AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನಡಾದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ ಗುಂಡೇಟಿನಿಂದ ಸಾವು; ಮೃತದೇಹವನ್ನು ಭಾರತಕ್ಕೆ ತರಲು ಕುಟುಂಬದ ಆಗ್ರಹ

ಕೆನಡಾದ ಒಂಟಾರಿಯೊದ ಹ್ಯಾಮಿಲ್ಟನ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ ಹರ್ಸಿಮ್ರತ್ ಕೌರ್ ರಾಂಧವಾ ಎಂಬಾಕೆ ದುರಂತವಾಗಿ ಸಾವನ್ನಪ್ಪಿದ್ದಾಳೆ. ಆಕೆ ಬಸ್​ಗಾಗಿ ಕಾಯುತ್ತಿದ್ದಾಗ 2 ವಾಹನಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಸಿಲುಕಿ ಗುಂಡೇಟಿಗೆ ಬಲಿಯಾಗಿದ್ದಾರೆ. ಎರಡು ಬಣಗಳ ನಡುವಿನ ಗುಂಡಿನ ಕಾಳಗದಲ್ಲಿ ಅಮಾಯಕಳಾಗಿ ದೂರದಲ್ಲಿ ನಿಂತಿದ್ದ ಆಕೆಗೆ ಗುಂಡು ತಗುಲಿದೆ. ಈ ಬಗ್ಗೆ ಹ್ಯಾಮಿಲ್ಟನ್ ಪೊಲೀಸರು ಕೊಲೆಯ ತನಿಖೆ ನಡೆಸುತ್ತಿದ್ದಾರೆ.

ಕೆನಡಾದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ ಗುಂಡೇಟಿನಿಂದ ಸಾವು; ಮೃತದೇಹವನ್ನು ಭಾರತಕ್ಕೆ ತರಲು ಕುಟುಂಬದ ಆಗ್ರಹ
Indian Girl Died In Canada
Follow us
ಸುಷ್ಮಾ ಚಕ್ರೆ
|

Updated on: Apr 19, 2025 | 7:59 PM

ನವದೆಹಲಿ, ಏಪ್ರಿಲ್ 19: ಕೆನಡಾದ ಒಂಟಾರಿಯೊದ ಹ್ಯಾಮಿಲ್ಟನ್‌ನಲ್ಲಿ ಬುಧವಾರ ಸಂಜೆ ನಡೆದ ಹಿಂಸಾಚಾರದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ ಹರ್ಸಿಮ್ರತ್ ಕೌರ್ ರಾಂಧವಾ (Harsimrat Kaur Randhawa) ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ. ಹ್ಯಾಮಿಲ್ಟನ್‌ನಲ್ಲಿ 2 ಗುಂಪುಗಳ ಘರ್ಷಣೆಯ ನಡುವೆ ಆಕೆಗೆ ಗುಂಡು ತಗುಲಿದೆ ಎಂದು ಆಕೆಯ ಕುಟುಂಬ ಹೇಳಿಕೊಂಡಿದೆ.

ಏಪ್ರಿಲ್ 17ರ ಸಂಜೆ ಹರ್ಸಿಮ್ರತ್ ರಾಂಧವಾ ಸಾವನ್ನಪ್ಪಿದ್ದಾರೆ ಎಂಬ ಆಘಾತಕಾರಿ ಘಟನೆಯನ್ನು ಹ್ಯಾಮಿಲ್ಟನ್ ಪೊಲೀಸರು ದೃಢಪಡಿಸಿದ್ದಾರೆ. ಅಪ್ಪರ್ ಜೇಮ್ಸ್ ಸ್ಟ್ರೀಟ್ ಮತ್ತು ಸೌತ್ ಬೆಂಡ್ ರೋಡ್ ಈಸ್ಟ್ ಪ್ರದೇಶದಲ್ಲಿ ಗುಂಡಿನ ದಾಳಿ ನಡೆದ ವರದಿಗೆ ಪೊಲೀಸರು ಸಂಜೆ 7.30ಕ್ಕೆ ಪ್ರತಿಕ್ರಿಯಿಸಿದ್ದಾರೆ. ಕಪ್ಪು ಸೆಡಾನ್ ಮತ್ತು ಬಿಳಿ ಸೆಡಾನ್‌ನಲ್ಲಿ ಪ್ರಯಾಣಿಸುತ್ತಿದ್ದವರ ನಡುವಿನ ಸರಣಿ ಗುಂಡಿನ ದಾಳಿಯಲ್ಲಿ ಆಕೆಗೆ ಗುಂಡು ತಗುಲಿ ಆಕೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ವಿಮಾನ ಹೈಜಾಕ್ ಮಾಡಲು ಹೋಗಿ ಪ್ರಯಾಣಿಕನ ಗುಂಡೇಟಿಗೆ ಬಲಿಯಾದ ದಾಳಿಕೋರ

ಇದನ್ನೂ ಓದಿ
Image
ರಾಜ್ಯಸಭೆಯಲ್ಲಿ ಅಸಂಸದೀಯ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚನೆ
Image
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
Image
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
Image
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ವೈದ್ಯರು ಹರ್ಸಿಮ್ರತ್ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ, ಎದೆಗೆ ಗುಂಡೇಟು ಬಿದ್ದಿದ್ದರಿಂದಾಗಿ ಅವರು ಸಾವನ್ನಪ್ಪಿದರು. ಹರ್ಸಿಮ್ರತ್ 2 ವರ್ಷಗಳ ಹಿಂದೆ ಕೆನಡಾಕ್ಕೆ ಹೋಗಿದ್ದರು. ಅವರು ಹ್ಯಾಮಿಲ್ಟನ್‌ನ ಮೊಹಾಕ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದರು. ಪೊಲೀಸರ ಪ್ರಕಾರ, ಹಿಂಸಾತ್ಮಕ ಘರ್ಷಣೆಗಳು ಭುಗಿಲೆದ್ದಾಗ ಅವರು ಬಸ್​ಗಾಗಿ ಪಕ್ಕದಲ್ಲಿ ಕಾಯುತ್ತಾ ನಿಂತಿದ್ದರು.

ಪಂಜಾಬ್‌ನ ಟಾರ್ನ್ ತರನ್ ಜಿಲ್ಲೆಯ ಧುಂಡಾ ಗ್ರಾಮದ ರಾಂಧವಾ ಅವರ ಕುಟುಂಬವು ತಮ್ಮ ಮಗಳ ಶವವನ್ನು ಭಾರತಕ್ಕೆ ಮರಳಿ ತರುವಂತೆ ಭಾರತ ಸರ್ಕಾರಕ್ಕೆ ಮನವಿ ಮಾಡಿದೆ. ಟೊರೊಂಟೊದಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಯುವ ಭಾರತೀಯ ಹುಡುಗಿಯ ನಿಧನಕ್ಕೆ ಸಂತಾಪ ಸೂಚಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್