AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Central Railway Jobs: 2422 ಅಪ್ರೆಂಟಿಸ್​​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೇಂದ್ರ ರೈಲ್ವೆ; 5 ವಲಯಗಳಲ್ಲಿ ಇದೆ ಉದ್ಯೋಗ ಅವಕಾಶ

RRC Recruitment 2022: ಅಪ್ರೆಂಟಿಸ್​ ಹುದ್ದೆಗೆ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ 10ನೇ ತರಗತಿಯನ್ನು ಒಟ್ಟಾರೆ ಶೇ.50ರಷ್ಟು ಮಾರ್ಕ್ಸ್​​ಗಳೊಂದಿಗೆ ಉತ್ತೀರ್ಣರಾಗಿರಬೇಕು. ಮಾನ್ಯತೆ ಪಡೆದ ಶೈಕ್ಷಣಿಕ ಮಂಡಳಿಯಿಂದ ಸರ್ಟಿಫಿಕೇಟ್ ಪಡೆದಿರಬೇಕು.

Central Railway Jobs: 2422 ಅಪ್ರೆಂಟಿಸ್​​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೇಂದ್ರ ರೈಲ್ವೆ; 5 ವಲಯಗಳಲ್ಲಿ ಇದೆ ಉದ್ಯೋಗ ಅವಕಾಶ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Jan 18, 2022 | 6:39 PM

ಕೇಂದ್ರ ರೈಲ್ವೆಯ ನೇಮಕಾತಿ ಸೆಲ್​ ಅಪ್ರೆಂಟಿಸ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 2422 ಹುದ್ದೆಗಳ ನೇಮಕಾತಿ ಕುರಿತು rrccr.com ವೆಬ್​​ಸೈಟ್​ನಲ್ಲಿ ಅಧಿಸೂಚನೆ ಹೊರಡಿಸಿದ್ದು, ಆಸಕ್ತರು 2022ರ ಫೆಬ್ರವರಿ 16ರೊಳಗೆ ಅರ್ಜಿ ಸಲ್ಲಿಸಬೇಕು.  ಅಂದಹಾಗೆ, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಶುರುವಾಗಿದ್ದು, ಆನ್​ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಒಟ್ಟು 2422 ಖಾಲಿ ಹುದ್ದೆಗಳಲ್ಲಿ, ಮುಂಬೈ ಕ್ಲಸ್ಟರ್​ (ಎಂಎಂಸಿಟಿ)ನಲ್ಲಿ 1659, ಭೂಸಾವಲ್ ಕ್ಲಸ್ಟರ್​​ನಲ್ಲಿ 418, ಪುಣೆ ರೈಲ್ವೆ ಕ್ಲಸ್ಟರ್​ನಲ್ಲಿ 152, ನಾಗ್ಪುರ ಕ್ಲಸ್ಟರ್​ನಲ್ಲಿ 114 ಮತ್ತು ಸೊಲ್ಲಾಪುರ ಕ್ಲಸ್ಟರ್​​ನಲ್ಲಿ 79 ಹುದ್ದೆಗಳು ಖಾಲಿ ಇವೆ. 

ವಿದ್ಯಾರ್ಹತೆ ಏನಿರಬೇಕು? ಅಪ್ರೆಂಟಿಸ್​ ಹುದ್ದೆಗೆ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ 10ನೇ ತರಗತಿಯನ್ನು ಒಟ್ಟಾರೆ ಶೇ.50ರಷ್ಟು ಮಾರ್ಕ್ಸ್​​ಗಳೊಂದಿಗೆ ಉತ್ತೀರ್ಣರಾಗಿರಬೇಕು. ಮಾನ್ಯತೆ ಪಡೆದ ಶೈಕ್ಷಣಿಕ ಮಂಡಳಿಯಿಂದ ಸರ್ಟಿಫಿಕೇಟ್ ಪಡೆದಿರಬೇಕು. ನ್ಯಾಷನಲ್ ಕೌನ್ಸಿಲ್ ಫಾರ್ ವೊಕೇಶನಲ್ ಟ್ರೈನಿಂಗ್ ನೀಡಿದ ನ್ಯಾಶನಲ್​ ಟ್ರೇಡ್​ ಸರ್ಟಿಫಿಕೇಟ್​ ಹೊಂದಿರಬೇಕು ಅಥವಾ ತಾತ್ಕಾಲಿಕ ಪ್ರಮಾಣಪತ್ರವನ್ನಾದರೂ ಹೊಂದಿರಬೇಕು. 15 ವರ್ಷ ಮೇಲ್ಪಟ್ಟು 24 ವರ್ಷ ಒಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕ 100 ರೂಪಾಯಿ ಇರುತ್ತದೆ. ಮೆರಿಟ್​ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಆಯ್ಕೆಯಾದವರಿಗೆ 8000-10000 ರೂಪಾಯಿವರೆಗೆ ವೇತನ ಇರುತ್ತದೆ.

ಅರ್ಜಿಯನ್ನು ಆನ್​ಲೈನ್​ ಮೂಲಕವೇ ಕಳಿಸಬೇಕಾಗುತ್ತದೆ. ಭೌತಿಕವಾಗಿ ಕಳಿಸಿದರೆ ಅದು ಪರಿಗಣಿಸಲ್ಪಡುವುದಿಲ್ಲ. ಹಾಗೇ, ಸದ್ಯ 5 ವಲಯಗಳಲ್ಲಿ ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇವುಗಳಲ್ಲಿ ಯಾವುದಾದರೂ ಒಂದು ಕ್ಲಸ್ಟರ್​​ನ್ನು ಮಾತ್ರ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಅರ್ಜಿಯನ್ನು ಕಳಿಸಿದರೆ ಅಂಥವರ ಅಪ್ಲಿಕೇಶನ್​ಗಳು ತಿರಸ್ಕೃತಗೊಳ್ಳುತ್ತವೆ ಎಂದು ಕೇಂದ್ರ ರೈಲ್ವೆ ತಿಳಿಸಿದೆ.

ಇದನ್ನೂ ಓದಿ: ಪಾದಯಾತ್ರೆ ಮಾಡಿದ್ದಕ್ಕೆ ಕಾಂಗ್ರೆಸ್ ನಾಯಕರ ಮೇಲೆ ಕೇಸ್, ಕೊರೊನಾ ನಿಯಮ ಉಲ್ಲಂಘಿಸಿದ ಬಿಜೆಪಿ ಮುಖಂಡರಿಗೆ ಮಾಫಿ: ಸಿಎಸ್​ಗೆ ಕಾಂಗ್ರೆಸ್ ದೂರು

Published On - 6:38 pm, Tue, 18 January 22

ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ
ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ
ಚಂದ್ರನು ಕರ್ಕಾಟಕ ರಾಶಿಯಿಂದ ಪುನರ್ವಸು ನಕ್ಷತ್ರದೆಡೆಗೆ ಸಂಚಾರ
ಚಂದ್ರನು ಕರ್ಕಾಟಕ ರಾಶಿಯಿಂದ ಪುನರ್ವಸು ನಕ್ಷತ್ರದೆಡೆಗೆ ಸಂಚಾರ
‘ಕಾಲವೇ ಮೋಸಗಾರ’ ಚಿತ್ರಕ್ಕಾಗಿ ವಿದ್ಯಾರ್ಥಿಗಳ ಬಳಿ ತೆರಳಿದ ಭರತ್ ಸಾಗರ್
‘ಕಾಲವೇ ಮೋಸಗಾರ’ ಚಿತ್ರಕ್ಕಾಗಿ ವಿದ್ಯಾರ್ಥಿಗಳ ಬಳಿ ತೆರಳಿದ ಭರತ್ ಸಾಗರ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ