AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2008ರ ಬಾಟ್ಲಾ ಹೌಸ್ ಎನ್‌ಕೌಂಟರ್; ಆರಿಜ್ ಖಾನ್‌ಗೆ ಗಲ್ಲು ಬದಲು ಜೀವಾವಧಿ ಶಿಕ್ಷೆ: ದೆಹಲಿ ಹೈಕೋರ್ಟ್

ಎನ್‌ಕೌಂಟರ್‌ನ ನಂತರ ಸುಮಾರು ಒಂದು ದಶಕದ ನಂತರ ಓಡಿಹೋಗಿದ್ದ ಆರಿಜ್ ಖಾನ್ ಅಲಿಯಾಸ್ ಜುನೈದ್‌ನನ್ನು 2018 ರಲ್ಲಿ ದೆಹಲಿ ಪೊಲೀಸರ ವಿಶೇಷ ಘಟಕ ಬಂಧಿಸಿತು. ನ್ಯಾಯಮೂರ್ತಿ ಸಿದ್ಧಾರ್ಥ್ ಮೃದುಲ್ ಮತ್ತು ಅಮಿತ್ ಶರ್ಮಾ ನೇತೃತ್ವದ ಪೀಠವು ಶರ್ಮಾ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ತನ್ನ ಅಪರಾಧ ಮತ್ತು ಮರಣದಂಡನೆಯನ್ನು ಪ್ರಶ್ನಿಸಿ ಖಾನ್ ಸಲ್ಲಿಸಿದ ಮೇಲ್ಮನವಿಯ ಮೇಲೆ ಆದೇಶಗಳನ್ನು ಪ್ರಕಟಿಸಿತು.

2008ರ ಬಾಟ್ಲಾ ಹೌಸ್ ಎನ್‌ಕೌಂಟರ್; ಆರಿಜ್ ಖಾನ್‌ಗೆ ಗಲ್ಲು ಬದಲು ಜೀವಾವಧಿ ಶಿಕ್ಷೆ: ದೆಹಲಿ ಹೈಕೋರ್ಟ್
ಆರಿಜ್ ಖಾನ್
Follow us
ರಶ್ಮಿ ಕಲ್ಲಕಟ್ಟ
|

Updated on:Oct 12, 2023 | 4:42 PM

ದೆಹಲಿ ಅಕ್ಟೋಬರ್ 12: 2008ರ ಬಾಟ್ಲಾ ಹೌಸ್ ಎನ್‌ಕೌಂಟರ್ (2008 Batla House Encounter) ಪ್ರಕರಣದಲ್ಲಿ ಇಂಡಿಯನ್ ಮುಜಾಹಿದ್ದೀನ್ ಭಯೋತ್ಪಾದಕ ಆರಿಜ್ ಖಾನ್‌ಗೆ (Ariz Khan) ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ (Delhi high court) ರದ್ದುಗೊಳಿಸಿದೆ. ಇದೀಗ ಮರಣದಂಡನೆಯನ್ನು ಶಿಕ್ಷೆಯನ್ನು ಹೈಕೋರ್ಟ್ ಜೀವಾವಧಿ ಶಿಕ್ಷೆಗೆ ಬದಲಿಸಿದೆ. ದೆಹಲಿಯ ಬಾಟ್ಲಾ ಹೌಸ್‌ನ ಎಲ್ -18 ಫ್ಲಾಟ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ  ಇಬ್ಬರು ಭಯೋತ್ಪಾದಕರು ಮತ್ತು ಒಬ್ಬ ಪೊಲೀಸ್ ಇನ್ಸ್‌ಪೆಕ್ಟರ್ ಮೋಹನ್ ಚಂದ್ ಶರ್ಮಾ ಸಾವಿಗೀಡಾದ ಹದಿನೈದು ವರ್ಷಗಳ ನಂತರ, ದೆಹಲಿ ಹೈಕೋರ್ಟ್ ಗುರುವಾರ ಇಂಡಿಯನ್ ಮುಜಾಹಿದ್ದೀನ್ ಭಯೋತ್ಪಾದಕ ಅರಿಜ್ ಖಾನ್​​ಗೆ ವಿಧಿಸಿದ್ದ ಮರಣದಂಡನೆಯನ್ನು  ಜೀವಾವಧಿ ಶಿಕ್ಷೆಗೆ ಇಳಿಸಿರುವ ತನ್ನ ಆದೇಶವನ್ನು ಪ್ರಕಟಿಸಿದೆ.

ಎನ್‌ಕೌಂಟರ್‌ನ ನಂತರ ಸುಮಾರು ಒಂದು ದಶಕದ ನಂತರ ಓಡಿಹೋಗಿದ್ದ ಆರಿಜ್ ಖಾನ್ ಅಲಿಯಾಸ್ ಜುನೈದ್‌ನನ್ನು 2018 ರಲ್ಲಿ ದೆಹಲಿ ಪೊಲೀಸರ ವಿಶೇಷ ಘಟಕ ಬಂಧಿಸಿತು. ನ್ಯಾಯಮೂರ್ತಿ ಸಿದ್ಧಾರ್ಥ್ ಮೃದುಲ್ ಮತ್ತು ಅಮಿತ್ ಶರ್ಮಾ ನೇತೃತ್ವದ ಪೀಠವು ಶರ್ಮಾ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ತನ್ನ ಅಪರಾಧ ಮತ್ತು ಮರಣದಂಡನೆಯನ್ನು ಪ್ರಶ್ನಿಸಿ ಖಾನ್ ಸಲ್ಲಿಸಿದ ಮೇಲ್ಮನವಿಯ ಮೇಲೆ ಆದೇಶಗಳನ್ನು ಪ್ರಕಟಿಸಿತು.

ಸಾಕೇತ್ ಕೋರ್ಟ್ ಖಾನ್​​ಗೆ ಮರಣದಂಡನೆ ವಿಧಿಸಿತ್ತು

ಮೇ 2021 ರಲ್ಲಿ, ದೆಹಲಿಯ ಸಾಕೇತ್ ನ್ಯಾಯಾಲಯವು ಆಗ್ನೇಯ ದೆಹಲಿಯ ಬಾಟ್ಲಾ ಹೌಸ್‌ನಲ್ಲಿ ಪೊಲೀಸರು ಮತ್ತು ಭಯೋತ್ಪಾದಕರ ನಡುವಿನ ಎನ್‌ಕೌಂಟರ್‌ನಲ್ಲಿ ಶರ್ಮಾ ಹತ್ಯೆಗೆ ಖಾನ್‌ನನ್ನು ದೋಷಿ ಎಂದು ಘೋಷಿಸಿತು. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಂದೀಪ್ ಯಾದವ್ ಅವರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 186, 333, 353, 302, 397 ಮತ್ತು ಆರ್ಮ್ಸ್ ಆಕ್ಟ್ ಸೆಕ್ಷನ್ 27 ರ ಅಡಿಯಲ್ಲಿ ಖಾನ್ ಅವರನ್ನು ಅಪರಾಧಿ ಎಂದು ತೀರ್ಪು ನೀಡಿದ್ದಾರೆ.

ಆದೇಶವನ್ನು ಪ್ರಕಟಿಸುವಾಗ ನ್ಯಾಯಾಲಯವು,ಖಾನ್ ಸಹಚರರೊಂದಿಗೆ ಸ್ವಯಂಪ್ರೇರಣೆಯಿಂದ ಒಬ್ಬ ಎಸ್‌ಐಗೆ ತೀವ್ರ ಗಾಯವನ್ನುಂಟುಮಾಡಿದ್ದಾರೆ ಎಂದು ದಾಖಲೆಯಲ್ಲಿ ಸಾಬೀತಾಗಿದೆ. ಖಾನ್ ಸಹಚರರೊಂದಿಗೆ ಉದ್ದೇಶಪೂರ್ವಕವಾಗಿ ಶರ್ಮಾಗೆ ಗುಂಡಿಟ್ಟು ಹತ್ಯೆಗೈದಿರುವುದು ದಾಖಲೆಗಳಲ್ಲಿ ಸಾಬೀತಾಗಿದೆ ಎಂದಿದೆ.

ಇದನ್ನೂ ಓದಿ: ಬಂಗಾಳದ ಸಚಿವರ ಸೊಸೆಯ ಮೊಬೈಲ್ ಸಂಖ್ಯೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಸುವೇಂದು ಅಧಿಕಾರಿ; ದೂರು ದಾಖಲು

ಡಾಕ್ಯುಮೆಂಟರಿ ಮತ್ತು ವೈಜ್ಞಾನಿಕ ಪುರಾವೆಗಳೊಂದಿಗೆ, ಖಾನ್ ಸಹಚರರು ಶರ್ಮಾ ಅವರನ್ನು ಸಾರ್ವಜನಿಕ ಕಾರ್ಯನಿರ್ವಹಣೆಗೆ ಅಡ್ಡಿಪಡಿಸಿದರು. ಸಾಮಾನ್ಯ ಉದ್ದೇಶದ ಮುಂದುವರಿಕೆಗಾಗಿ ಶರ್ಮಾ ಅವರನ್ನು ಕೊಲ್ಲಲು ಕ್ರಿಮಿನಲ್ ಬಲವನ್ನು ಬಳಸಿದರು ಎಂದು ಪ್ರಾಸಿಕ್ಯೂಷನ್ ಅನುಮಾನವಿಲ್ಲದೆ ಸಾಬೀತುಪಡಿಸಿದೆ ಎಂದು ನ್ಯಾಯಾಲಯ ಹೇಳಿದೆ.

ಖಾನ್ ತನ್ನ ಸಹಚರರೊಂದಿಗೆ ಸ್ವಯಂಪ್ರೇರಣೆಯಿಂದ ಒಬ್ಬ ಎಸ್‌ಐಗೆ ಗಂಭೀರ ಗಾಯವನ್ನುಂಟುಮಾಡಿದ್ದಾನೆ ಎಂಬುದು ಸಾಬೀತಾಗಿದೆ ಎಂದು ನ್ಯಾಯಾಲಯ ಗಮನಿಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:36 pm, Thu, 12 October 23

ಪಾಟ್ನಾದಲ್ಲಿ 1,200 ಕೋಟಿ ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಮೋದಿ
ಪಾಟ್ನಾದಲ್ಲಿ 1,200 ಕೋಟಿ ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಮೋದಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು