ ಸೆಪ್ಟೆಂಬರ್​ ಅವಧಿಯಲ್ಲಿ ಉತ್ಪಾದನೆಯಾಗಲಿವೆ. ಇದು ದೇಶದ ಜನರನ್ನು ಕೊವಿಡ್​ನಿಂದ ರಕ್ಷಿಸಲು ಸಹಕಾರಿಯಾಗಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ. ಮುಂದಿನ ವರ್ಷದ ಮೊದಲ ತ್ರೈಮಾಸಿಕದ ವೇಳೆಗೆ 300 ಕೋಟಿ ಡೋಸ್ ಲಸಿಕೆ ಉತ್ಪಾದನೆಯಾಗಲಿದೆ ಎಂದು ಸಹ ಅವರು ತಿಳಿಸಿದ್ದಾರೆ.

ಮುಂದಿನ ಈ ಅವಧಿಗಳಲ್ಲಿ ಉತ್ಪಾದನೆ ಆಗಲಿರುವ ಲಸಿಕೆಗಳ ಪೈಕಿ ಬಯಾಲಾಜಿಕಲ್ ಇ ಸಂಸ್ಥೆಯ 30 ಕೋಟಿ ಲಸಿಕೆ, ಸೇರಮ್ ಇನ್ಸ್​ಟಿಟ್ಯೂಟ್​ನ 20 ಕೋಟಿ ನೊವಾವಾಕ್ಸ್ ಲಸಿಕೆ, 16 ಕೋಟಿ ಡೋಸ್ ಸ್ಪುಟ್ನಿಕ್ ವಿ ಲಸಿಕೆ, ಭಾರತ್ ಬಯೋಟೆಕ್​ನ 10 ಕೋಟಿ ಡೋಸ್ ನಸಲ್ ಲಸಿಕೆ, ಝೈಡಸ್ ಕ್ಯಾಡಿಲ್​ಲಾದ 5 ಕೋಟಿ ಡೋಸ್ ಲಸಿಕೆ, ಜಿನ್ನೋವಾದ 6 ಕೋಟಿ ಡೋಸ್ ಲಸಿಕೆಯೂ ಇರಲಿದೆ. ಅಮೆರಿಕಾ ಒಪ್ಪಿಗೆ ನೀಡಿದ ಯಾವುದೇ ಲಸಿಕೆಯನ್ನು ಭಾರತದಲ್ಲೂ ಬಳಕೆ ಮಾಡಬಹುದು. ಲಸಿಕೆ ಆಮದಿಗೆ ಸರ್ಕಾರ ಯಾವುದೇ ಸುಂಕ ವಿಧಿಸುತ್ತಿಲ್ಲ. ಒಂದೆರಡು ದಿನಗಳಲ್ಲಿಯೇ ಪರವಾನಗಿಯನ್ನೂ ನೀಡಲಾಗುತ್ತದೆ ಎಂದು ನೀತಿ ಆಯೋಗದ ಸದಸ್ಯ ವಿ.ಕೆ.ಪೌಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಕೊವಿಡ್ ನಿಯಂತ್ರಣ ಮತ್ತು ಲಸಿಕೆ ಬಳಕೆ ಬಗ್ಗೆ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿಯ ಪ್ರಮುಖಾಂಶಗಳು

Karnataka SSLC Exam 2021: ಜೂ.21ರಿಂದ ಪ್ರಾರಂಭವಾಗಬೇಕಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆ ಮುಂದೂಡಿಕೆ

(200 Crore Covid 19 shots to be available by end of 2021 says Union govt) 

Published On - 9:15 pm, Thu, 13 May 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?