AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ-ಕಾಲೇಜುಗಳ ಮೇಲೆ ಕೊರೊನಾ ಕೆಂಗಣ್ಣು; ಒಡಿಶಾದ ಸರ್ಕಾರಿ ಶಾಲೆಯ 25 ವಿದ್ಯಾರ್ಥಿನಿಯರಿಗೆ ಸೋಂಕು ದೃಢ

ಕರ್ನಾಟಕದಲ್ಲೂ ಕೂಡ ಧಾರವಾಡದ ಎಸ್​ಡಿಎಂ ಕಾಲೇಜಿನಲ್ಲಿ ಕೊರೊನಾ ಭೀಕರತೆ ಎದುರಾಗಿದೆ. ಸದ್ಯ ಒಟ್ಟು 306 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ.

ಶಾಲಾ-ಕಾಲೇಜುಗಳ ಮೇಲೆ ಕೊರೊನಾ ಕೆಂಗಣ್ಣು; ಒಡಿಶಾದ ಸರ್ಕಾರಿ ಶಾಲೆಯ 25 ವಿದ್ಯಾರ್ಥಿನಿಯರಿಗೆ ಸೋಂಕು ದೃಢ
ಒಡಿಶಾ ಸರ್ಕಾರಿ ಶಾಲೆ
TV9 Web
| Edited By: |

Updated on: Nov 28, 2021 | 1:02 PM

Share

ದೆಹಲಿ: ತೆಲಂಗಾಣದ ಮಹೀಂದ್ರಾ ವಿಶ್ವವಿದ್ಯಾಲಯದಲ್ಲಿ 30 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಬೆನ್ನಲ್ಲೇ ಆ ಯೂನಿವರ್ಸಿಟಿಯನ್ನು ಲಾಕ್​ ಮಾಡಲಾಗಿದೆ. ಅದರ ಬೆನ್ನಲ್ಲೇ ಒಡಿಶಾದ ಸರ್ಕಾರಿ ಶಾಲೆಯೊಂದರಲ್ಲಿ 25 ಬಾಲಕಿಯರಲ್ಲಿ ಕೊವಿಡ್​ 19 ಸೋಂಕು ಕಾಣಿಸಿಕೊಂಡಿದೆ. ಸೋಂಕಿತ ವಿದ್ಯಾರ್ಥಿನಿಯರಲ್ಲಿ ಗಂಭೀರ ಆರೋಗ್ಯ ಸಮಸ್ಯೆ ಏನೂ ಕಾಣಿಸಿಕೊಂಡಿಲ್ಲ ಎಂದು ಮುಖ್ಯ ವೈದ್ಯಾಧಿಕಾರಿ ಡಾ. ರೂಪ್​ವಾನೂ ಮಿಶ್ರಾ ತಿಳಿಸಿದ್ದಾರೆ. ಅಂದಹಾಗೆ ಇದು ಬುಡಕಟ್ಟು ಜನಾಂಗದ ಹೆಣ್ಣುಮಕ್ಕಳ ವಸತಿ ಶಾಲೆಯಾಗಿದ್ದು, ಅವರನ್ನೆಲ್ಲ ಸದ್ಯ ಐಸೋಲೇಟ್​ ಮಾಡಲಾಗಿದೆ. 

ಈ ಶಾಲೆಯಲ್ಲಿ ಒಟ್ಟು 256 ವಿದ್ಯಾರ್ಥಿನಿಯರಿದ್ದು, 20 ಸಿಬ್ಬಂದಿಯಿದ್ದಾರೆ. ಜಿಲ್ಲಾ ಪ್ರಧಾನ ಕಚೇರಿಯಿಂದಲೇ ಇಲ್ಲಿ ವೈದ್ಯಕೀಯ ತಂಡವನ್ನು ಕಳಿಸಲಾಗಿದ್ದು, ಪರಿಸ್ಥಿತಿ ಮೇಲೆ ನಿಗಾ ಇಟ್ಟಿದ್ದಾರೆ.  ವಿದ್ಯಾರ್ಥಿಗಳು ಕಳೆದ ಎರಡು ದಿನಗಳಿಂದ ಶೀತ, ಕೆಮ್ಮು ಮತ್ತು ಜ್ವರದಿಂದ ಬಳಲುತ್ತಿದ್ದರು. ಹಾಗಾಗಿ ಅವರಿಗೆ ಕೊವಿಡ್ 19 ತಪಾಸಣೆ ಮಾಡಿಸಲಾಗಿತ್ತು. ಅವರಲ್ಲೀಗ 25ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ನಮ್ಮ ವೈದ್ಯಕೀಯ ತಂಡ ಮತ್ತು ಆಂಬುಲೆನ್ಸ್​ ಸ್ಥಳದಲ್ಲಿದೆ. ಡಾ. ಅನಿತಾ ಎಂಬುವರು ಮಕ್ಕಳನ್ನು ಪ್ರತಿದಿನವೂ ತಪಾಸಣೆ ಮಾಡುತ್ತಿದ್ದಾರೆ ಎಂದು ಜಿಲ್ಲಾಡಳಿತದ ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕದಲ್ಲೂ ಕೂಡ ಧಾರವಾಡದ ಎಸ್​ಡಿಎಂ ಕಾಲೇಜಿನಲ್ಲಿ ಕೊರೊನಾ ಭೀಕರತೆ ಎದುರಾಗಿದೆ. ಸದ್ಯ ಒಟ್ಟು 306 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ಸದ್ಯ ಕೊರೊನಾ ಕಡಿಮೆಯಾಗಿದ್ದ ಕಾರಣ ಶಾಲಾ-ಕಾಲೇಜುಗಳೆಲ್ಲ ಶುರುವಾಗಿತ್ತು. ಆದರೆ ಈಗ ಸೋಂಕು ಶಿಕ್ಷಣ ಸಂಸ್ಥೆಗಳಿಗೇ ವ್ಯಾಪಿಸುತ್ತಿದೆ.

ಇದನ್ನೂ ಓದಿ: ಲಸಿಕೆಗೆ ಹೆದರಿ ಮನೆಯ ಮಾಳಿಗೆ ಏರಿದ ವ್ಯಕ್ತಿ; ಅಧಿಕಾರಿಗಳು ಕೊನೆಗೂ ಲಸಿಕೆ ನೀಡಿದ್ದೇಗೆ?

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ