
ನವದೆಹಲಿ, ಏಪ್ರಿಲ್ 28: ಮುಂಬೈನ 26/11 ಭಯೋತ್ಪಾದಕ ದಾಳಿಯ ಆರೋಪಿ ತಹಾವೂರ್ ರಾಣಾ (Tahawwur Rana) ಬಿಗಿ ಭದ್ರತೆಯ ನಡುವೆ 5 ಬಾರಿ AIIMSಗೆ ಭೇಟಿ ನೀಡಿದ್ದಾರೆ. ಮುಂಬೈ ಭಯೋತ್ಪಾದಕ ದಾಳಿಯಲ್ಲಿನ ಕೈವಾಡಕ್ಕೆ ಸಂಬಂಧಿಸಿದಂತೆ ಕಳೆದ ಏಪ್ರಿಲ್ನಲ್ಲಿ ಅಮೆರಿಕದಿಂದ ಗಡಿಪಾರಾಗಿದ್ದ ತಹಾವೂರ್ ರಾಣಾ, ವೈದ್ಯಕೀಯ ಚಿಕಿತ್ಸೆಗಾಗಿ ಕಳೆದ 1 ತಿಂಗಳಲ್ಲಿ 5 ಬಾರಿ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS)ಗೆ ಭೇಟಿ ನೀಡಿದ್ದಾರೆ ಎಂದು ವರದಿಯಾಗಿದೆ.
ಈ ಬಗ್ಗೆ ದಿ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದ್ದು, ತಹಾವೂರ್ ರಾಣಾ ಏಮ್ಸ್ಗೆ ಮೊದಲ ಬಾರಿ ಮಾರ್ಚ್ 31ರಂದು ಭೇಟಿ ನೀಡಿದ್ದರು. ನಂತರ ಏಪ್ರಿಲ್ 6, ಏಪ್ರಿಲ್ 7, ಏಪ್ರಿಲ್ 20 ಮತ್ತು ಏಪ್ರಿಲ್ 21ರಂದು 4 ಬಾರಿ ಭೇಟಿ ನೀಡಿದ್ದಾರೆ. ಅವರು ಆರೋಗ್ಯ ತಪಾಸಣೆಗೆ ಬರುವಾಗ ಸಾಕಷ್ಟು ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ. ತಿಹಾರ್ ಜೈಲಿನಲ್ಲಿರುವ ಕೈದಿಗಳನ್ನು ನ್ಯಾಯಾಲಯ ಅಥವಾ ಆಸ್ಪತ್ರೆಗೆ ಕರೆದೊಯ್ಯುವ ಜವಾಬ್ದಾರಿಯನ್ನು ಎನ್ಎವಿ ಹೊಂದಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಮಾಟಮಂತ್ರದ ಶಂಕೆ ಒಡಹುಟ್ಟಿದವನನ್ನು ಕೊಂದು, ಇಬ್ಬರು ಮಕ್ಕಳ ಮೇಲೆ ಹಲ್ಲೆ ನಡೆಸಿದ ವ್ಯಕ್ತಿ
“ಪ್ರತಿ ಬಾರಿಯೂ, ರಾಣಾ ಅವರನ್ನು ಹೃದ್ರೋಗ, ಸಾಮಾನ್ಯ ಔಷಧ, ಮೂತ್ರಪಿಂಡಶಾಸ್ತ್ರ ವಿಭಾಗಗಳು ಮತ್ತು ಶಸ್ತ್ರಚಿಕಿತ್ಸಾ ವಾರ್ಡ್ಗೆ ಭಾರೀ ಪೊಲೀಸ್ ಬೆಂಗಾವಲಿನಡಿಯಲ್ಲಿ ಸಾಗಿಸಲಾಗುತ್ತಿತ್ತು. ಕೆಲವು ಗಂಟೆಗಳ ಕಾಲ ಪರೀಕ್ಷೆ ನಡೆಸಿದ ನಂತರ ಅದೇ ದಿನ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಹಲವು ಬಾರಿ ತಪಾಸಣೆ ಮತ್ತು ಪರೀಕ್ಷೆಗಳನ್ನು ನಡೆಸಿದ ನಂತರ ಮೇ 4ರಂದು ಅವರಿಗೆ ವೈದ್ಯಕೀಯ ಚಿಕಿತ್ಸೆಗೆ ದಿನಾಂಕ ಸಿಕ್ಕಿದೆ. ಅವರ ಆರೋಗ್ಯ ಸ್ಥಿತಿಯ ಕುರಿತು ದೆಹಲಿ ನ್ಯಾಯಾಲಯದಿಂದ ಅನುಮತಿ ಪಡೆದ ನಂತರ ಸಂಪೂರ್ಣ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಯಿತು.
ಇದನ್ನೂ ಓದಿ: ಗಂಡನ ತಂಗಿಯನ್ನೇ ಆತನ ಎರಡನೇ ಹೆಂಡತಿಯೆಂದ ಪತ್ನಿ; ವಿಚ್ಛೇದನಕ್ಕಾಗಿ ಎಷ್ಟೆಲ್ಲ ನಾಟಕ!
65 ವರ್ಷದ ರಾಣಾ ಅವರನ್ನು ಪ್ರಸ್ತುತ ತಿಹಾರ್ ಜೈಲು ಸಂಖ್ಯೆ 2ರಲ್ಲಿ ಇರಿಸಲಾಗಿದೆ. ತಿಹಾರ್ ಜೈಲಿನಲ್ಲಿರುವ ಹೆಚ್ಚಿನ ಅಪಾಯದ ಕೈದಿಗಳಿಗಾಗಿ ಮೀಸಲಾದ ವಾರ್ಡ್ನಲ್ಲಿ ಅವರನ್ನು ಇರಿಸಲಾಗಿದೆ. ಇದಲ್ಲದೆ, ಅವರನ್ನು ಇರಿಸಲಾಗಿರುವ ಬ್ಲಾಕ್ ಜೈಲು ಸಂಕೀರ್ಣದೊಳಗಿನ ಇತರರಿಗಿಂತ ಕಡಿಮೆ ಜನದಟ್ಟಣೆಯಿಂದ ಕೂಡಿದೆ. 26/11 ಲಷ್ಕರ್-ಎ-ತೈಬಾ ಸ್ಕೌಟ್ ಡೇವಿಡ್ ಕೋಲ್ಮನ್ ಹೆಡ್ಲಿಯ ಆಪ್ತ ಸಹಚರ ರಾಣಾ ಅವರನ್ನು ಕರೆತರಲಾಯಿತು. ಏಪ್ರಿಲ್ 10, 2025ರಂದು ಭಾರತಕ್ಕೆ ಅಮೆರಿಕದಿಂದ ಹಸ್ತಾಂತರ ಮಾಡಲಾಯಿತು. ಮುಂಬೈನಲ್ಲಿ 26/11 ದಾಳಿಗೆ ಕುಮ್ಮಕ್ಕು ನೀಡಿದ ಆರೋಪ ಅವರ ಮೇಲಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ