AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳಬಟ್ಟಿ ಸೇವನೆಯಿಂದ ಬಿಹಾರದ ಎರಡು ಜಿಲ್ಲೆಗಳಲ್ಲಿ 24 ಜನರ ಸಾವು

ಹಲವಾರು ಜನರು ಅಸ್ವಸ್ಥರಾಗಿದ್ದಾರೆ. ಬಿಹಾರದಲ್ಲಿ ಸಂಪೂರ್ಣ ಪಾನನಿಷೇಧ ಜಾರಿಯಲ್ಲಿದ್ದರೂ ಈ ದುರ್ಘಟನೆ ನಡೆದಿದೆ.

ಕಳ್ಳಬಟ್ಟಿ ಸೇವನೆಯಿಂದ ಬಿಹಾರದ ಎರಡು ಜಿಲ್ಲೆಗಳಲ್ಲಿ 24 ಜನರ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Nov 04, 2021 | 11:16 PM

Share

ಪಾಟ್ನಾ: ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ 8 ಹಾಗೂ ಗೋಪಾಲ್​ಗಂಜ್ ಜಿಲ್ಲೆಯಲ್ಲಿ 16 ಸೇರಿದಂತೆ ಒಟ್ಟು 24 ಮಂದಿ ಕಳ್ಳಬಟ್ಟಿ ಸೇವಿಸಿ ಮೃತಪಟ್ಟಿದ್ದಾರೆ. ಹಲವಾರು ಜನರು ಅಸ್ವಸ್ಥರಾಗಿದ್ದಾರೆ. ಬಿಹಾರದಲ್ಲಿ ಸಂಪೂರ್ಣ ಪಾನನಿಷೇಧ ಜಾರಿಯಲ್ಲಿದ್ದರೂ ಈ ದುರ್ಘಟನೆ ನಡೆದಿದೆ.

ಪಶ್ಚಿಮ ಚಂಪಾರಣ್ ಜಿಲ್ಲೆಯ ಕೇಂದ್ರ ಸ್ಥಾನವಾಗಿರುವ ಬೆಟ್ಟಯಾ ಸಮೀಪದ ತೆಲ್ಹುವಾ ಗ್ರಾಮದಲ್ಲಿ ಎಂಟು ಮಂದಿ ಕಳ್ಳಬಟ್ಟಿ ಸೇವಿಸಿ ಸಾವನ್ನಪ್ಪಿದ್ದಾರೆ. ಗೋಪಾಲ್​ಗಂಜ್​ನಲ್ಲಿ ನಡೆದ ಮತ್ತೊಂದು ಪ್ರಕರಣದಲ್ಲಿ ಸತ್ತವರ ಸಂಖ್ಯೆಯು 16ಕ್ಕೆ ಮುಟ್ಟಿದೆ. ಸತ್ತವರ ಸಂಖ್ಯೆಯನ್ನು ಜಿಲ್ಲಾಡಳಿತ ದೃಢಪಡಿಸಿದೆ. ಎರಡೂ ಜಿಲ್ಲಾಡಳಿತಗಳು ಸಾವಿನ ಕಾರಣವನ್ನು ದೃಢಪಡಿಸಿಲ್ಲ. ಕಳೆದ 10 ದಿನಗಳಲ್ಲಿ ವರದಿಯಾಗಿರುವ 10ನೇ ಕಳ್ಳಬಟ್ಟಿ ದುರಂತ ತೆಲ್ಹುವಾ ಗ್ರಾಮದ್ದು.

ಗೋಪಾಲ್​ಗಂಜ್​ಗೆ ಸಚಿವ ಜನಕ್ ರಾಮ್ ಧಾವಿಸಿದ್ದಾರೆ. ‘ನಾನು ಮೃತರ ಮನೆಗಳಿಗೆ ಭೇಟಿ ನೀಡಿ ಕುಟುಂಬ ಸದಸ್ಯರೊಂದಿಗೆ ಮಾತನಾಡಿದೆ. ಅವರು ಕಳ್ಳಬಟ್ಟಿ ಸೇವಿಸಿ ಸಾವನ್ನಪ್ಪಿದ್ದಾರೆ ಎನ್ನಲು ಯಾವುದೇ ಆಧಾರವಿಲ್ಲ. ಎನ್​ಡಿಎ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ನಡೆಯುತ್ತಿರುವ ಷಡ್ಯಂತ್ರ ಇದಾಗಿರಬಹುದು ಎಂದು ಅವರು ಪ್ರತಿಕ್ರಿಯಿಸಿದರು. ಈವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯ ವರ್ತಕರು ಮಾರಿದ್ದ ಮದ್ಯವನ್ನು ಸುಮಾರು 20 ಮಂದಿ ಸೇವಿಸಿದ್ದಾರೆ. ಇವರೆಲ್ಲರೂ ಪರಿಶಿಷ್ಟ ಜಾತಿಗೆ ಸೇರಿದವರು ಎಂದು ಪೊಲೀಸರು ತಿಳಿಸಿದ್ದಾರೆ.

ನಿತೀಶ್ ಕುಮಾರ್ ನೇತೃತ್ವದ ಬಿಹಾರದ ಜೆಡಿಯು ಸರ್ಕಾರವು ಏಪ್ರಿಲ್ 5, 2016ರಂದು ರಾಜ್ಯದಲ್ಲಿ ಮದ್ಯ ತಯಾರಿಕೆ, ಮಾರಾಟ, ದಾಸ್ತಾನು, ಸಾಗಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿತ್ತು.

ಇದೀಗ ಸಂಭವಿಸಿರುವ ಈ ದುರಂತವು ರಾಜಕೀಯ ಕೆಸರೆರೆಚಾಟಕ್ಕೂ ವೇದಿಕೆ ಕಲ್ಪಿಸಿದೆ. ರಾಜ್ಯ ಸರ್ಕಾರವು ಮದ್ಯ ನಿಷೇಧವನ್ನು ಸರಿಯಾಗಿ ಜಾರಿಗೆ ತರುವಲ್ಲಿ ವಿಫಲವಾಗಿದೆ. ಮರಣೋತ್ತರ ಪರೀಕ್ಷೆಗೆ ಮೊದಲೇ ಪೊಲೀಸರು ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಅವಕಾಶ ಕೊಡುತ್ತಿದ್ದಾರೆ. ಮುಖ್ಯಮಂತ್ರಿ ಈ ದುರಂತದ ಹೊಣೆ ಹೊರಬೇಕು ಎಂದು ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಸರ್ಕಾರವನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: ಬಿಹಾರದಲ್ಲಿ ನಕಲಿ ಮದ್ಯ ಸೇವಿಸಿ 3 ಸಾವು; ಮದ್ಯ ನಿಷೇಧವಿರುವ ಇಲ್ಲಿ ಈ ವರ್ಷ ನಕಲಿ ಮದ್ಯ ಸೇವಿಸಿ ಸಾವಿಗೀಡಾದವರು 70 ಮಂದಿ ಇದನ್ನೂ ಓದಿ: ಉಪ ಚುನಾವಣೆ: ಬಿಹಾರದಲ್ಲಿ ಜೆಡಿಯು, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್​ ಗೆಲುವು

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ