AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala Rain: ಕೇರಳದಲ್ಲಿ ಭಾರಿ ಮಳೆ, ಪ್ರವಾಹ; ಮೃತರ ಸಂಖ್ಯೆ 24ಕ್ಕೆ ಏರಿಕೆ, 11 ಜಿಲ್ಲೆಗಳಲ್ಲಿ ಹಳದಿ ಅಲರ್ಟ್​

ಕೇರಳದಲ್ಲಿ ಅಕ್ಟೋಬರ್​ 21ರವರೆಗೂ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಮಧ್ಯೆ ಈಗಿನವರೆಗೆ ಆದ ನಷ್ಟ, ಜೀವ ಹಾನಿಯ ವಿವರವನ್ನು ಕೇಂದ್ರ ಸರ್ಕಾರ ಪಡೆದಿದೆ.

Kerala Rain: ಕೇರಳದಲ್ಲಿ ಭಾರಿ ಮಳೆ, ಪ್ರವಾಹ; ಮೃತರ ಸಂಖ್ಯೆ 24ಕ್ಕೆ ಏರಿಕೆ, 11 ಜಿಲ್ಲೆಗಳಲ್ಲಿ ಹಳದಿ ಅಲರ್ಟ್​
ಕೇರಳದಲ್ಲಿ ಪ್ರವಾಹ ಪರಿಸ್ಥಿತಿ
TV9 Web
| Edited By: |

Updated on:Oct 18, 2021 | 10:12 AM

Share

ಕೇರಳ ಮಳೆಗೆ ತತ್ತರಿಸುತ್ತದೆ. ಭೂಕುಸಿತ-ಪ್ರವಾಹ (Kerala Rain) ಪರಿಸ್ಥಿತಿಯಿಂದಾಗಿ ಶನಿವಾರದಿಂದ ಇದುವರೆಗೆ ಸುಮಾರು 24 ಮಂದಿ ಜೀವ ಕಳೆದುಕೊಂಡಿದ್ದಾರೆ. ಭಾನುವಾರ ಮಧ್ಯಾಹ್ನದ ಹೊತ್ತಿಗೆ ಮಳೆ ಸ್ವಲ್ಪ ಕಡಿಮೆಯಾಗಿದ್ದರೂ ಭೂಕುಸಿತದ ಅಪಾಯ ಇರುವುದರಿಂದ ಸ್ಥಳೀಯ ಆಡಳಿತ ಜನರಿಗೆ ಎಚ್ಚರಿಕೆ ನೀಡಿದೆ.  ಇಂದು 11 ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಹಳದಿ ಅಲರ್ಟ್ (Yellow Alert)​ ಘೋಷಿಸಿದೆ. ಹಾಗೇ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲು, ಮೇಘಸ್ಫೋಟವಾಗಿದ್ದೂ ಒಂದು ಕಾರಣ ಎಂದು ಹೇಳಿದೆ.

ಕೇರಳ ಮಳೆಯಿಂದಾದ ಅನಾಹುತಗಳ ಬಗ್ಗೆ ಇಲ್ಲಿದೆ ನೋಡಿ ಮಾಹಿತಿ 1. ಒಟ್ಟು ಮೃತರಾದವರಲ್ಲಿ ಅತಿಹೆಚ್ಚು ಸಾವಾಗಿದ್ದು ಕೊಟ್ಟಾಯಂ ಜಿಲ್ಲೆಯಲ್ಲಿ. ಇಲ್ಲಿ 13 ಮೃತದೇಹಗಳು ಸಿಕ್ಕಿವೆ. ಅದು ಬಿಟ್ಟರೆ ಇಡುಕ್ಕಿಯಲ್ಲಿ 9 ಜನರ ಶವ ಪತ್ತೆಯಾಗಿದ್ದು, ಇದು ಮಳೆ, ಪ್ರವಾಹದಿಂದ ಆದ ಸಾವುಗಳೇ ಆಗಿವೆ. ಇಡುಕ್ಕಿಯಲ್ಲಿ ಇನ್ನಿಬ್ಬರು ನಾಪತ್ತೆಯಾಗಿದ್ದು, ಅವರನ್ನು ಹುಡುಕುವ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ. 2. ಅರೇಬಿಯನ್​ ಸಮುದ್ರದಲ್ಲಿ ಲಕ್ಷದ್ವೀಪದ ಸಮೀಪ ಕಡಿಮೆ ಒತ್ತಡ ಉಂಟಾಗುವ ಕಾರಣ ಮಳೆ ಇಂದು ಕೂಡ ಮುಂದುವರಿಯಲಿದೆ. ಇಂದು ಸಂಜೆಯವರೆಗೂ ಕೇರಳದಲ್ಲಿ ಭರ್ಜರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 3. ಭಾರಿ ಮಳೆಯಿಂದಾಗಿ ಇಡುಕ್ಕಿ ಮತ್ತು ಕೊಟ್ಟಾಯಂ ಜಿಲ್ಲೆಯಲ್ಲಿ ಭೂಕುಸಿತ ಉಂಟಾಗಿದೆ. ಇಡುಕ್ಕಿಯ ಕೊಕ್ಕಾಯರ್​ ಮತ್ತು ಕೊಟ್ಟಾಯಂನ ಕೂಟಿಕ್ಕಲ್​​ ಎಂಬಲ್ಲಿ ಪ್ರಬಲವಾಗಿ ಭೂಕುಸಿತ ಸಂಭವಿಸಿದೆ. ಇನ್ನು ಇಡುಕ್ಕಿಯ ಪೀರುಮೇಡು ಎಂಬಲ್ಲಿ 24 ಸಿಎಂ ನಷ್ಟು ಮಳೆಬಿದ್ದಿದ್ದು, ಇದು ಕೇರಳದಲ್ಲಿ ಅತಿಹೆಚ್ಚು ಮಳೆ ಬಿದ್ದ ಪ್ರದೇಶವಾಗಿದೆ. 4. ಪಥನಂತಿಟ್ಟ, ಇಡುಕ್ಕಿ, ಎರ್ನಾಕುಲಂ, ತ್ರಿಶೂರ್​, ಮಲಪ್ಪುರಂ ಮತ್ತು ಆಲಪ್ಪುಳಗಳಲ್ಲಿ  ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ಪಡೆ (NDRF)ಯ ಒಂದೊಂದು ತಂಡವನ್ನು ನಿಯೋಜಿಸಲಾಗಿದೆ. ಹಾಗೇ, ಇಡುಕ್ಕಿ, ಕೊಟ್ಟಾಯಂ, ಕೊಲ್ಲಂ, ಕಣ್ಣೂರ್​ ಮತ್ತು ಪಲಕ್ಕಡ್​​ಗಳಲ್ಲಿ ಹೆಚ್ಚುವರಿ ರಕ್ಷಣಾ ಪಡೆಗಳನ್ನು ನಿಯೋಜಿಸಲಾಗಿದೆ.  ತಿರುವನಂತಪುರಂ ಮತ್ತು ಕೊಟ್ಟಾಯಂಗಳಲ್ಲಿ ಭಾರತೀಯ ಸೇನಾ ಪಡೆಯ ತಂಡಗಳೂ ಕೂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. 5.  ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪದ ಕರಾವಳಿ ತೀರಗಳಲ್ಲಿ ಇಂದು ಸಂಜೆಯವರೆಗೂ ಮೀನುಗಾರಿಕೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ. ಇಂದು ರಾತ್ರಿ 11.30ರವರೆಗೂ ಸಮುದ್ರದಲ್ಲಿ ಅಲೆಗಳ ಪ್ರಮಾಣ ರಭಸವಾಗಿ ಇರಲಿದ್ದು, ಮೀನುಗಾರರಿಗೆ ಅಪಾಯ ಕಟ್ಟಿಟ್ಟಬುತ್ತಿ ಎಂದು ಹವಾಮಾನ ಇಲಾಖೆ ತಿಳಿಸಿದೆ. 6.  ಕೇರಳದಲ್ಲಿ ಅಕ್ಟೋಬರ್​ 21ರವರೆಗೂ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಮಧ್ಯೆ ಈಗಿನವರೆಗೆ ಆದ ಹಾನಿ, ನಷ್ಟ, ಜೀವ ಹಾನಿಯ ಸಂಪೂರ್ಣ ವಿವರವನ್ನು ಕೇಂದ್ರ ಸರ್ಕಾರ ಪಡೆದಿದೆ. ಪ್ರಧಾನಿ ನರೇಂದ್ರ ಮೋದಿಯವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್​ಗೆ ಕರೆ ಮಾಡಿ ಪರಿಸ್ಥಿತಿಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಹಾಗೇ, ಕೇರಳದಲ್ಲಿ ಈಗಿನ ಸಂದರ್ಭ ನಿಭಾಯಿಸಲು ಕೇಂದ್ರ ಸರ್ಕಾರ ಎಲ್ಲ ರೀತಿಯ ಸಹಾಯ ನೀಡುವುದಾಗಿ ಅಮಿತ್​ ಶಾ ತಿಳಿಸಿದ್ದಾರೆ.

ಇದನ್ನೂ ಓದಿ: Sri Reddy: ‘ಆತ ಸಲಿಂಗಕಾಮಿ, ಅಂಥ ವ್ಯಕ್ತಿ ಜತೆ ಸಮಂತಾ ಸಂಬಂಧ ಬೆಳೆಸಲ್ಲ’; ನಟಿ ಶ್ರೀರೆಡ್ಡಿ ಶಾಕಿಂಗ್​ ಹೇಳಿಕೆ

ವಿರಾಜಪೇಟೆ: ಗ್ರಾಮ‌ ಪಂಚಾಯಿತಿ ಸದಸ್ಯೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣು, ನಾಲ್ಕು ದಿನಗಳ ಬಳಿಕ ಸಾವು

Published On - 9:55 am, Mon, 18 October 21

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?