Mumbai Terror Attack: 26/11ರ ಮುಂಬೈ ಭಯೋತ್ಪಾದಕ ದಾಳಿಗೆ 15 ವರ್ಷ: ಸದಾ ಕಾಡುವ ಕಹಿ ನೆನಪು

ದೇಶದ ಆರ್ಥಿಕ ರಾಜಧಾನಿ ಎಂದು ಕರೆಯಲ್ಪಡುವ ಮುಂಬೈ 26 ನವೆಂಬರ್ 2008 ರಂದು ನಡೆದ ಭಯೋತ್ಪಾದಕ ದಾಳಿಯಿಂದ ತತ್ತರಿಸಿತ್ತು. ಹದಿನೈದು ವರ್ಷಗಳ ಹಿಂದೆ ಮುಂಬೈನಲ್ಲಿ ನಡೆದ ಭಯೋತ್ಪಾದಕ ದಾಳಿಗೆ 174 ಮಂದಿ ಬಲಿಯಾಗಿದ್ದರು. ಅಂದು 2008ರ ನವೆಂಬರ್ 26 ರಾತ್ರಿ ಲಷ್ಕರ್ ಎ ತೊಯ್ಬಾ ಭಯೋತ್ಪಾದಕ ಸಂಘಟನೆಯ ಉಗ್ರರು ಮುಂಬೈ ನಗರವನ್ನು ಪ್ರವೇಶಿಸಿದ್ದರು. ಏಕಾಏಕಿ ಗುಂಡಿನ ಸುರಿಮಳೆ ಗೈದಿದ್ದರು.

Mumbai Terror Attack: 26/11ರ ಮುಂಬೈ ಭಯೋತ್ಪಾದಕ ದಾಳಿಗೆ 15 ವರ್ಷ: ಸದಾ ಕಾಡುವ ಕಹಿ ನೆನಪು
ಮುಂಬೈ ದಾಳಿ
Follow us
|

Updated on: Nov 26, 2023 | 10:15 AM

ದೇಶದ ಆರ್ಥಿಕ ರಾಜಧಾನಿ ಎಂದು ಕರೆಯಲ್ಪಡುವ ಮುಂಬೈ 26 ನವೆಂಬರ್ 2008 ರಂದು ನಡೆದ ಭಯೋತ್ಪಾದಕ ದಾಳಿಯಿಂದ ತತ್ತರಿಸಿತ್ತು. ಹದಿನೈದು ವರ್ಷಗಳ ಹಿಂದೆ ಮುಂಬೈನಲ್ಲಿ ನಡೆದ ಭಯೋತ್ಪಾದಕ ದಾಳಿಗೆ 174 ಮಂದಿ ಬಲಿಯಾಗಿದ್ದರು. ಅಂದು 2008ರ ನವೆಂಬರ್ 26 ರಾತ್ರಿ ಲಷ್ಕರ್ ಎ ತೊಯ್ಬಾ ಭಯೋತ್ಪಾದಕ ಸಂಘಟನೆಯ ಉಗ್ರರು ಮುಂಬೈ ನಗರವನ್ನು ಪ್ರವೇಶಿಸಿದ್ದರು. ಏಕಾಏಕಿ ಗುಂಡಿನ ಸುರಿಮಳೆ ಗೈದಿದ್ದರು. ಛತ್ರಪತಿ ಶಿವಾಜಿ ಟರ್ಮಿನಲ್, ತಾಜ್, ಒಬೆರಾಯ್ ಹೋಟೆಲ್​ಗಳು, ನಾರಿಮನ್ ಹೌಸ್​ನಲ್ಲಿರುವ ಯಹೂದಿ ಕೇಂದ್ರ ಹಾಗೂ ಪಿಯೋಫೋಲ್ಡ್​ ಕೆಫೆ, ಈ ಸ್ಥಳಿಗಳಿಗೆ ಯುರೋಪಿಯನ್ನರು, ಭಾರತೀಯರು ಮತ್ತು ಯಹೂದಿಗಳು ಆಗಾಗ ಭೇಟಿ ನೀಡುವುದರಿಂದ ಗರಿಷ್ಠ ಪ್ರಮಾಣದಲ್ಲಿ ಜನಸಂದಣಿ ಇರುವುದರ ಬಗ್ಗೆ ಸಮೀಕ್ಷೆ ನಡೆಸಿ ಬಳಿಕ ದಾಳಿ ನಡೆಸಲಾಗಿತ್ತು.

ಮುಂಬೈನಲ್ಲಿ ಮತ್ತೆ ಭಯೋತ್ಪಾದನೆ ಮಾಡಲು ಭಯೋತ್ಪಾದಕರು ನಡೆಸಿದ ಸಂಚು ಇಲ್ಲವೆಂದಲ್ಲ. ಕಳೆದ ಒಂದೂವರೆ ದಶಕದಲ್ಲಿ ಮತ್ತೆ ಮುಂಬೈ ದಾಳಿಗೆ ಸಂಚು ರೂಪಿಸಲಾಗಿತ್ತು, ಆದರೆ ಈಗ ನಗರದ ಮೂಲೆ ಮೂಲೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. 26|11/11ರವರೆಗೆ ನಗರದಲ್ಲಿ ಕೆಲವೇ ಸಿಸಿಟಿವಿ ಕ್ಯಾಮೆರಾಗಳಿದ್ದವು.

ಈಗ ನಗರದಲ್ಲಿ ಲಕ್ಷ ಲಕ್ಷ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಕೆಲವು ಸರ್ಕಾರದಿಂದ ಸ್ಥಾಪಿಸಲ್ಪಟ್ಟಿವೆ, ಉಳಿದವು ಖಾಸಗಿಯವರ ಒಡೆತನದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ, ಮುಂಬೈನಲ್ಲಿ 26/11 ರಂತಹ ದಾಳಿಯನ್ನು ಭಯೋತ್ಪಾದಕರು ಪುನರಾವರ್ತಿಸುವುದು ಈಗ ಸುಲಭವಲ್ಲ ಎಂದು ಅನೇಕ ಮುಂಬೈ ಪೊಲೀಸ್ ಅಧಿಕಾರಿಗಳು ನಂಬಿದ್ದಾರೆ. ಹೆಚ್ಚಿನ ಸಂಖ್ಯೆಯ ಸಿಸಿಟಿವಿಗಳನ್ನು ಅಳವಡಿಸುವುದು ಸಕಾರಾತ್ಮಕ ಪರಿಣಾಮವನ್ನು ತೋರಿಸಿದೆ.

ನಗರದಲ್ಲಿ ಸರ್ಕಾರ ಅಳವಡಿಸಿರುವ ಸಿಸಿಟಿವಿಗಳಿಗೆ ಪೊಲೀಸ್ ನಿಯಂತ್ರಣ ಕೊಠಡಿಗೆ ನೇರ ಪ್ರವೇಶವಿದೆ. ಈ ಕಾರಣದಿಂದಾಗಿ, ಪೊಲೀಸರು ಕಂಟ್ರೋಲ್ ರೂಂನಿಂದ ಮುಂಬೈನ ಪ್ರತಿಯೊಂದು ಪ್ರಮುಖ ಮತ್ತು ಪ್ರತಿಷ್ಠಿತ ಸ್ಥಳಗಳನ್ನು ಮೇಲ್ವಿಚಾರಣೆ ಮಾಡುತ್ತಾರೆ. 26/11 ದಾಳಿಯ ಮೊದಲು ಮುಂಬೈ ಪೊಲೀಸರು ಕ್ವಿಕ್ ರೆಸ್ಪಾನ್ಸ್ ಟೀಮ್ (ಕ್ಯೂಆರ್‌ಟಿ) ಹೊಂದಿದ್ದರು. ದಾಳಿಯ ಸಮಯದಲ್ಲಿ ಎನ್‌ಎಸ್‌ಜಿ ಆಗಮಿಸದಿದ್ದಾಗ, ಕ್ವಿಕ್ ರೆಸ್ಪಾನ್ಸ್ ತಂಡವು ತಾಜ್ ಹೋಟೆಲ್‌ಗೆ ಮೊದಲು ತಲುಪಿತು ಮತ್ತು ಮುಂಬೈ ಪೊಲೀಸರ ಇತರ ಪಡೆಗಳೊಂದಿಗೆ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಸಿತು.

ಮತ್ತಷ್ಟು ಓದಿ: Mumbai Attack: 26/11 ದಾಳಿಯಲ್ಲಿ ನಾನು ಎಲ್ಲವನ್ನೂ ಕಳೆದುಕೊಂಡೆ: ಕರಂಬಿರ್ ಕಾಂಗ್

26/11 ದಾಳಿಯ ತನಕ, ಈ ತಂಡವು ಕಡಿಮೆ ಸೌಲಭ್ಯಗಳನ್ನು ಹೊಂದಿತ್ತು. ಅಷ್ಟೇ ಅಲ್ಲ ಅವರ ಸಂಖ್ಯೆಯೂ ಹೆಚ್ಚಿರಲಿಲ್ಲ. ಈಗ ಈ ತಂಡವು ಹೆಚ್ಚಿನ ಪೊಲೀಸ್ ಪಡೆಗಳನ್ನು ಹೊಂದಿದೆ. ಈಗ ಈ ತಂಡ ಹೊಂದಿರುವ ಅಸ್ತ್ರಗಳು ಕೂಡ ಅತ್ಯಾಧುನಿಕವಾಗಿವೆ.

ಒಟ್ಟಾರೆಯಾಗಿ, ಕ್ವಿಕ್ ರೆಸ್ಪಾನ್ಸ್ ತಂಡವು ಮೊದಲಿಗಿಂತ ಉತ್ತಮ ಸೌಲಭ್ಯಗಳನ್ನು ಹೊಂದಿದೆ. 26/11 ರ ನಂತರ ಮುಂಬೈನಲ್ಲಿ ಕಡಲ ಭದ್ರತೆಯನ್ನು ಹೆಚ್ಚಿಸಲಾಗಿದೆ. ಮುಂಬೈ ಭಯೋತ್ಪಾದನಾ ದಾಳಿಯ 15ನೇ ವರ್ಷದ ಸ್ಮರಣಾರ್ಥವಾಗಿ ಇಸ್ರೇಲ್ ದೇಶವು ಲಷ್ಕರ್-ಎ-ತಯ್ಬಾವನ್ನು ಭಯೋತ್ಪಾದಕ ಸಂಘಟನೆಯ ಪಟ್ಟಿಗೆ ಸೇರಿಸಲಾಗಿದೆ ಎಂದು ಇಸ್ರೇಲ್ ರಾಯಭಾರ ಕಚೇರಿ ದೆಹಲಿಯಲ್ಲಿ ಹೇಳಿಕೆಯಲ್ಲಿ ತಿಳಿಸಿದೆ.

ಈ ಕ್ರಮದ ಹಿಂದೆ ಭಾರತ ಸರ್ಕಾರದ ಯಾವುದೇ ಪಾತ್ರವಿಲ್ಲ. ಇಸ್ರೇಲ್ ಎಲ್ಲಾ ಅಗತ್ಯ ಕಾರ್ಯವಿಧಾನಗಳನ್ನು ಔಪಚಾರಿಕವಾಗಿ ಪೂರ್ಣಗೊಳಿಸಿದೆ ಮತ್ತು ಲಷ್ಕರ್-ಎ-ತಯ್ಬಾವನ್ನು ಇಸ್ರೇಲಿ ಅಕ್ರಮ ಭಯೋತ್ಪಾದಕ ಸಂಘಟನೆಗಳ ಪಟ್ಟಿಗೆ ಸೇರಿಸಲು ಅಗತ್ಯವಿರುವ ಎಲ್ಲಾ ಪರಿಶೀಲನೆ ಮತ್ತು ನಿಬಂಧನೆಗಳನ್ನು ಪೂರೈಸಲಾಗಿದೆ ಎಂದು ಹೇಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ