AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Central Railway Jobs: 2422 ಅಪ್ರೆಂಟಿಸ್​​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೇಂದ್ರ ರೈಲ್ವೆ; 5 ವಲಯಗಳಲ್ಲಿ ಇದೆ ಉದ್ಯೋಗ ಅವಕಾಶ

RRC Recruitment 2022: ಅಪ್ರೆಂಟಿಸ್​ ಹುದ್ದೆಗೆ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ 10ನೇ ತರಗತಿಯನ್ನು ಒಟ್ಟಾರೆ ಶೇ.50ರಷ್ಟು ಮಾರ್ಕ್ಸ್​​ಗಳೊಂದಿಗೆ ಉತ್ತೀರ್ಣರಾಗಿರಬೇಕು. ಮಾನ್ಯತೆ ಪಡೆದ ಶೈಕ್ಷಣಿಕ ಮಂಡಳಿಯಿಂದ ಸರ್ಟಿಫಿಕೇಟ್ ಪಡೆದಿರಬೇಕು.

Central Railway Jobs: 2422 ಅಪ್ರೆಂಟಿಸ್​​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೇಂದ್ರ ರೈಲ್ವೆ; 5 ವಲಯಗಳಲ್ಲಿ ಇದೆ ಉದ್ಯೋಗ ಅವಕಾಶ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 18, 2022 | 6:39 PM

Share

ಕೇಂದ್ರ ರೈಲ್ವೆಯ ನೇಮಕಾತಿ ಸೆಲ್​ ಅಪ್ರೆಂಟಿಸ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 2422 ಹುದ್ದೆಗಳ ನೇಮಕಾತಿ ಕುರಿತು rrccr.com ವೆಬ್​​ಸೈಟ್​ನಲ್ಲಿ ಅಧಿಸೂಚನೆ ಹೊರಡಿಸಿದ್ದು, ಆಸಕ್ತರು 2022ರ ಫೆಬ್ರವರಿ 16ರೊಳಗೆ ಅರ್ಜಿ ಸಲ್ಲಿಸಬೇಕು.  ಅಂದಹಾಗೆ, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಶುರುವಾಗಿದ್ದು, ಆನ್​ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಒಟ್ಟು 2422 ಖಾಲಿ ಹುದ್ದೆಗಳಲ್ಲಿ, ಮುಂಬೈ ಕ್ಲಸ್ಟರ್​ (ಎಂಎಂಸಿಟಿ)ನಲ್ಲಿ 1659, ಭೂಸಾವಲ್ ಕ್ಲಸ್ಟರ್​​ನಲ್ಲಿ 418, ಪುಣೆ ರೈಲ್ವೆ ಕ್ಲಸ್ಟರ್​ನಲ್ಲಿ 152, ನಾಗ್ಪುರ ಕ್ಲಸ್ಟರ್​ನಲ್ಲಿ 114 ಮತ್ತು ಸೊಲ್ಲಾಪುರ ಕ್ಲಸ್ಟರ್​​ನಲ್ಲಿ 79 ಹುದ್ದೆಗಳು ಖಾಲಿ ಇವೆ. 

ವಿದ್ಯಾರ್ಹತೆ ಏನಿರಬೇಕು? ಅಪ್ರೆಂಟಿಸ್​ ಹುದ್ದೆಗೆ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ 10ನೇ ತರಗತಿಯನ್ನು ಒಟ್ಟಾರೆ ಶೇ.50ರಷ್ಟು ಮಾರ್ಕ್ಸ್​​ಗಳೊಂದಿಗೆ ಉತ್ತೀರ್ಣರಾಗಿರಬೇಕು. ಮಾನ್ಯತೆ ಪಡೆದ ಶೈಕ್ಷಣಿಕ ಮಂಡಳಿಯಿಂದ ಸರ್ಟಿಫಿಕೇಟ್ ಪಡೆದಿರಬೇಕು. ನ್ಯಾಷನಲ್ ಕೌನ್ಸಿಲ್ ಫಾರ್ ವೊಕೇಶನಲ್ ಟ್ರೈನಿಂಗ್ ನೀಡಿದ ನ್ಯಾಶನಲ್​ ಟ್ರೇಡ್​ ಸರ್ಟಿಫಿಕೇಟ್​ ಹೊಂದಿರಬೇಕು ಅಥವಾ ತಾತ್ಕಾಲಿಕ ಪ್ರಮಾಣಪತ್ರವನ್ನಾದರೂ ಹೊಂದಿರಬೇಕು. 15 ವರ್ಷ ಮೇಲ್ಪಟ್ಟು 24 ವರ್ಷ ಒಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕ 100 ರೂಪಾಯಿ ಇರುತ್ತದೆ. ಮೆರಿಟ್​ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಆಯ್ಕೆಯಾದವರಿಗೆ 8000-10000 ರೂಪಾಯಿವರೆಗೆ ವೇತನ ಇರುತ್ತದೆ.

ಅರ್ಜಿಯನ್ನು ಆನ್​ಲೈನ್​ ಮೂಲಕವೇ ಕಳಿಸಬೇಕಾಗುತ್ತದೆ. ಭೌತಿಕವಾಗಿ ಕಳಿಸಿದರೆ ಅದು ಪರಿಗಣಿಸಲ್ಪಡುವುದಿಲ್ಲ. ಹಾಗೇ, ಸದ್ಯ 5 ವಲಯಗಳಲ್ಲಿ ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇವುಗಳಲ್ಲಿ ಯಾವುದಾದರೂ ಒಂದು ಕ್ಲಸ್ಟರ್​​ನ್ನು ಮಾತ್ರ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಅರ್ಜಿಯನ್ನು ಕಳಿಸಿದರೆ ಅಂಥವರ ಅಪ್ಲಿಕೇಶನ್​ಗಳು ತಿರಸ್ಕೃತಗೊಳ್ಳುತ್ತವೆ ಎಂದು ಕೇಂದ್ರ ರೈಲ್ವೆ ತಿಳಿಸಿದೆ.

ಇದನ್ನೂ ಓದಿ: ಪಾದಯಾತ್ರೆ ಮಾಡಿದ್ದಕ್ಕೆ ಕಾಂಗ್ರೆಸ್ ನಾಯಕರ ಮೇಲೆ ಕೇಸ್, ಕೊರೊನಾ ನಿಯಮ ಉಲ್ಲಂಘಿಸಿದ ಬಿಜೆಪಿ ಮುಖಂಡರಿಗೆ ಮಾಫಿ: ಸಿಎಸ್​ಗೆ ಕಾಂಗ್ರೆಸ್ ದೂರು

Published On - 6:38 pm, Tue, 18 January 22

ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ