ಸಿಕ್ಕಿಂನಲ್ಲಿ ಮೇಘಸ್ಫೋಟ, ಪ್ರವಾಹ, 23 ಸೇನಾ ಸಿಬ್ಬಂದಿ ನಾಪತ್ತೆ

|

Updated on: Oct 04, 2023 | 10:06 AM

ಉತ್ತರ ಸಿಕ್ಕಿಂನಲ್ಲಿ ಮೇಘಸ್ಫೋಟ, ಪ್ರವಾಹ ಸಂಭವಿಸಿದ್ದು, 23 ಮಂದಿ ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ.

ಸಿಕ್ಕಿಂನಲ್ಲಿ ಮೇಘಸ್ಫೋಟ, ಪ್ರವಾಹ, 23 ಸೇನಾ ಸಿಬ್ಬಂದಿ ನಾಪತ್ತೆ
ಪ್ರವಾಹ
Image Credit source: Madhyamam
Follow us on

ಉತ್ತರ ಸಿಕ್ಕಿಂನಲ್ಲಿ ಮೇಘಸ್ಫೋಟ, ಪ್ರವಾಹ ಸಂಭವಿಸಿದ್ದು, 23 ಮಂದಿ ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಅನೇಕ ಪ್ರದೇಶಗಳು ಜಲಾವೃತವಾಗಿವೆ, ಪ್ರವಾಹದ ನಂತರ ಚುಂಗ್‌ಥಾಂಗ್ ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡಿದ್ದರಿಂದ ಕೆಳಭಾಗದ ಪ್ರದೇಶಗಳಲ್ಲಿ ನೀರಿನ ಮಟ್ಟ ಇದ್ದಕ್ಕಿದ್ದಂತೆ 15-20 ಅಡಿ ಎತ್ತರಕ್ಕೆ ಏರಿದೆ ಎಂದು ವರದಿಯಾಗಿದೆ.

ಸಿಂಘ್‌ಥಾಮ್ ಬಳಿಯ ಬರ್ದಂಗ್‌ನಲ್ಲಿ ನಿಲ್ಲಿಸಲಾಗಿದ್ದ ಸೇನಾ ವಾಹನಗಳು ಮುಳುಗಿವೆ. ಇದಲ್ಲದೇ 23 ಸೇನಾ ಸಿಬ್ಬಂದಿಯೂ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ನದಿ ಉಕ್ಕಿ ಹರಿಯುತ್ತಿರುವ ಕಾರಣ ತೀಸ್ತಾ ನದಿಯ ಮೇಲಿನ ಸಿಂಥಮ್ ಕಾಲು ಸೇತುವೆ ಕುಸಿದಿದೆ. ಪಶ್ಚಿಮ ಬಂಗಾಳದ ಜಲ್ಪೈಗುರಿ ಆಡಳಿತವು ಮುನ್ನೆಚ್ಚರಿಕೆ ಕ್ರಮವಾಗಿ ನದಿಯ ಕೆಳಗಿನ ಜಲಾನಯನ ಪ್ರದೇಶದಿಂದ ಜನರನ್ನು ಸ್ಥಳಾಂತರಿಸುತ್ತಿದೆ. ಸಿಕ್ಕಿಂ ಸರ್ಕಾರ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿದೆ. ತೀಸ್ತಾ ನದಿಯಿಂದ ದೂರ ಇರುವಂತೆ ಜನರಿಗೆ ತಿಳಿಸಲಾಗಿದೆ.

ಮತ್ತಷ್ಟು ಓದಿ: ಲಿಬಿಯಾದಲ್ಲಿ ಡೇನಿಯನ್ ಚಂಡಮಾರುತ, ಭಾರಿ ಪ್ರವಾಹಕ್ಕೆ ಸಿಲುಕಿ 2 ಸಾವಿರಕ್ಕೂ ಅಧಿಕ ಮಂದಿ ಸಾವು, ಸಾವಿರಾರು ಮಂದಿ ನಾಪತ್ತೆ

ಮೇಘಸ್ಫೋಟಗೊಂಡು ಪ್ರವಾಹದ ಸ್ಥಿತಿ ಎದುರಾಗಿದ್ದು, ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು.
ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿಯಾಗಿಲ್ಲ ಆದರೆ ಸಿಂಗ್ಟಾಮ್‌ನಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಕೆಲವರು ನಾಪತ್ತೆಯಾಗಿದ್ದಾರೆ, ಅವರ ಪತ್ತೆಗೆ ಪ್ರಯತ್ನ ನಡೆಯುತ್ತಿದೆ ಎಂಬ ಮಾಹಿತಿ ಇದೆ.

ಆಗಸ್ಟ್ 18 ರಂದು ಉತ್ತರಾಖಂಡದ ಚಮೋಲಿಯ ಥರಾಲಿ ಪ್ರದೇಶದಲ್ಲಿ ಭಾರೀ ಮಳೆಯ ನಂತರ ಮೇಘಸ್ಫೋಟ ಸಂಭವಿಸಿತ್ತು. ಣ್ಮತಿ ನದಿಯ ನೀರಿನ ಮಟ್ಟವು ಅಪಾಯದ ಮಟ್ಟವನ್ನು ಮೀರಿ ಹರಿಯಲು ಪ್ರಾರಂಭಿಸಿತು ಮತ್ತು ಪಿಂಡಾರ್ ನದಿಯೂ ಉಕ್ಕಿ ಹರಿಯಿತು. ನದಿಗಳ ನೀರು ಜನರ ಮನೆ ಹಾಗೂ ಶಿವನ ದೇವಸ್ಥಾನಕ್ಕೆ ನುಗ್ಗಿತ್ತು. ಇದರಿಂದ ಅಪಾರ ನಷ್ಟ ಉಂಟಾಗಿತ್ತು. ಹಲವು ಮನೆಗಳಿಗೆ ಹಾನಿಯಾಗಿತ್ತು.

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:22 am, Wed, 4 October 23