AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್‌ಗೆ ಬಿಗ್ ರಿಲೀಫ್; 2019ರ ದ್ವೇಷ ಭಾಷಣ ಪ್ರಕರಣದಲ್ಲಿ ದೋಷಮುಕ್ತ

ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಗುರಿಯಾಗಿಸಿಕೊಂಡು ದ್ವೇಷ ಭಾಷಣ ಮಾಡಿದ್ದಕ್ಕಾಗಿ ಕಳೆದ ವರ್ಷ ಸಮಾಜವಾದಿ ನಾಯಕ ಅಜಂ ಖಾನ್​​ನ್ನು ತಪ್ಪಿತಸ್ಥ ಎಂದು ಘೋಷಿಸಲಾಗಿತ್ತು

ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್‌ಗೆ ಬಿಗ್ ರಿಲೀಫ್; 2019ರ ದ್ವೇಷ ಭಾಷಣ ಪ್ರಕರಣದಲ್ಲಿ ದೋಷಮುಕ್ತ
ಆಜಂ ಖಾನ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 24, 2023 | 4:51 PM

Share

ಮುಖ್ಯಾಂಶಗಳು

  • 2022 ರ ತೀರ್ಪಿನ ನಂತರ ಖಾನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಯಿತು.
  • ದ್ವೇಷ ಭಾಷಣ ಮಾಡಿದ್ದಕ್ಕಾಗಿ ಕಳೆದ ವರ್ಷ ಸಮಾಜವಾದಿ ನಾಯಕನನ್ನು ತಪ್ಪಿತಸ್ಥ ಎಂದು ಘೋಷಿಸಿದ್ದ ಕೆಳ ನ್ಯಾಯಾಲಯದ ತೀರ್ಪನ್ನು ರಾಂಪುರ ನ್ಯಾಯಾಲಯವು ರದ್ದುಗೊಳಿಸಿತು
  • ಷ ಭಾಷಣ ಪ್ರಕರಣದಲ್ಲಿ ನಮ್ಮನ್ನು ಖುಲಾಸೆಗೊಳಿಸಲಾಗಿದೆ, ನ್ಯಾಯ ಸಿಕ್ಕಿರುವುದಕ್ಕೆ ನಮಗೆ ಸಂತೋಷವಾಗಿದೆ ಎಂದು ಖಾನ್ ಪರ ವಾದಿಸಿದ ವಕೀಲರು ಹೇಳಿದ್ದಾರೆ

ದೆಹಲಿ: 2019 ರ ದ್ವೇಷ ಭಾಷಣ ಪ್ರಕರಣದಲ್ಲಿ (2019 hate speech case) ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ (Azam Khan) ಅವರನ್ನು ಉತ್ತರ ಪ್ರದೇಶದ (Uttar Pradesh) ನ್ಯಾಯಾಲಯ ಇಂದು (ಬುಧವಾರ) ದೋಷಮುಕ್ತಗೊಳಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಗುರಿಯಾಗಿಸಿಕೊಂಡು ದ್ವೇಷ ಭಾಷಣ ಮಾಡಿದ್ದಕ್ಕಾಗಿ ಕಳೆದ ವರ್ಷ ಸಮಾಜವಾದಿ ನಾಯಕನನ್ನು ತಪ್ಪಿತಸ್ಥ ಎಂದು ಘೋಷಿಸಿದ್ದ ಕೆಳ ನ್ಯಾಯಾಲಯದ ತೀರ್ಪನ್ನು ರಾಂಪುರ ನ್ಯಾಯಾಲಯವು ರದ್ದುಗೊಳಿಸಿತು. ದೇಶದಲ್ಲಿ ಮುಸ್ಲಿಮರು ಅಸ್ತಿತ್ವದಲ್ಲಿರಲು ಕಷ್ಟಪಡುವ ವಾತಾವರಣವನ್ನು ಪ್ರಧಾನಿ ನಿರ್ಮಿಸುತ್ತಿದ್ದಾರೆ ಎಂದು ಸಮಾಜವಾದಿ ನಾಯಕ ಆರೋಪಿಸಿದ್ದರು.

2022 ರ ತೀರ್ಪಿನ ನಂತರ ಖಾನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಯಿತು.

ವಿಶೇಷ ನ್ಯಾಯಾಲಯವು ಖಾನ್ ಶಿಕ್ಷೆಯ ವಿರುದ್ಧ ಸಲ್ಲಿಸಲಾದ ಮೇಲ್ಮನವಿಯನ್ನು ಅಂಗೀಕರಿಸಿದೆ ಎಂದು ಸರ್ಕಾರಿ ವಕೀಲರು ತಿಳಿಸಿದ್ದಾರೆ. ಖಾನ್ ಪರ ವಾದಿಸಿದ ವಕೀಲ ವಿನೋದ್ ಶರ್ಮಾ, ದ್ವೇಷ ಭಾಷಣ ಪ್ರಕರಣದಲ್ಲಿ ನಮ್ಮನ್ನು ಖುಲಾಸೆಗೊಳಿಸಲಾಗಿದೆ, ನ್ಯಾಯ ಸಿಕ್ಕಿರುವುದಕ್ಕೆ ನಮಗೆ ಸಂತೋಷವಾಗಿದೆ ಎಂದು ಹೇಳಿದರು. ಪ್ರಕರಣದಲ್ಲಿ ನಮ್ಮನ್ನು ಸಿಲುಕಿಸಲಾಗಿದೆ ಎಂಬ ನಮ್ಮ ವಾದವನ್ನು ನ್ಯಾಯಾಲಯವು ಎತ್ತಿಹಿಡಿದಿದೆ ಮತ್ತು ತೀರ್ಪು ನಮ್ಮ ಪರವಾಗಿದೆ ಎಂದು ಶರ್ಮಾ ಹೇಳಿದ್ದಾರೆ.

ಇದನ್ನೂ ಓದಿ: ಕೇಜ್ರಿವಾಲ್​​ಗೆ ಭರವಸೆ; ನಾವೆಲ್ಲರೂ ದೇಶ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಒಟ್ಟಾಗಿ ಬಂದಿದ್ದೇವೆ ಎಂದ ಉದ್ಧವ್ ಠಾಕ್ರೆ

ಖಾನ್ ಅವರ ಅಸೆಂಬ್ಲಿ ಸದಸ್ಯತ್ವವನ್ನು ಅನರ್ಹಗೊಳಿಸಿದ ನಂತರ, ರಾಂಪುರ ಸದರ್ ಸ್ಥಾನಕ್ಕೆ ಉಪಚುನಾವಣೆ ನಡೆಯಿತು. ಬಿಜೆಪಿ ಅಭ್ಯರ್ಥಿ ಆಕಾಶ್ ಸಕ್ಸೇನಾ ಅವರು ಚುನಾವಣೆಯಲ್ಲಿ ಖಾನ್ ಅವರ ನಿಕಟವರ್ತಿ ಎಸ್ಪಿಯ ಅಸೀಮ್ ರಾಜಾ ಅವರನ್ನು ಪರಾಭವಗೊಳಿಸಿದರು.

ಆಜಂ ಖಾನ್ ಅವರು ರಾಂಪುರ ಮತ್ತು ಪಶ್ಚಿಮ ಉತ್ತರ ಪ್ರದೇಶದ ಇತರ ಭಾಗಗಳಲ್ಲಿ ಹೆಚ್ಚಿನ ಬೆಂಬಲ ಹೊಂದಿದ್ದಾರೆ.

2017 ರಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸಮಾಜವಾದಿ ನಾಯಕ ಅವರು ಭ್ರಷ್ಟಾಚಾರ ಮತ್ತು ಕಳ್ಳತನದಿಂದ ಭೂಕಬಳಿಕೆಯವರೆಗಿನ 87 ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ