AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚತ್ತೀಸ್​ಗಡ್​ನಲ್ಲಿ ನಕ್ಸಲರ ಅಟ್ಟಹಾಸ; ಗುಂಡಿನ ಚಕಮಕಿಯಲ್ಲಿ 22 ಯೋಧರು ಹುತಾತ್ಮ

ಹುತಾತ್ಮರಾದ 22 ಯೋಧರ ಪೈಕಿ 17 ಜನರ ಮೃತದೇಹವನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿದ್ದು, ನಿನ್ನೆ ನಾಪತ್ತೆಯಾಗಿದ್ದವರಲ್ಲಿ ಬಹುತೇಕರು ಸಾವಿಗೀಡಾಗಿರುವುದು ಈ ಮೂಲಕ ಖಚಿತವಾಗಿದೆ. ನಿನ್ನೆ ಒಟ್ಟು ಐದು ಮಂದಿ ಸೈನಿಕರು ಹುತಾತ್ಮರಾಗಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದ್ದು, ಇಂದು ಆ ಸಂಖ್ಯೆ 22 ಕ್ಕೆ ಏರಿಕೆಯಾಗಿದೆ.

ಚತ್ತೀಸ್​ಗಡ್​ನಲ್ಲಿ ನಕ್ಸಲರ ಅಟ್ಟಹಾಸ; ಗುಂಡಿನ ಚಕಮಕಿಯಲ್ಲಿ 22 ಯೋಧರು ಹುತಾತ್ಮ
ಸಾಂದರ್ಭಿಕ ಚಿತ್ರ
Skanda
| Edited By: |

Updated on: Apr 04, 2021 | 1:15 PM

Share

ಚತ್ತೀಸ್​ಗಡ್: ಚತ್ತೀಸ್​ಗಡ್​ನ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಟ್ಟು 22 ಯೋಧರು ಹುತಾತ್ಮರಾಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಚತ್ತೀಸ್​ಗಡ್​​ನ ಎಸ್​ಪಿ ಕಶ್ಯಪ್​ ಘಟನೆಯಲ್ಲಿ 22 ಯೋಧರು ಹುತಾತ್ಮರಾಗಿದ್ದು, 23 ಯೋಧರು ಬಿಜಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ 7 ಯೋಧರಿಗೆ ರಾಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ.

ಹುತಾತ್ಮರಾದ 22 ಯೋಧರ ಪೈಕಿ 17 ಜನರ ಮೃತದೇಹವನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿದ್ದು, ನಿನ್ನೆ ನಾಪತ್ತೆಯಾಗಿದ್ದವರಲ್ಲಿ ಬಹುತೇಕರು ಸಾವಿಗೀಡಾಗಿರುವುದು ಈ ಮೂಲಕ ಖಚಿತವಾಗಿದೆ. ನಿನ್ನೆ ಒಟ್ಟು ಐದು ಮಂದಿ ಸೈನಿಕರು ಹುತಾತ್ಮರಾಗಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದ್ದು, ಇಂದು ಆ ಸಂಖ್ಯೆ 22 ಕ್ಕೆ ಏರಿಕೆಯಾಗಿದೆ.

ಸಿಆರ್​ಪಿಎಫ್​ ಯೋಧರ ಮೇಲೆ ರಾಕೆಟ್ ಲಾಂಚರ್ ಬಳಸಿ ದಾಳಿ ನಡೆಸಿದ್ದ ನಕ್ಸಲರು ಅಟ್ಟಹಾಸ ಮೆರೆದಿದ್ದು, ಘಟನೆಯಲ್ಲಿ 30ಕ್ಕೂ ಹೆಚ್ಚು ಯೋಧರು ಗಾಯಗೊಂಡಿದ್ದಾರೆ. ಅಲ್ಲದೇ, ಓರ್ವ ನಕ್ಸಲ್​ ಯುವತಿ ಸಾವಿಗೀಡಾಗಿದ್ದು ಆಕೆಯ ಮೃತದೇಹವೂ ಪತ್ತೆಯಾಗಿದೆ.

ನಿನ್ನೆಯ ವರದಿಯಲ್ಲಿ ಏನಿತ್ತು? ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರ ಅಟ್ಟಹಾಸಕ್ಕೆ 5 ಮಂದಿ ಸೈನಿಕರು ಹುತಾತ್ಮರಾಗಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಬೆಳಗ್ಗೆಯಿಂದಲೂ ರಕ್ಷಣಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಎನ್​ಕೌಂಟರ್ ನಡೆದಿತ್ತು. ಭದ್ರತಾ ಪಡೆಗಳ ದಾಳಿಗೆ ಇಬ್ಬರು ನಕ್ಸಲರು ಬಲಿಯಾಗಿದ್ದು, ಅದರಲ್ಲಿ ಮಹಿಳೆಯೂ ಒಬ್ಬಳಿದ್ದಾಳೆ. ಹುತಾತ್ಮರಾದ ಯೋಧರಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪಡೆ(CRPF)ಗೆ ಸೇರಿದವರು. ಮತ್ತೆ ಮೂವರು ಜಿಲ್ಲಾ ರಿಸರ್ವ್​ ಗಾರ್ಡ್​ (DRG)ನವರಾಗಿದ್ದಾರೆ.

ಬಿಜಾಪುರದ ತಾರೆಮ್​​ನ ಸಿಲ್​​ಗರ್​​ ಅರಣ್ಯದಲ್ಲಿ ಅಡಗಿದ್ದ ನಕ್ಸಲರ ವಿರುದ್ಧ ಸಿಆರ್​ಪಿಎಫ್​, ಡಿಆರ್​ಜಿ, ಎಸ್​ಟಿಎಫ್​ಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದರು. ಸುಮಾರು 400 ಸಿಬ್ಬಂದಿ ಇದ್ದ ಭದ್ರತಾ ಪಡೆಗಳ ಮೇಲೆ ನಕ್ಸಲರು ಗುಂಡಿನ ದಾಳಿ ನಡೆಸಿದ ಪರಿಣಾಮ ಐವರ ಜೀವ ಹೋಗಿದೆ ಎಂದು ಚತ್ತೀಸ್​ಗಡ ಡಿಜಿಪಿ ಡಿಎಂ ಅಶ್ವಥಿ ತಿಳಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ತಾರೆಮ್​ಗೆ 9 ಆಂಬುಲೆನ್ಸ್​ಗಳು, ಎರಡು ಎಂಐ-17 ಹೆಲಿಕಾಪ್ಟರ್​ಗಳು ತೆರಳಿವೆ.

ಇದನ್ನೂ ಓದಿ: ಚತ್ತೀಸಗಡ್​ನಲ್ಲಿ ನಕ್ಸಲರ ಗುಂಡಿನ ದಾಳಿಗೆ ಐವರು ಯೋಧರು ಹುತಾತ್ಮ: ಇಬ್ಬರನ್ನು ಹೊಡೆದುರುಳಿಸಿದ ರಕ್ಷಣಾ ಪಡೆ 

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ