AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಿರುದ್ಧದ ಸಮರಕ್ಕೆ ಸಿಕ್ತು ಆನೆ ಬಲ!

ದೆಹಲಿ: ಕೊರೊನಾ ವಿರುದ್ಧ ಹೋರಾಡುತ್ತಿರುವ ಭಾರತದ ವೈದ್ಯಕೀಯ ಕ್ಷೇತ್ರಕ್ಕೆ ಇಂದು ಆನೆ ಬಲ ಸಿಕ್ಕಂತಾಗಿದೆ. ಹೌದು, ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಸೋಂಕಿತರ ಪ್ರಾಣ ಉಳಿಸಲು ಬಳಸುವ ವೆಂಟಿಲೇಟರ್​ಗಳ ಖರೀದಿಗೆ ಪ್ರಧಾನಿ ಮೋದಿಯವರ ಪಿ.ಎಂ ಕೇರ್​ ನಿಧಿಯಿಂದ 2,000 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಲಾಗಿದೆ. ಪ್ರಧಾನಮಂತ್ರಿಗಳ ಕಾರ್ಯಾಲಯದಿಂದ ಬಿಡುಗಡೆಯಾಗಿರುವ ಮಾಧ್ಯಮ ಪ್ರಕಟಣೆಯ ಪ್ರಕಾರ 50,000 ಕೃತಕ ಉಸಿರಾಟದ ಯಂತ್ರವಾದ ವೆಂಟಿಲೇಟರ್​ಗಳ​ ಖರೀದಿಗೆ ಈ ಅನುದಾನ ನೀಡಲಾಗಿದೆ. ಜೊತೆಗೆ ಈಗಾಗಲೇ 2,923 ವೆಂಟಿಲೇಟರ್​ಗಳು ತಯಾರಾಗಿವೆ. ವಿವಿಧ ರಾಜ್ಯಗಳಿಗೆ 1,340 […]

ಕೊರೊನಾ ವಿರುದ್ಧದ ಸಮರಕ್ಕೆ ಸಿಕ್ತು ಆನೆ ಬಲ!
KUSHAL V
| Edited By: |

Updated on:Jun 23, 2020 | 1:55 PM

Share

ದೆಹಲಿ: ಕೊರೊನಾ ವಿರುದ್ಧ ಹೋರಾಡುತ್ತಿರುವ ಭಾರತದ ವೈದ್ಯಕೀಯ ಕ್ಷೇತ್ರಕ್ಕೆ ಇಂದು ಆನೆ ಬಲ ಸಿಕ್ಕಂತಾಗಿದೆ. ಹೌದು, ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಸೋಂಕಿತರ ಪ್ರಾಣ ಉಳಿಸಲು ಬಳಸುವ ವೆಂಟಿಲೇಟರ್​ಗಳ ಖರೀದಿಗೆ ಪ್ರಧಾನಿ ಮೋದಿಯವರ ಪಿ.ಎಂ ಕೇರ್​ ನಿಧಿಯಿಂದ 2,000 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಲಾಗಿದೆ.

ಪ್ರಧಾನಮಂತ್ರಿಗಳ ಕಾರ್ಯಾಲಯದಿಂದ ಬಿಡುಗಡೆಯಾಗಿರುವ ಮಾಧ್ಯಮ ಪ್ರಕಟಣೆಯ ಪ್ರಕಾರ 50,000 ಕೃತಕ ಉಸಿರಾಟದ ಯಂತ್ರವಾದ ವೆಂಟಿಲೇಟರ್​ಗಳ​ ಖರೀದಿಗೆ ಈ ಅನುದಾನ ನೀಡಲಾಗಿದೆ. ಜೊತೆಗೆ ಈಗಾಗಲೇ 2,923 ವೆಂಟಿಲೇಟರ್​ಗಳು ತಯಾರಾಗಿವೆ.

ವಿವಿಧ ರಾಜ್ಯಗಳಿಗೆ 1,340 ವೆಂಟಿಲೇಟರ್ ನೀಡಲಾಗಿದ್ದು ಮಹಾರಾಷ್ಟ್ರಗೆ 275, ದೆಹಲಿಗೆ 275, ಗುಜರಾತ್​ಗೆ 175, ಬಿಹಾರಕ್ಕೆ 100, ಕರ್ನಾಟಕಕ್ಕೆ 90, ಹಾಗೂ ರಾಜಸ್ಥಾನಕ್ಕೆ 75 ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿಲಾಗಿದೆ. ಇದಲ್ಲದೆ ಜೂನ್ ಅಂತ್ಯದ ವೇಳೆಗೆ 14,000 ವೆಂಟಿಲೇಟರ್​ ಪೂರೈಕೆಯಾಗುವುದರ ಜೊತೆಗೆ 30 ಸಾವಿರ ವೆಂಟಿಲೇಟರ್ ಖರೀದಿಗೆ ಬಿಇಎಲ್​ಗೆ ಗುತ್ತಿಗೆ ಸಹ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

Published On - 1:46 pm, Tue, 23 June 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ