ಬೆಳಗಿನ ಜಾವ ಟ್ರಕ್​ ಡಿಕ್ಕಿ: ಮತ್ತೆ ವಲಸೆ ಕಾರ್ಮಿಕರ ದುರ್ಮರಣ! ಎಲ್ಲಿ?

ಲಕ್ನೋ: ಕೊರೊನಾ ಲಾಕ್​ಡೌನ್​ ಸಡಿಲಿಕೆ ಮಾಡಿದ ಬಳಿಕ ವಲಸೆ ಕಾರ್ಮಿಕರ ದುರಂತಗಳ ಸರಮಾಲೆ ಇನ್ನೂ ನಿಂತಿಲ್ಲ. ಎರಡು ಟ್ರಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 21 ಕಾರ್ಮಿಕರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಔರೈಯಾ ಬಳಿ ಶನಿವಾರ ಮುಂಜಾನೆ ಸಂಭವಿಸಿದೆ. ಅಪಘಾತದಲ್ಲಿ 10ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಲಾಕ್​ಡೌನ್​ ಸಡಿಲಿಕೆ ಹಿನ್ನೆಲೆಯಲ್ಲಿ ರಾಜಸ್ಥಾನದಿಂದ ಉತ್ತರ ಪ್ರದೇಶದಲ್ಲಿರುವ ತಮ್ಮ ನಿವಾಸಗಳಿಗೆ ವಲಸೆ ಕಾರ್ಮಿಕರು ಟ್ರಕ್​ನಲ್ಲಿ ತೆರಳುತ್ತಿದ್ದರು. ಬೆಳಗಿನ ಜಾವವೇ ಜವರಾಯ ಅಟ್ಟಹಾಸ ಮೆರೆದಿದ್ದು, ಟ್ರಕ್​ನಲ್ಲಿದ್ದ […]

ಬೆಳಗಿನ ಜಾವ ಟ್ರಕ್​ ಡಿಕ್ಕಿ: ಮತ್ತೆ ವಲಸೆ ಕಾರ್ಮಿಕರ ದುರ್ಮರಣ! ಎಲ್ಲಿ?
ಸಾಧು ಶ್ರೀನಾಥ್​

Updated on: May 16, 2020 | 10:15 AM

ಲಕ್ನೋ: ಕೊರೊನಾ ಲಾಕ್​ಡೌನ್​ ಸಡಿಲಿಕೆ ಮಾಡಿದ ಬಳಿಕ ವಲಸೆ ಕಾರ್ಮಿಕರ ದುರಂತಗಳ ಸರಮಾಲೆ ಇನ್ನೂ ನಿಂತಿಲ್ಲ. ಎರಡು ಟ್ರಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 21 ಕಾರ್ಮಿಕರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಔರೈಯಾ ಬಳಿ ಶನಿವಾರ ಮುಂಜಾನೆ ಸಂಭವಿಸಿದೆ. ಅಪಘಾತದಲ್ಲಿ 10ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಲಾಕ್​ಡೌನ್​ ಸಡಿಲಿಕೆ ಹಿನ್ನೆಲೆಯಲ್ಲಿ ರಾಜಸ್ಥಾನದಿಂದ ಉತ್ತರ ಪ್ರದೇಶದಲ್ಲಿರುವ ತಮ್ಮ ನಿವಾಸಗಳಿಗೆ ವಲಸೆ ಕಾರ್ಮಿಕರು ಟ್ರಕ್​ನಲ್ಲಿ ತೆರಳುತ್ತಿದ್ದರು. ಬೆಳಗಿನ ಜಾವವೇ ಜವರಾಯ ಅಟ್ಟಹಾಸ ಮೆರೆದಿದ್ದು, ಟ್ರಕ್​ನಲ್ಲಿದ್ದ 21 ವಲಸೆ ಕಾರ್ಮಿಕರು ಸಾವಿಗೀಡಾಗಿದ್ದಾರೆ.

Published On - 7:31 am, Sat, 16 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us