AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2016ರ ಹಿಟ್​ ಆ್ಯಂಡ್ ರನ್ ಪ್ರಕರಣ: ಮೃತ ವ್ಯಕ್ತಿಯ ಕುಟುಂಬಕ್ಕೆ 1.96 ಕೋಟಿ ರೂ. ಪರಿಹಾರ

2016ರಲ್ಲಿ ದೆಹಲಿಯಲ್ಲಿ ನಡೆದ ಹಿಟ್​ ಆ್ಯಂಡ್​ ರನ್ ಪ್ರಕರಣದಲ್ಲಿ ಮೃತ ಸಿದ್ಧಾರ್ಥ್​ ಕುಟುಂಬಕ್ಕೆ 1.96 ಕೋಟಿ ರೂ.ಗಳ ಪರಿಹಾರ ನೀಡುವಂತೆ ಇನ್ಶೂರೆನ್ಸ್​ ಕಂಪನಿಗೆ ನ್ಯಾಯಾಲಯ ಸೂಚಿಸಿದೆ.

2016ರ ಹಿಟ್​ ಆ್ಯಂಡ್ ರನ್ ಪ್ರಕರಣ: ಮೃತ ವ್ಯಕ್ತಿಯ ಕುಟುಂಬಕ್ಕೆ 1.96 ಕೋಟಿ ರೂ. ಪರಿಹಾರ
ಸಿದ್ಧಾರ್ಥ್​
ನಯನಾ ರಾಜೀವ್
|

Updated on: Jul 17, 2024 | 10:46 AM

Share

ದೆಹಲಿಯಲ್ಲಿ 2016ರಲ್ಲಿ ನಡೆದ ಹಿಟ್​ ಆ್ಯಂಡ್​ ರನ್ ಪ್ರಕರಣದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 1.96 ಕೋಟಿ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಇನ್ಶೂರೆನ್ಸ್​ ಕಂಪನಿಗೆ ಹೇಳಿದೆ. ಈ ಅಪಘಾತದ ಸಂದರ್ಭದಲ್ಲಿ ಕಾರನ್ನು ಅಪ್ರಾಪ್ತ ಬಾಲಕ ಓಡಿಸುತ್ತಿದ್ದ, ಸಿದ್ಧಾರ್ಥ್​ ಮಾರುಕಟ್ಟೆಯಿಂದ ಮನೆಗೆ ಮರಳುತ್ತಿರುವಾಗ ರಸ್ತೆ ದಾಟುವ ಸಮಯದಲ್ಲಿ ಕಾರು ವೇಗವಾಗಿ ಬಂದು ಡಿಕ್ಕಿ ಹೊಡೆದಿತ್ತು, ಮಾರಣಾಂತಿಕವಾಗಿ ಗಾಯಗೊಂಡಿದ್ದರು, ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.

ಅಪಘಾತದಲ್ಲಿ ಸಾವನ್ನಪ್ಪಿದ್ದ ಸಿದ್ಧಾರ್ಥ್​ ಶರ್ಮಾ ವಯಸ್ಸು ಆಗ 32 ವರ್ಷವಾಗಿತ್ತು, ದೆಹಲಿಯ ಸಿವಿಲ್​ ಲೈನ್ಸ್​ ಪ್ರದೇಶದಲ್ಲಿ ರಸ್ತೆ ದಾಟುತ್ತಿದ್ದಾಗ ಚಾಲಕನ ಅಜಾಗರೂಕ ಚಾಲನೆಯಿಂದ ಸಿದ್ಧಾರ್ಥ್​ ಮಾರಣಾಂತಿಕವಾಗಿ ಗಾಯಗೊಂಡಿದ್ದರು.

ನ್ಯಾಯಾಲಯವು ಅಪ್ರಾಪ್ತ ಬಾಲಕನ ತಂದೆಯನ್ನೇ ಹೊಣೆಗಾರರನ್ನಾಗಿ ಮಾಡಿದೆ. 1.98 ಕೋಟಿ ರೂ. ಸರಿಸುಮಾರು 1.21 ಕೋಟಿ ರೂಪಾಯಿಗಳನ್ನು ಪರಿಹಾರವಾಗಿ ಮತ್ತು ಸುಮಾರು 77.61 ಲಕ್ಷ ರೂಪಾಯಿಗಳನ್ನು ಬಡ್ಡಿಯಾಗಿ ನೀಡುವಂತೆ ನ್ಯಾಯಾಲಯವು ವಿಮಾ ಕಂಪನಿಗೆ ಸೂಚಿಸಿತು.

ಮತ್ತಷ್ಟು ಓದಿ: ಹಿಟ್​ ಆ್ಯಂಡ್​ ರನ್: ಸಿಸಿಟಿವಿ ದೃಶ್ಯಗಳನ್ನು ನೀಡಲು ಬಾರ್ ವಿಫಲ, ಪರವಾನಗಿ ತಾತ್ಕಾಲಿಕ ರದ್ದು

ಸಿದ್ಧಾರ್ಥ್​ ಸಾಯುವ ಸಮಯದಲ್ಲಿ ಉನ್ನತ ಶಿಕ್ಷಣವನ್ನು ಪಡೆಯುತ್ತಿದ್ದರು ಎನ್ನಲಾಗಿದೆ. 2015 ರಲ್ಲಿ 25,000 ರೂ. ಮಾಸಿಕ ವೇತನವನ್ನು ಪಡೆಯುತ್ತಿದ್ದರು ಎಂಬ ಅಂಶವನ್ನು ಪರಿಗಣಿಸಿತು. ಮಾರ್ಚ್ 2016 ರಲ್ಲಿ ಸ್ವೀಕರಿಸಿದ ಆಫರ್ ಲೆಟರ್ ಗಮನಿಸಿ, ವಾರ್ಷಿಕ 10 ಲಕ್ಷ ರೂ.ಗಳನ್ನು ಸಹ ಗಣನೆಗೆ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದೆ.

ಅಪ್ರಾಪ್ತ ವಯಸ್ಕ, ತನ್ನ ಆರು ಸ್ನೇಹಿತರ ಜೊತೆಯಲ್ಲಿ, ಅತಿವೇಗದಲ್ಲಿ ಕಾರು ಚಲಾಯಿಸುತ್ತಿದ್ದ. ಡಿಕ್ಕಿಯ ನಂತರ ಸಿದ್ದಾರ್ಥ್ ಗಾಳಿಯಲ್ಲಿ 20 ಅಡಿ ಎತ್ತರಕ್ಕೆ ಹಾರಿ ಕೆಳಗೆ ಬಿದ್ದಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು