AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2016ರ ಹಿಟ್​ ಆ್ಯಂಡ್ ರನ್ ಪ್ರಕರಣ: ಮೃತ ವ್ಯಕ್ತಿಯ ಕುಟುಂಬಕ್ಕೆ 1.96 ಕೋಟಿ ರೂ. ಪರಿಹಾರ

2016ರಲ್ಲಿ ದೆಹಲಿಯಲ್ಲಿ ನಡೆದ ಹಿಟ್​ ಆ್ಯಂಡ್​ ರನ್ ಪ್ರಕರಣದಲ್ಲಿ ಮೃತ ಸಿದ್ಧಾರ್ಥ್​ ಕುಟುಂಬಕ್ಕೆ 1.96 ಕೋಟಿ ರೂ.ಗಳ ಪರಿಹಾರ ನೀಡುವಂತೆ ಇನ್ಶೂರೆನ್ಸ್​ ಕಂಪನಿಗೆ ನ್ಯಾಯಾಲಯ ಸೂಚಿಸಿದೆ.

2016ರ ಹಿಟ್​ ಆ್ಯಂಡ್ ರನ್ ಪ್ರಕರಣ: ಮೃತ ವ್ಯಕ್ತಿಯ ಕುಟುಂಬಕ್ಕೆ 1.96 ಕೋಟಿ ರೂ. ಪರಿಹಾರ
ಸಿದ್ಧಾರ್ಥ್​
ನಯನಾ ರಾಜೀವ್
|

Updated on: Jul 17, 2024 | 10:46 AM

Share

ದೆಹಲಿಯಲ್ಲಿ 2016ರಲ್ಲಿ ನಡೆದ ಹಿಟ್​ ಆ್ಯಂಡ್​ ರನ್ ಪ್ರಕರಣದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 1.96 ಕೋಟಿ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಇನ್ಶೂರೆನ್ಸ್​ ಕಂಪನಿಗೆ ಹೇಳಿದೆ. ಈ ಅಪಘಾತದ ಸಂದರ್ಭದಲ್ಲಿ ಕಾರನ್ನು ಅಪ್ರಾಪ್ತ ಬಾಲಕ ಓಡಿಸುತ್ತಿದ್ದ, ಸಿದ್ಧಾರ್ಥ್​ ಮಾರುಕಟ್ಟೆಯಿಂದ ಮನೆಗೆ ಮರಳುತ್ತಿರುವಾಗ ರಸ್ತೆ ದಾಟುವ ಸಮಯದಲ್ಲಿ ಕಾರು ವೇಗವಾಗಿ ಬಂದು ಡಿಕ್ಕಿ ಹೊಡೆದಿತ್ತು, ಮಾರಣಾಂತಿಕವಾಗಿ ಗಾಯಗೊಂಡಿದ್ದರು, ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.

ಅಪಘಾತದಲ್ಲಿ ಸಾವನ್ನಪ್ಪಿದ್ದ ಸಿದ್ಧಾರ್ಥ್​ ಶರ್ಮಾ ವಯಸ್ಸು ಆಗ 32 ವರ್ಷವಾಗಿತ್ತು, ದೆಹಲಿಯ ಸಿವಿಲ್​ ಲೈನ್ಸ್​ ಪ್ರದೇಶದಲ್ಲಿ ರಸ್ತೆ ದಾಟುತ್ತಿದ್ದಾಗ ಚಾಲಕನ ಅಜಾಗರೂಕ ಚಾಲನೆಯಿಂದ ಸಿದ್ಧಾರ್ಥ್​ ಮಾರಣಾಂತಿಕವಾಗಿ ಗಾಯಗೊಂಡಿದ್ದರು.

ನ್ಯಾಯಾಲಯವು ಅಪ್ರಾಪ್ತ ಬಾಲಕನ ತಂದೆಯನ್ನೇ ಹೊಣೆಗಾರರನ್ನಾಗಿ ಮಾಡಿದೆ. 1.98 ಕೋಟಿ ರೂ. ಸರಿಸುಮಾರು 1.21 ಕೋಟಿ ರೂಪಾಯಿಗಳನ್ನು ಪರಿಹಾರವಾಗಿ ಮತ್ತು ಸುಮಾರು 77.61 ಲಕ್ಷ ರೂಪಾಯಿಗಳನ್ನು ಬಡ್ಡಿಯಾಗಿ ನೀಡುವಂತೆ ನ್ಯಾಯಾಲಯವು ವಿಮಾ ಕಂಪನಿಗೆ ಸೂಚಿಸಿತು.

ಮತ್ತಷ್ಟು ಓದಿ: ಹಿಟ್​ ಆ್ಯಂಡ್​ ರನ್: ಸಿಸಿಟಿವಿ ದೃಶ್ಯಗಳನ್ನು ನೀಡಲು ಬಾರ್ ವಿಫಲ, ಪರವಾನಗಿ ತಾತ್ಕಾಲಿಕ ರದ್ದು

ಸಿದ್ಧಾರ್ಥ್​ ಸಾಯುವ ಸಮಯದಲ್ಲಿ ಉನ್ನತ ಶಿಕ್ಷಣವನ್ನು ಪಡೆಯುತ್ತಿದ್ದರು ಎನ್ನಲಾಗಿದೆ. 2015 ರಲ್ಲಿ 25,000 ರೂ. ಮಾಸಿಕ ವೇತನವನ್ನು ಪಡೆಯುತ್ತಿದ್ದರು ಎಂಬ ಅಂಶವನ್ನು ಪರಿಗಣಿಸಿತು. ಮಾರ್ಚ್ 2016 ರಲ್ಲಿ ಸ್ವೀಕರಿಸಿದ ಆಫರ್ ಲೆಟರ್ ಗಮನಿಸಿ, ವಾರ್ಷಿಕ 10 ಲಕ್ಷ ರೂ.ಗಳನ್ನು ಸಹ ಗಣನೆಗೆ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದೆ.

ಅಪ್ರಾಪ್ತ ವಯಸ್ಕ, ತನ್ನ ಆರು ಸ್ನೇಹಿತರ ಜೊತೆಯಲ್ಲಿ, ಅತಿವೇಗದಲ್ಲಿ ಕಾರು ಚಲಾಯಿಸುತ್ತಿದ್ದ. ಡಿಕ್ಕಿಯ ನಂತರ ಸಿದ್ದಾರ್ಥ್ ಗಾಳಿಯಲ್ಲಿ 20 ಅಡಿ ಎತ್ತರಕ್ಕೆ ಹಾರಿ ಕೆಳಗೆ ಬಿದ್ದಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?