AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲು ಗೋಡೆ ಕುಸಿದು 22 ಕೈದಿಗಳಿಗೆ ಗಾಯ; ಮಳೆಯಿಂದಾದ ಅವಘಡವೆಂದ ಪೊಲೀಸ್ ಅಧಿಕಾರಿ

Madhya Pradesh: ದುರ್ಘಟನೆ ನಡೆಯುವ ಸಂದರ್ಭದಲ್ಲಿ ಕಾರಾಗೃಹದಲ್ಲಿ 225 ಕೈದಿಗಳು ಇದ್ದರು. ಗೋಡೆ ಕುಸಿತದ ಸುದ್ದಿ ಕೇಳುತ್ತಿದ್ದಂತೆ ಪೊಲೀಸ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಶುರು ಮಾಡಿದರು.

ಜೈಲು ಗೋಡೆ ಕುಸಿದು 22 ಕೈದಿಗಳಿಗೆ ಗಾಯ; ಮಳೆಯಿಂದಾದ ಅವಘಡವೆಂದ ಪೊಲೀಸ್ ಅಧಿಕಾರಿ
ಜೈಲಿನಲ್ಲಿ ಗೋಡೆ ಕುಸಿದಿರುವುದು
TV9 Web
| Edited By: |

Updated on: Jul 31, 2021 | 11:31 AM

Share

ಭಿಂಡ್​: ಮಧ್ಯಪ್ರದೇಶದ ಭಿಂಡ್​ ಜಿಲ್ಲೆಯಲ್ಲಿ ಕಾರಾಗೃಹದ ಬ್ಯಾರಕ್​ ಸಂಖ್ಯೆ 6ರ ಗೋಡೆ ಕುಸಿದು 22 ಕೈದಿಗಳು ಗಂಭೀರ ಗಾಯಗೊಂಡಿದ್ದಾರೆ. ಶನಿವಾರ ಮುಂಜಾನೆ 5.10ರ ಹೊತ್ತಿಗೆ ದುರ್ಘಟನೆ ನಡೆದಿದೆ. ಇತ್ತೀಚೆಗೆ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಗೋಡೆ ಕುಸಿದಿದೆ ಎಂದು ಹೇಳಲಾಗಿದೆ.

ಘಟನೆಯಲ್ಲಿ 22 ಕೈದಿಗಳು ಗಾಯಗೊಂಡಿದ್ದಾರೆ. ಅದರಲ್ಲಿ ಒಬ್ಬ ಕೈದಿಗೆ ಗಂಭೀರವಾಗಿ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಗ್ವಾಲಿಯರ್​ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಳಿದವರಿಗೆ ಜಿಲ್ಲಾಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಭಿಂಡ್​ ಎಸ್​ಪಿ ಮನೋಜ್​ ಕುಮಾರ್ ಸಿಂಗ್​ ತಿಳಿಸಿದ್ದಾರೆ.

ದುರ್ಘಟನೆ ನಡೆಯುವ ಸಂದರ್ಭದಲ್ಲಿ ಕಾರಾಗೃಹದಲ್ಲಿ 225 ಕೈದಿಗಳು ಇದ್ದರು. ಗೋಡೆ ಕುಸಿತದ ಸುದ್ದಿ ಕೇಳುತ್ತಿದ್ದಂತೆ ಪೊಲೀಸ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಶುರು ಮಾಡಿದರು. ಈ ಜೈಲು ತುಂಬ ಹಳೆಯದಾಗಿದ್ದು, ಗೋಡೆಗಳೆಲ್ಲ ಶಿಥಿಲವಾಗುತ್ತಿವೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಗೋಡೆಗಳೆಲ್ಲ ಒದ್ದೆಯಾಗಿದ್ದವು. ಇದೇ ಕಾರಣಕ್ಕೆ ಕುಸಿದುಬಿದ್ದಿವೆ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದ ಇಬ್ಬರ ಬಂಧನ; ಸರಗಳ್ಳರನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾದ ಕುದೂರು ಪೊಲೀಸರು

22 Prisoners injured as Jail Wall Collapsed in Madhya Pradesh

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್