AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್ಪುರದಲ್ಲಿ ವಾಯುಪಡೆಯ 6 ಸಿಬ್ಬಂದಿ ಸೇರಿ 25ಕ್ಕೂ ಹೆಚ್ಚು ಜನರಿಗೆ ಝಿಕಾ ವೈರಸ್ ಸೋಂಕು

ಹೊಸದಾಗಿ ದೃಢಪಟ್ಟ ಪ್ರಕರಣಗಳಲ್ಲಿ 14 ಮಹಿಳೆಯರು, ಆರು ವಾಯುಪಡೆಯ ಸಿಬ್ಬಂದಿ ಇದ್ದಾರೆ ಎಂದು ಜಿಲ್ಲಾಧಿಕಾರಿ ಜಿ.ವಿಶಾಖ್ ಹೇಳಿದ್ದರು.

ಕಾನ್ಪುರದಲ್ಲಿ ವಾಯುಪಡೆಯ 6 ಸಿಬ್ಬಂದಿ ಸೇರಿ 25ಕ್ಕೂ ಹೆಚ್ಚು ಜನರಿಗೆ ಝಿಕಾ ವೈರಸ್ ಸೋಂಕು
ಝಿಕಾ ವೈರಸ್ ಸೋಂಕು ಸೊಳ್ಳೆಗಳಿಂದ ಹರಡುತ್ತದೆ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Nov 03, 2021 | 9:28 PM

Share

ಕಾನ್ಪುರ: ವಾಯುಪಡೆಯ ಆರು ಸಿಬ್ಬಂದಿಯೂ ಸೇರಿದಂತೆ ಜಿಲ್ಲೆಯ 25 ಮಂದಿಯಲ್ಲಿ ಬುಧವಾರ ಝಿಕಾ ವೈರಸ್ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಒಟ್ಟು ಸಂಖ್ಯೆ 36ಕ್ಕೆ ಏರಿಕೆಯಾಗಿದೆ. ಹೊಸದಾಗಿ ದೃಢಪಟ್ಟ ಪ್ರಕರಣಗಳಲ್ಲಿ 14 ಮಹಿಳೆಯರು, ಆರು ವಾಯುಪಡೆಯ ಸಿಬ್ಬಂದಿ ಇದ್ದಾರೆ ಎಂದು ಜಿಲ್ಲಾಧಿಕಾರಿ ಜಿ.ವಿಶಾಖ್ ಹೇಳಿದ್ದರು.

ಆರೋಗ್ಯ ಇಲಾಖೆಯು 586 ಜನರಿಂದ ಭಾನುವಾರ ರಕ್ತದ ಮಾದರಿಗಳನ್ನು ಸಂಗ್ರಹಿಸಿತ್ತು. ಲಖನೌ ನಗರದ ಪ್ರಯೋಗಾಲಯದಲ್ಲಿ ತಪಾಸಣೆಗೆ ಒಳಪಡಿಸಲಾಯಿತು. ಈ ಪೈಕಿ 25 ಮಾದರಿಗಳಲ್ಲಿ ಝಿಕಾ ವೈರಸ್​ ಸೋಂಕು ದೃಢಪಟ್ಟಿತ್ತು ಎಂದು ಅವರು ತಿಳಿಸಿದರು.

ರೋಗ ಹರಡುವುದನ್ನು ತಡೆಯಲು ಮತ್ತು ಮೂಲವನ್ನು ಪತ್ತೆಹಚ್ಚಲು ಆರೋಗ್ಯ ತಂಡಗಳನ್ನು ರಚಿಸಲಾಗಿದೆ. ಸೊಳ್ಳೆಗಳನ್ನು ನಿಯಂತ್ರಿಸಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ರಾಸಾಯನಿಕಗಳನ್ನು ಸಿಂಪಡಿಸಲಾಗುತ್ತಿದೆ. ಗರ್ಭಿಣಿಯರು ಮತ್ತು ಜ್ವರ ಪೀಡಿತರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ಹೇಳಿದರು.

ಮನೆಮನೆಯಿಂದ ಮಾದರಿ ಸಂಗ್ರಹಿಸಲು ಆರೋಗ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ. ಝಿಕಾ ವೈರಸ್ ಸೋಂಕಿನ ಬಗ್ಗೆ ಯಾರೂ ಗಾಬರಿಯಾಗಬಾರದು ಎಂದು ಮನವಿ ಮಾಡಿರುವ ಅವರು, ವಾಯುಪಡೆ ಕೇಂದ್ರದ ಸುತ್ತಮುತ್ತ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಝಿಕಾ ವೈರಸ್ ಸೋಂಕು ಸೊಳ್ಳೆಗಳಿಂದ ಹರಡುತ್ತದೆ. ಉತ್ತರ ಪ್ರದೇಶದ ಕಾನ್ಪುರದಲ್ಲಿ ಅ.23ರಂದು ಮೊದಲ ಬಾರಿಗೆ ವಾಯುಪಡೆ ಅಧಿಕಾರಿಯೊಬ್ಬರಲ್ಲಿ ಝೀಕಾ ಸೋಂಕು ಕಾಣಿಸಿಕೊಂಡಿತ್ತು. ಇದಾದ ನಂತರ ಕೇಂದ್ರ ಆರೋಗ್ಯ ಇಲಾಖೆಯು ಉನ್ನತ ಮಟ್ಟದ ತಂಡವನ್ನು ಉತ್ತರ ಪ್ರದೇಶಕ್ಕೆ ಕಳುಹಿಸಿಕೊಟ್ಟಿತ್ತು.

ಇದನ್ನೂ ಓದಿ: ಕಾನ್ಪುರದ ವ್ಯಕ್ತಿಯೊಬ್ಬರಲ್ಲಿ ಝಿಕಾ ವೈರಸ್ ಪತ್ತೆ; ಕೇಂದ್ರ ಹಾಗೂ ರಾಜ್ಯ ಸರ್ಕಾರದ ತಂಡಗಳ ಭೇಟಿ ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಝಿಕಾ  ವೈರಸ್ ಪತ್ತೆ: ವೈದ್ಯಕೀಯ ತಜ್ಞರ ತಂಡ ಕಳುಹಿಸಿದ ಕೇಂದ್ರ ಸರ್ಕಾರ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ