ಚತ್ತೀಸ್​ಗಡ್​ನಲ್ಲಿ ನಕ್ಸಲರ ಅಟ್ಟಹಾಸ; ಗುಂಡಿನ ಚಕಮಕಿಯಲ್ಲಿ 22 ಯೋಧರು ಹುತಾತ್ಮ

ಹುತಾತ್ಮರಾದ 22 ಯೋಧರ ಪೈಕಿ 17 ಜನರ ಮೃತದೇಹವನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿದ್ದು, ನಿನ್ನೆ ನಾಪತ್ತೆಯಾಗಿದ್ದವರಲ್ಲಿ ಬಹುತೇಕರು ಸಾವಿಗೀಡಾಗಿರುವುದು ಈ ಮೂಲಕ ಖಚಿತವಾಗಿದೆ. ನಿನ್ನೆ ಒಟ್ಟು ಐದು ಮಂದಿ ಸೈನಿಕರು ಹುತಾತ್ಮರಾಗಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದ್ದು, ಇಂದು ಆ ಸಂಖ್ಯೆ 22 ಕ್ಕೆ ಏರಿಕೆಯಾಗಿದೆ.

ಚತ್ತೀಸ್​ಗಡ್​ನಲ್ಲಿ ನಕ್ಸಲರ ಅಟ್ಟಹಾಸ; ಗುಂಡಿನ ಚಕಮಕಿಯಲ್ಲಿ 22 ಯೋಧರು ಹುತಾತ್ಮ
ಸಾಂದರ್ಭಿಕ ಚಿತ್ರ
Follow us
| Updated By: Lakshmi Hegde

Updated on: Apr 04, 2021 | 1:15 PM

ಚತ್ತೀಸ್​ಗಡ್: ಚತ್ತೀಸ್​ಗಡ್​ನ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಟ್ಟು 22 ಯೋಧರು ಹುತಾತ್ಮರಾಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಚತ್ತೀಸ್​ಗಡ್​​ನ ಎಸ್​ಪಿ ಕಶ್ಯಪ್​ ಘಟನೆಯಲ್ಲಿ 22 ಯೋಧರು ಹುತಾತ್ಮರಾಗಿದ್ದು, 23 ಯೋಧರು ಬಿಜಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ 7 ಯೋಧರಿಗೆ ರಾಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ.

ಹುತಾತ್ಮರಾದ 22 ಯೋಧರ ಪೈಕಿ 17 ಜನರ ಮೃತದೇಹವನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿದ್ದು, ನಿನ್ನೆ ನಾಪತ್ತೆಯಾಗಿದ್ದವರಲ್ಲಿ ಬಹುತೇಕರು ಸಾವಿಗೀಡಾಗಿರುವುದು ಈ ಮೂಲಕ ಖಚಿತವಾಗಿದೆ. ನಿನ್ನೆ ಒಟ್ಟು ಐದು ಮಂದಿ ಸೈನಿಕರು ಹುತಾತ್ಮರಾಗಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದ್ದು, ಇಂದು ಆ ಸಂಖ್ಯೆ 22 ಕ್ಕೆ ಏರಿಕೆಯಾಗಿದೆ.

ಸಿಆರ್​ಪಿಎಫ್​ ಯೋಧರ ಮೇಲೆ ರಾಕೆಟ್ ಲಾಂಚರ್ ಬಳಸಿ ದಾಳಿ ನಡೆಸಿದ್ದ ನಕ್ಸಲರು ಅಟ್ಟಹಾಸ ಮೆರೆದಿದ್ದು, ಘಟನೆಯಲ್ಲಿ 30ಕ್ಕೂ ಹೆಚ್ಚು ಯೋಧರು ಗಾಯಗೊಂಡಿದ್ದಾರೆ. ಅಲ್ಲದೇ, ಓರ್ವ ನಕ್ಸಲ್​ ಯುವತಿ ಸಾವಿಗೀಡಾಗಿದ್ದು ಆಕೆಯ ಮೃತದೇಹವೂ ಪತ್ತೆಯಾಗಿದೆ.

ನಿನ್ನೆಯ ವರದಿಯಲ್ಲಿ ಏನಿತ್ತು? ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರ ಅಟ್ಟಹಾಸಕ್ಕೆ 5 ಮಂದಿ ಸೈನಿಕರು ಹುತಾತ್ಮರಾಗಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಬೆಳಗ್ಗೆಯಿಂದಲೂ ರಕ್ಷಣಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಎನ್​ಕೌಂಟರ್ ನಡೆದಿತ್ತು. ಭದ್ರತಾ ಪಡೆಗಳ ದಾಳಿಗೆ ಇಬ್ಬರು ನಕ್ಸಲರು ಬಲಿಯಾಗಿದ್ದು, ಅದರಲ್ಲಿ ಮಹಿಳೆಯೂ ಒಬ್ಬಳಿದ್ದಾಳೆ. ಹುತಾತ್ಮರಾದ ಯೋಧರಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪಡೆ(CRPF)ಗೆ ಸೇರಿದವರು. ಮತ್ತೆ ಮೂವರು ಜಿಲ್ಲಾ ರಿಸರ್ವ್​ ಗಾರ್ಡ್​ (DRG)ನವರಾಗಿದ್ದಾರೆ.

ಬಿಜಾಪುರದ ತಾರೆಮ್​​ನ ಸಿಲ್​​ಗರ್​​ ಅರಣ್ಯದಲ್ಲಿ ಅಡಗಿದ್ದ ನಕ್ಸಲರ ವಿರುದ್ಧ ಸಿಆರ್​ಪಿಎಫ್​, ಡಿಆರ್​ಜಿ, ಎಸ್​ಟಿಎಫ್​ಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದರು. ಸುಮಾರು 400 ಸಿಬ್ಬಂದಿ ಇದ್ದ ಭದ್ರತಾ ಪಡೆಗಳ ಮೇಲೆ ನಕ್ಸಲರು ಗುಂಡಿನ ದಾಳಿ ನಡೆಸಿದ ಪರಿಣಾಮ ಐವರ ಜೀವ ಹೋಗಿದೆ ಎಂದು ಚತ್ತೀಸ್​ಗಡ ಡಿಜಿಪಿ ಡಿಎಂ ಅಶ್ವಥಿ ತಿಳಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ತಾರೆಮ್​ಗೆ 9 ಆಂಬುಲೆನ್ಸ್​ಗಳು, ಎರಡು ಎಂಐ-17 ಹೆಲಿಕಾಪ್ಟರ್​ಗಳು ತೆರಳಿವೆ.

ಇದನ್ನೂ ಓದಿ: ಚತ್ತೀಸಗಡ್​ನಲ್ಲಿ ನಕ್ಸಲರ ಗುಂಡಿನ ದಾಳಿಗೆ ಐವರು ಯೋಧರು ಹುತಾತ್ಮ: ಇಬ್ಬರನ್ನು ಹೊಡೆದುರುಳಿಸಿದ ರಕ್ಷಣಾ ಪಡೆ 

ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್