AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Central Railway Jobs: 2422 ಅಪ್ರೆಂಟಿಸ್​​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೇಂದ್ರ ರೈಲ್ವೆ; 5 ವಲಯಗಳಲ್ಲಿ ಇದೆ ಉದ್ಯೋಗ ಅವಕಾಶ

RRC Recruitment 2022: ಅಪ್ರೆಂಟಿಸ್​ ಹುದ್ದೆಗೆ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ 10ನೇ ತರಗತಿಯನ್ನು ಒಟ್ಟಾರೆ ಶೇ.50ರಷ್ಟು ಮಾರ್ಕ್ಸ್​​ಗಳೊಂದಿಗೆ ಉತ್ತೀರ್ಣರಾಗಿರಬೇಕು. ಮಾನ್ಯತೆ ಪಡೆದ ಶೈಕ್ಷಣಿಕ ಮಂಡಳಿಯಿಂದ ಸರ್ಟಿಫಿಕೇಟ್ ಪಡೆದಿರಬೇಕು.

Central Railway Jobs: 2422 ಅಪ್ರೆಂಟಿಸ್​​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೇಂದ್ರ ರೈಲ್ವೆ; 5 ವಲಯಗಳಲ್ಲಿ ಇದೆ ಉದ್ಯೋಗ ಅವಕಾಶ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 18, 2022 | 6:39 PM

Share

ಕೇಂದ್ರ ರೈಲ್ವೆಯ ನೇಮಕಾತಿ ಸೆಲ್​ ಅಪ್ರೆಂಟಿಸ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 2422 ಹುದ್ದೆಗಳ ನೇಮಕಾತಿ ಕುರಿತು rrccr.com ವೆಬ್​​ಸೈಟ್​ನಲ್ಲಿ ಅಧಿಸೂಚನೆ ಹೊರಡಿಸಿದ್ದು, ಆಸಕ್ತರು 2022ರ ಫೆಬ್ರವರಿ 16ರೊಳಗೆ ಅರ್ಜಿ ಸಲ್ಲಿಸಬೇಕು.  ಅಂದಹಾಗೆ, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಶುರುವಾಗಿದ್ದು, ಆನ್​ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಒಟ್ಟು 2422 ಖಾಲಿ ಹುದ್ದೆಗಳಲ್ಲಿ, ಮುಂಬೈ ಕ್ಲಸ್ಟರ್​ (ಎಂಎಂಸಿಟಿ)ನಲ್ಲಿ 1659, ಭೂಸಾವಲ್ ಕ್ಲಸ್ಟರ್​​ನಲ್ಲಿ 418, ಪುಣೆ ರೈಲ್ವೆ ಕ್ಲಸ್ಟರ್​ನಲ್ಲಿ 152, ನಾಗ್ಪುರ ಕ್ಲಸ್ಟರ್​ನಲ್ಲಿ 114 ಮತ್ತು ಸೊಲ್ಲಾಪುರ ಕ್ಲಸ್ಟರ್​​ನಲ್ಲಿ 79 ಹುದ್ದೆಗಳು ಖಾಲಿ ಇವೆ. 

ವಿದ್ಯಾರ್ಹತೆ ಏನಿರಬೇಕು? ಅಪ್ರೆಂಟಿಸ್​ ಹುದ್ದೆಗೆ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ 10ನೇ ತರಗತಿಯನ್ನು ಒಟ್ಟಾರೆ ಶೇ.50ರಷ್ಟು ಮಾರ್ಕ್ಸ್​​ಗಳೊಂದಿಗೆ ಉತ್ತೀರ್ಣರಾಗಿರಬೇಕು. ಮಾನ್ಯತೆ ಪಡೆದ ಶೈಕ್ಷಣಿಕ ಮಂಡಳಿಯಿಂದ ಸರ್ಟಿಫಿಕೇಟ್ ಪಡೆದಿರಬೇಕು. ನ್ಯಾಷನಲ್ ಕೌನ್ಸಿಲ್ ಫಾರ್ ವೊಕೇಶನಲ್ ಟ್ರೈನಿಂಗ್ ನೀಡಿದ ನ್ಯಾಶನಲ್​ ಟ್ರೇಡ್​ ಸರ್ಟಿಫಿಕೇಟ್​ ಹೊಂದಿರಬೇಕು ಅಥವಾ ತಾತ್ಕಾಲಿಕ ಪ್ರಮಾಣಪತ್ರವನ್ನಾದರೂ ಹೊಂದಿರಬೇಕು. 15 ವರ್ಷ ಮೇಲ್ಪಟ್ಟು 24 ವರ್ಷ ಒಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕ 100 ರೂಪಾಯಿ ಇರುತ್ತದೆ. ಮೆರಿಟ್​ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಆಯ್ಕೆಯಾದವರಿಗೆ 8000-10000 ರೂಪಾಯಿವರೆಗೆ ವೇತನ ಇರುತ್ತದೆ.

ಅರ್ಜಿಯನ್ನು ಆನ್​ಲೈನ್​ ಮೂಲಕವೇ ಕಳಿಸಬೇಕಾಗುತ್ತದೆ. ಭೌತಿಕವಾಗಿ ಕಳಿಸಿದರೆ ಅದು ಪರಿಗಣಿಸಲ್ಪಡುವುದಿಲ್ಲ. ಹಾಗೇ, ಸದ್ಯ 5 ವಲಯಗಳಲ್ಲಿ ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇವುಗಳಲ್ಲಿ ಯಾವುದಾದರೂ ಒಂದು ಕ್ಲಸ್ಟರ್​​ನ್ನು ಮಾತ್ರ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಅರ್ಜಿಯನ್ನು ಕಳಿಸಿದರೆ ಅಂಥವರ ಅಪ್ಲಿಕೇಶನ್​ಗಳು ತಿರಸ್ಕೃತಗೊಳ್ಳುತ್ತವೆ ಎಂದು ಕೇಂದ್ರ ರೈಲ್ವೆ ತಿಳಿಸಿದೆ.

ಇದನ್ನೂ ಓದಿ: ಪಾದಯಾತ್ರೆ ಮಾಡಿದ್ದಕ್ಕೆ ಕಾಂಗ್ರೆಸ್ ನಾಯಕರ ಮೇಲೆ ಕೇಸ್, ಕೊರೊನಾ ನಿಯಮ ಉಲ್ಲಂಘಿಸಿದ ಬಿಜೆಪಿ ಮುಖಂಡರಿಗೆ ಮಾಫಿ: ಸಿಎಸ್​ಗೆ ಕಾಂಗ್ರೆಸ್ ದೂರು

Published On - 6:38 pm, Tue, 18 January 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ