AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ರಾಸ್​ ಪೈಶಾಚಿಕ ಕೃತ್ಯ ವಿರೋಧಿಸಿ 236 ದಲಿತರು ಬೌದ್ಧ ಧರ್ಮಕ್ಕೆ ಮತಾಂತರವಾದ್ರು

ಲಕ್ನೋ: ನಿರ್ಭಯಾ ಪ್ರಕರಣದ ನಂತರ ಇಡೀ ದೇಶವೇ ತಲೆ ತಗ್ಗಿಸುವಂತೆ ಮಾಡಿದ ಪ್ರಕರಣವೆಂದರೆ ಅದು ಉತ್ತರ ಪ್ರದೇಶದ ಹತ್ರಾಸ್​ನಲ್ಲಿ ನಡೆದ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣ. 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿ ಅಮಾನವೀಯವಾಗಿ ಕೊಲೆಗೈದಿದ್ದ ದುಷ್ಕರ್ಮಿಗಳ ಕೃತ್ಯವನ್ನು ಖಂಡಿಸಿ ದಲಿತ ಸಮುದಾಯದ ಕೆಲವರು ಬೌದ್ಧ ಧರ್ಮಕ್ಕೆ ಮತಾಂತರವಾಗಿದ್ದಾರೆ. ಉತ್ತರ ಪ್ರದೇಶದ ಘಾಜಿಯಾಬಾದ್​ನಲ್ಲಿ ದಲಿತ ಸಮುದಾಯಕ್ಕೆ ಸೇರಿದ್ದ 236 ಜನರು ಅಕ್ಟೋಬರ್​ 14ರಂದು ಬೌದ್ಧ ಧರ್ಮಕ್ಕೆ ಮತಾಂತರಗೊಂಡರು. ಡಾ. ಬಿ.ಆರ್​. ಅಂಬೇಡ್ಕರ್​ರ […]

ಹತ್ರಾಸ್​ ಪೈಶಾಚಿಕ ಕೃತ್ಯ ವಿರೋಧಿಸಿ 236 ದಲಿತರು ಬೌದ್ಧ ಧರ್ಮಕ್ಕೆ ಮತಾಂತರವಾದ್ರು
ಹತ್ರಾಸ್​ನಲ್ಲಿ ಬಾಲಕಿ ಶವ ಸುಟ್ಟ ಪೊಲೀಸ್ ಅಧಿಕಾರಿಗಳು (ಸಂಗ್ರಹ ಚಿತ್ರ)
Follow us
KUSHAL V
|

Updated on:Oct 21, 2020 | 7:13 PM

ಲಕ್ನೋ: ನಿರ್ಭಯಾ ಪ್ರಕರಣದ ನಂತರ ಇಡೀ ದೇಶವೇ ತಲೆ ತಗ್ಗಿಸುವಂತೆ ಮಾಡಿದ ಪ್ರಕರಣವೆಂದರೆ ಅದು ಉತ್ತರ ಪ್ರದೇಶದ ಹತ್ರಾಸ್​ನಲ್ಲಿ ನಡೆದ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣ. 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿ ಅಮಾನವೀಯವಾಗಿ ಕೊಲೆಗೈದಿದ್ದ ದುಷ್ಕರ್ಮಿಗಳ ಕೃತ್ಯವನ್ನು ಖಂಡಿಸಿ ದಲಿತ ಸಮುದಾಯದ ಕೆಲವರು ಬೌದ್ಧ ಧರ್ಮಕ್ಕೆ ಮತಾಂತರವಾಗಿದ್ದಾರೆ.

ಉತ್ತರ ಪ್ರದೇಶದ ಘಾಜಿಯಾಬಾದ್​ನಲ್ಲಿ ದಲಿತ ಸಮುದಾಯಕ್ಕೆ ಸೇರಿದ್ದ 236 ಜನರು ಅಕ್ಟೋಬರ್​ 14ರಂದು ಬೌದ್ಧ ಧರ್ಮಕ್ಕೆ ಮತಾಂತರಗೊಂಡರು. ಡಾ. ಬಿ.ಆರ್​. ಅಂಬೇಡ್ಕರ್​ರ ಕುಟುಂಬದವರಾದ ರಾಜರತನ್​ ಅಂಬೇಡ್ಕರ್​ರ ನೇತೃತ್ವದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಇವರೆಲ್ಲಾ ಮತಾಂತರಗೊಂಡರು. ಅಂದ ಹಾಗೆ, ಸುಮಾರು 60 ವರ್ಷಗಳ ಹಿಂದೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್​. ಅಂಬೇಡ್ಕರ್​ರವರು ಇದೇ ದಿನದಂದು ತಮ್ಮ ಅನುಯಾಯಿಗಳೊಂದಿಗೆ ಬೌದ್ಧ ಧರ್ಮಕ್ಕೆ ಮತಾಂತರವಾಗಿದ್ದರು.

ಹತ್ರಾಸ್​ನಲ್ಲಿ ನಡೆದ ಪೈಶಾಚಿಕ ಕೃತ್ಯಕ್ಕೆ ಬೇಸತ್ತು ನಾವು ಮತಾಂತರಗೊಂಡೆವು. ಮೃತ ಯುವತಿಯ ಕುಟುಬಂಸ್ಥರನ್ನು ಜಿಲ್ಲಾಡಳಿತ ನಡೆಸಿಕೊಂಡ ರೀತಿ ನಮ್ಮನ್ನು ಜರ್ಜರಿತಗೊಳಿಸಿದೆ ಎಂದು ಮತಾಂತರಗೊಂಡ ಕೆಲವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಮತ್ತೆ ಕೆಲವರು ಬೇರೆ ಧರ್ಮವನ್ನು ಒಪ್ಪಿಕೊಳ್ಳೋದು ಅಷ್ಟು ಸುಲಭವಲ್ಲ. ನಮ್ಮ ಹಳೇ ಸಂಪ್ರದಾಯಗಳನ್ನು ಬಿಡೋದ್ದಕ್ಕೆ ಸಹ ಮನಸ್ಸು ಒಪ್ಪುವುದಿಲ್ಲ. ಆದರೆ, ಇದೀಗ ನಮಗೆ ಸಾಕಾಗಿ ಹೋಗಿದೆ. ಮೇಲ್ಜಾತಿಯವರ ತಾರತಮ್ಯದಿಂದ ಬೇಸತ್ತಿದ್ದೇವೆ ಎಂದು ತಮ್ಮ ಅಳಲು ತೋಡಿಕೊಂಡರು. ಇದಲ್ಲದೆ, ಕರ್ನಾಟಕದ ಉಡುಪಿಯಲ್ಲಿ ದಲಿತ ಸಮುದಾಯದ ಸುಮಾರು 50 ಸದಸ್ಯರು ಅಕ್ಟೋಬರ್​ 18ರಂದು ಬೌದ್ಧ ಧರ್ಮಕ್ಕೆ ಮತಾಂತರಗೊಂಡರು ಎಂದು ತಿಳದುಬಂದಿದೆ.

Published On - 7:11 pm, Wed, 21 October 20

ಒಂದು ಟಗರನ್ನಿಟ್ಟುಕೊಂಡಿರುವ ರೌಡಿಯೊಬ್ಬ ಹೊಟ್ಟೆಪಾಡಿಗೆ ಕುರಿ ಕಾಯ್ತೀನಿ ಅಂದ
ಒಂದು ಟಗರನ್ನಿಟ್ಟುಕೊಂಡಿರುವ ರೌಡಿಯೊಬ್ಬ ಹೊಟ್ಟೆಪಾಡಿಗೆ ಕುರಿ ಕಾಯ್ತೀನಿ ಅಂದ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ