AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆರಮ್ ಇನ್​ಸ್ಟಿಟ್ಯೂಟ್ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಕ್ಕೆ ₹25 ಲಕ್ಷ ಪರಿಹಾರ

ಮಧ್ಯಾಹ್ನ 2 ಗಂಟೆ ಸುಮಾರಿಗೆ  ಸೆರಮ್ ಸಂಸ್ಥೆಯ ಎರಡನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಕಟ್ಟಡದಲ್ಲಿ ಸಿಲುಕಿದ್ದವರ ಪೈಕಿ ಐವರು ಮೃತಪಟ್ಟಿದ್ದರು. ಅವರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಸೆರಮ್ ಇನ್​ಸ್ಟಿಟ್ಯೂಟ್ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಕ್ಕೆ ₹25 ಲಕ್ಷ ಪರಿಹಾರ
ಸೆರಮ್ ಇನ್ಸ್​ಟಿಟ್ಯೂಟ್​ನಲ್ಲಿ ಅಗ್ನಿ ಅವಘಡ
ರಾಜೇಶ್ ದುಗ್ಗುಮನೆ
| Edited By: |

Updated on: Jan 21, 2021 | 9:56 PM

Share

ಮುಂಬೈ: ಕೊವಿಶೀಲ್ಡ್ ಲಸಿಕೆ ಉತ್ಪಾದಿಸುತ್ತಿರುವ ಪುಣೆಯ ಸೆರಮ್ ಇನ್ಸ್​ಟಿಟ್ಯೂಟ್ ಆಫ್ ಇಂಡಿಯಾದ ಕಟ್ಟಡದಲ್ಲಿ ನಡೆದ ಅಗ್ನಿ ದುರಂತದಲ್ಲಿ ಮೃತಪಟ್ಟ ಐವರಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.

ಮಧ್ಯಾಹ್ನ 2 ಗಂಟೆ ಸುಮಾರಿಗೆ  ಸೆರಮ್ ಸಂಸ್ಥೆಯ ಎರಡನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಕಟ್ಟಡದಲ್ಲಿ ಸಿಲುಕಿದ್ದವರ ಪೈಕಿ ಐವರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮೃತಪಟ್ಟಿದ್ದರು. ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗ ಸೆರಮ್ ಇನ್ಸ್​ಟಿಟ್ಯೂಟ್ ಮೃತರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಮಹಾ ಸಿಎಂ ಟ್ವೀಟ್​ ಸೆರಮ್ ಇನ್ಸ್​ಟಿಟ್ಯೂಟ್​ನಲ್ಲಿ ಅಗ್ನಿ ಆಕಸ್ಮಿಕ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆ ಟ್ವೀಟ್​ ಮಾಡಿದ್ದಾರೆ. ಅಗ್ನಿ ಅವಘಡದಲ್ಲಿ 6 ಜನರನ್ನು ರಕ್ಷಣೆ ಮಾಡಲಾಗಿದೆ. ಶಾರ್ಟ್​ ​ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿರುವ ಸಾಧ್ಯತೆ ಇದೆ. ಕೋವಿಡ್ ಲಸಿಕೆ ಸುರಕ್ಷಿತವಾಗಿದೆ ಎಂದಿದ್ದಾರೆ.

ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿ- ಮೋದಿ ಸೆರಮ್ ಇನ್ಸ್​ಟಿಟ್ಯೂಟ್ ಅಗ್ನಿ ಅವಡಘದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಅಗ್ನಿ ಅವಘಡದಿಂದಾಗಿ ಪ್ರಾಣಹಾನಿ ಆಗಿದ್ದು ದುರದೃಷ್ಟಕರ. ಮೃತಪಟ್ಟವರ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್​ ಮಾಡಿದ್ದಾರೆ. ಇದರ ಜೊತೆ ರಾಷ್ಟ್ರಪತಿ ರಾಮನಾಥ ಕೋವಿಂದ ಕೂಡ ಟ್ವೀಟ್​ ಮಾಡಿ ಮೃತರಿಗೆ ಸಂತಾಪ ಸೂಚಿಸಿದ್ದಾರೆ.

ಸೆರಮ್ ಇನ್ಸ್​ಟಿಟ್ಯೂಟ್ ಅಗ್ನಿ ದುರಂತ: ಐವರ ಸಾವು, ಕೆಲವರ ಸ್ಥಿತಿ ಗಂಭೀರ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ