AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲ್ಫೀ ವಿಡಿಯೋ ಮಾಡುತ್ತಿದ್ದ ಯುವಕನಿಗೆ ಡಿಕ್ಕಿ ಹೊಡೆದ ರೈಲು; ಸ್ಥಳದಲ್ಲೇ ಹೋಯ್ತು ಪ್ರಾಣ

ರೈಲ್ವೆ ಸ್ಟೇಶನ್​​ ಬಳಿ ಸೆಲ್ಫೀ ವಿಡಿಯೋ ತೆಗೆದುಕೊಳ್ಳುತ್ತಿದ್ದಾಗ ರೈಲೊಂದು ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಜೋಲಾರ್​ಪೇಟ್​ ಪೊಲೀಸ್ ಠಾಣೆ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

ಸೆಲ್ಫೀ ವಿಡಿಯೋ ಮಾಡುತ್ತಿದ್ದ ಯುವಕನಿಗೆ ಡಿಕ್ಕಿ ಹೊಡೆದ ರೈಲು; ಸ್ಥಳದಲ್ಲೇ ಹೋಯ್ತು ಪ್ರಾಣ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: May 04, 2022 | 8:05 PM

Share

ಸೆಲ್ಫೀ ತೆಗೆದುಕೊಳ್ಳುತ್ತಿದ್ದ ಯುವಕನಿಗೆ ರೈಲು ಡಿಕ್ಕಿ ಹೊಡೆದು, ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ತಮಿಳುನಾಡಿನ ವೆಲ್ಲೋರ್​​ನಲ್ಲಿ ನಡೆದಿದೆ. ಮೃತ ಯುವಕನನ್ನು ವಸಂತ್ ಕುಮಾರ್ ಎಂದು ಗುರುತಿಸಲಾಗಿದ್ದು, ಇನ್ನೂ 22ವರ್ಷ. ಕೇಬಲ್​ ಟಿವಿ ಆಪರೇಟರ್​ ಆಗಿ ಕಾರ್ಯ ನಿರ್ವಹಿಸುತ್ತಿದ್ದ. ಸಾಮಾಜಿಕ ಜಾಲತಾಣಗಳಲ್ಲಿ  ವಿಡಿಯೋ, ಸೆಲ್ಫೀ, ರೀಲ್ಸ್​ಗಳನ್ನು ಅಪ್ಲೋಡ್ ಮಾಡುವುದು ಆತನ ಹವ್ಯಾಸವಾಗಿತ್ತು. ಹಾಗೇ, ಇಂದು ಕೂಡ ಆತ ತನ್ನ ಸ್ನೇಹಿತರೊಟ್ಟಿಗೆ ಗುಡಿಯಟ್ಟಮ್​ ಬಳಿಯ ಮೇಲತ್ತೂರ್​ ರೈಲ್ವೆ ಸ್ಟೇಶನ್​​ ಸಮೀಪ, ರೀಲ್ಸ್​ಗೋಸ್ಕರ್ ಶೂಟ್ ಮಾಡಲು ಹೋಗಿದ್ದಾಗ ದುರ್ಘಟನೆ ನಡೆದಿದೆ. 

ರೈಲ್ವೆ ಸ್ಟೇಶನ್​​ ಬಳಿ ಸೆಲ್ಫೀ ವಿಡಿಯೋ ತೆಗೆದುಕೊಳ್ಳುತ್ತಿದ್ದಾಗ ರೈಲೊಂದು ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಜೋಲಾರ್​ಪೇಟ್​ ಪೊಲೀಸ್ ಠಾಣೆ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಹಾಗೇ, ಯುವಕನ ಮೃತದೇಹವನ್ನು ಪೋಸ್ಟ್​ಮಾರ್ಟಮ್​ಗೆ ಕಳಿಸಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡು, ತನಿಖೆ ನಡೆಸುತ್ತಿದ್ದಾರೆ. ಸ್ವಲ್ಪ ದಿನಗಳ ಹಿಂದೆ ಇಂಥದ್ದೇ ದುರ್ಘಟನೆ ದೆಹಲಿಯ ಹೊರವಲಯದಲ್ಲಿರುವ ಗುರುಗ್ರಾಮದಲ್ಲಿ ನಡೆದಿತ್ತು. ಅಲ್ಲಿ ನಿರ್ಮಾಣಹಂತದಲ್ಲಿದ್ದ ರೈಲ್ವೆ ಮೇಲ್ಸೇತುವೆ ಹಳಿಯ ಬಳಿ ನಾಲ್ವರು ಯುವಕರು ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾಗ ರೈಲು ಡಿಕ್ಕಿ ಹೊಡೆದು ಅವರೆಲ್ಲ ಸ್ಥಳದಲ್ಲೇ ಮೃತಪಟ್ಟಿದ್ದರು.

ಇದನ್ನೂ ಓದಿ: ಕಲ್ಕತ್ತಾ ಹೈಕೋರ್ಟ್‌ ಆವರಣದಲ್ಲಿ ಪ್ರತಿಭಟನೆ; ಪಿ ಚಿದಂಬರಂನ್ನು ಮಮತಾ ಸರ್ಕಾರದ ‘ದಲಾಲ್’ ಎಂದ ವಕೀಲರು

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ