AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಸ್‌ಪೋರ್ಟ್ ಹಗರಣದಲ್ಲಿ 24 ಮಂದಿ ಸರ್ಕಾರಿ ಅಧಿಕಾರಿಗಳ ಬಂಧನ, 50 ಸ್ಥಳಗಳಲ್ಲಿ ಸಿಬಿಐ ಶೋಧ

ನಕಲಿ ದಾಖಲೆಯ ಆಧಾರದ ಮೇಲೆ ಪಾಸ್​​​ಪೋರ್ಟ್​​ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ (Central Bureau of Investigation) ಅಧಿಕಾರಿಗಳು ಪಶ್ಚಿಮ ಬಂಗಾಳ ಮತ್ತು ಗ್ಯಾಂಗ್​​ಟಾಕ್​​​ನ 20 ಪ್ರದೇಶಗಳ ಮೇಲೆ ದಾಳಿ ಮಾಡಿದ್ದಾರೆ. ಜತೆಗೆ ಸರ್ಕಾರಿ ಅಧಿಕಾರಿಗಳು ಹಾಗೂ ಖಾಸಗಿ ಕಂಪನಿಗಳ ವ್ಯಕ್ತಿಗಳು ಸೇರಿದಂತೆ ಒಟ್ಟು 24 ಮಂದಿಯನ್ನು ಇಂದು (ಅ.14) ಬಂಧಿಸಲಾಗಿದೆ. ಗ್ಯಾಂಗ್‌ಟಾಕ್‌ನಲ್ಲಿ ನಿಯೋಜಿಸಲಾದ ಅಧಿಕಾರಿ ಮತ್ತು ಮಧ್ಯವರ್ತಿಯನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಸ್‌ಪೋರ್ಟ್ ಹಗರಣದಲ್ಲಿ 24 ಮಂದಿ ಸರ್ಕಾರಿ ಅಧಿಕಾರಿಗಳ ಬಂಧನ, 50 ಸ್ಥಳಗಳಲ್ಲಿ ಸಿಬಿಐ ಶೋಧ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on: Oct 14, 2023 | 1:05 PM

ಪಶ್ಚಿಮ ಬಂಗಾಳ, ಅ.14: ನಕಲಿ ದಾಖಲೆಯ ಆಧಾರದ ಮೇಲೆ ಪಾಸ್​​​ಪೋರ್ಟ್​​ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ (Central Bureau of Investigation) ಅಧಿಕಾರಿಗಳು ಪಶ್ಚಿಮ ಬಂಗಾಳ ಮತ್ತು ಗ್ಯಾಂಗ್​​ಟಾಕ್​​​ನ 20 ಪ್ರದೇಶಗಳ ಮೇಲೆ ದಾಳಿ ಮಾಡಿದ್ದಾರೆ. ಜತೆಗೆ ಸರ್ಕಾರಿ ಅಧಿಕಾರಿಗಳು ಹಾಗೂ ಖಾಸಗಿ ಕಂಪನಿಗಳ ವ್ಯಕ್ತಿಗಳು ಸೇರಿದಂತೆ ಒಟ್ಟು 24 ಮಂದಿಯನ್ನು ಇಂದು (ಅ.14) ಬಂಧಿಸಲಾಗಿದೆ. ಗ್ಯಾಂಗ್‌ಟಾಕ್‌ನಲ್ಲಿ ನಿಯೋಜಿಸಲಾದ ಅಧಿಕಾರಿ ಮತ್ತು ಮಧ್ಯವರ್ತಿಯನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಣಕ್ಕೆ ಆಸೆಪಟ್ಟು ಈ ಅಧಿಕಾರಿಗಳು ಮತ್ತು ವ್ಯಕ್ತಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೆಲವರಿಗೆ ಪಾಸ್​​​ಪೋರ್ಟ್ ನೀಡಿದ್ದಾರೆ. ಈ ಕಾರಣಕ್ಕೆ 16 ಸರ್ಕಾರಿ ಅಧಿಕಾರಿಗಳು ಸೇರಿದಂತೆ 24 ಮಂದಿಯನ್ನು ಬಂಧಿಸಲಾಗಿದೆ. ಇದೀಗ ಸಿಬಿಐ ಕೋಲ್ಕತ್ತಾ, ಸಿಲಿಗುರಿ, ಗ್ಯಾಂಗ್ಟಾಕ್ ಮತ್ತು ಇತರ ಸ್ಥಳಗಳಲ್ಲಿ ಕಾರ್ಯಚರಣೆಯನ್ನು ನಡೆಸುತ್ತಿದ್ದಾರೆ. ಈ 24 ಮಂದಿಯ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಸಿಬಿಐ ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ:ಉದ್ಯೋಗ ಹಗರಣ: ಬಿಜೆಪಿ ಶಾಸಕ ಪಾರ್ಥಸಾರಥಿ ಚಟರ್ಜಿ ಮನೆಯಲ್ಲಿ ಸಿಬಿಐ ಶೋಧ

ಇದಕ್ಕೂ ಮುನ್ನ 2002ರಲ್ಲಿ ಇಬ್ಬರು ಸೌದಿ ಅರೇಬಿಯಾದ ರಾಯಭಾರಿ ಕಚೇರಿಯ ನಕಲಿ ಪಾಸ್‌ಪೋರ್ಟ್‌ಗಳು, ವೀಸಾ ಸ್ಟಿಕ್ಕರ್‌ಗಳು ಮತ್ತು ರಬ್ಬರ್ ಸ್ಟ್ಯಾಂಪ್‌ಗಳನ್ನು ಹೊಂದಿದ್ದರು ಎಂಬ ಆರೋಪದ ಮೇಲೆ ಬಂಧಿಸಲಾಗಿತ್ತು. ಆದರೆ ಇದೀಗ ಅವರನ್ನು ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ. ದೇಶದಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅಜೀತ್ ನಾರಾಯಣ್ ಅವರು ಆರೋಪಿಗಳಾಗಿದ್ದ ಸುಲೇಮಾನ್ ಖಾನ್ ಮತ್ತು ಹಸಿಬುಲ್ ರೆಹಮಾನ್ ವಿರುದ್ಧ 2002ರಲ್ಲಿ ಫಾರ್ಷ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ