AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲ್ಫೀ ವಿಡಿಯೋ ಮಾಡುತ್ತಿದ್ದ ಯುವಕನಿಗೆ ಡಿಕ್ಕಿ ಹೊಡೆದ ರೈಲು; ಸ್ಥಳದಲ್ಲೇ ಹೋಯ್ತು ಪ್ರಾಣ

ರೈಲ್ವೆ ಸ್ಟೇಶನ್​​ ಬಳಿ ಸೆಲ್ಫೀ ವಿಡಿಯೋ ತೆಗೆದುಕೊಳ್ಳುತ್ತಿದ್ದಾಗ ರೈಲೊಂದು ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಜೋಲಾರ್​ಪೇಟ್​ ಪೊಲೀಸ್ ಠಾಣೆ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

ಸೆಲ್ಫೀ ವಿಡಿಯೋ ಮಾಡುತ್ತಿದ್ದ ಯುವಕನಿಗೆ ಡಿಕ್ಕಿ ಹೊಡೆದ ರೈಲು; ಸ್ಥಳದಲ್ಲೇ ಹೋಯ್ತು ಪ್ರಾಣ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: May 04, 2022 | 8:05 PM

Share

ಸೆಲ್ಫೀ ತೆಗೆದುಕೊಳ್ಳುತ್ತಿದ್ದ ಯುವಕನಿಗೆ ರೈಲು ಡಿಕ್ಕಿ ಹೊಡೆದು, ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ತಮಿಳುನಾಡಿನ ವೆಲ್ಲೋರ್​​ನಲ್ಲಿ ನಡೆದಿದೆ. ಮೃತ ಯುವಕನನ್ನು ವಸಂತ್ ಕುಮಾರ್ ಎಂದು ಗುರುತಿಸಲಾಗಿದ್ದು, ಇನ್ನೂ 22ವರ್ಷ. ಕೇಬಲ್​ ಟಿವಿ ಆಪರೇಟರ್​ ಆಗಿ ಕಾರ್ಯ ನಿರ್ವಹಿಸುತ್ತಿದ್ದ. ಸಾಮಾಜಿಕ ಜಾಲತಾಣಗಳಲ್ಲಿ  ವಿಡಿಯೋ, ಸೆಲ್ಫೀ, ರೀಲ್ಸ್​ಗಳನ್ನು ಅಪ್ಲೋಡ್ ಮಾಡುವುದು ಆತನ ಹವ್ಯಾಸವಾಗಿತ್ತು. ಹಾಗೇ, ಇಂದು ಕೂಡ ಆತ ತನ್ನ ಸ್ನೇಹಿತರೊಟ್ಟಿಗೆ ಗುಡಿಯಟ್ಟಮ್​ ಬಳಿಯ ಮೇಲತ್ತೂರ್​ ರೈಲ್ವೆ ಸ್ಟೇಶನ್​​ ಸಮೀಪ, ರೀಲ್ಸ್​ಗೋಸ್ಕರ್ ಶೂಟ್ ಮಾಡಲು ಹೋಗಿದ್ದಾಗ ದುರ್ಘಟನೆ ನಡೆದಿದೆ. 

ರೈಲ್ವೆ ಸ್ಟೇಶನ್​​ ಬಳಿ ಸೆಲ್ಫೀ ವಿಡಿಯೋ ತೆಗೆದುಕೊಳ್ಳುತ್ತಿದ್ದಾಗ ರೈಲೊಂದು ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಜೋಲಾರ್​ಪೇಟ್​ ಪೊಲೀಸ್ ಠಾಣೆ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಹಾಗೇ, ಯುವಕನ ಮೃತದೇಹವನ್ನು ಪೋಸ್ಟ್​ಮಾರ್ಟಮ್​ಗೆ ಕಳಿಸಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡು, ತನಿಖೆ ನಡೆಸುತ್ತಿದ್ದಾರೆ. ಸ್ವಲ್ಪ ದಿನಗಳ ಹಿಂದೆ ಇಂಥದ್ದೇ ದುರ್ಘಟನೆ ದೆಹಲಿಯ ಹೊರವಲಯದಲ್ಲಿರುವ ಗುರುಗ್ರಾಮದಲ್ಲಿ ನಡೆದಿತ್ತು. ಅಲ್ಲಿ ನಿರ್ಮಾಣಹಂತದಲ್ಲಿದ್ದ ರೈಲ್ವೆ ಮೇಲ್ಸೇತುವೆ ಹಳಿಯ ಬಳಿ ನಾಲ್ವರು ಯುವಕರು ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾಗ ರೈಲು ಡಿಕ್ಕಿ ಹೊಡೆದು ಅವರೆಲ್ಲ ಸ್ಥಳದಲ್ಲೇ ಮೃತಪಟ್ಟಿದ್ದರು.

ಇದನ್ನೂ ಓದಿ: ಕಲ್ಕತ್ತಾ ಹೈಕೋರ್ಟ್‌ ಆವರಣದಲ್ಲಿ ಪ್ರತಿಭಟನೆ; ಪಿ ಚಿದಂಬರಂನ್ನು ಮಮತಾ ಸರ್ಕಾರದ ‘ದಲಾಲ್’ ಎಂದ ವಕೀಲರು

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ