AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Food Poison: ತೆಲಂಗಾಣದಲ್ಲಿ ವಿಷಾಹಾರ ಸೇವನೆಯಿಂದ 27 ಮಕ್ಕಳು ಆಸ್ಪತ್ರೆಗೆ ದಾಖಲು

ಶಾಲೆಯಲ್ಲಿ ಸಿಬ್ಬಂದಿಯ ಕೊರತೆಯಿಂದಾಗಿ ಅಡುಗೆ ಮಾಡುವವರು ಅಡುಗೆ ಮಾಡುವ ಮೊದಲು ಧಾನ್ಯಗಳು ಮತ್ತು ಅಕ್ಕಿ ತೊಳೆದಿರಲಿಲ್ಲ. ಇದರಿಂದ ಈ ದುರಂತ ಘಟನೆ ನಡೆದಿದೆ. ಈ ಘಟನೆಯ ಕುರಿತು ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

Food Poison: ತೆಲಂಗಾಣದಲ್ಲಿ ವಿಷಾಹಾರ ಸೇವನೆಯಿಂದ 27 ಮಕ್ಕಳು ಆಸ್ಪತ್ರೆಗೆ ದಾಖಲು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 20, 2022 | 3:55 PM

Share

ಹೈದರಾಬಾದ್: ತೆಲಂಗಾಣದ (Telangana) ಆದಿಲಾಬಾದ್‌ನಲ್ಲಿ ವಿಷಾಹಾರ (Food Poison) ಸೇವನೆಯಿಂದ 27 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಂತಿಯಿಂದ ಬಳಲುತ್ತಿದ್ದ ಮಕ್ಕಳನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಗ ಅವರು ಸೇವಿಸಿದ್ದ ಆಹಾರ ವಿಷಪೂರಿತವಾಗಿತ್ತು ಎಂದು ತಿಳಿದುಬಂದಿದೆ.

“ಸೋಮವಾರ ರಾತ್ರಿ ಕಾಗಾ ನಗರದ ಅಲ್ಪಸಂಖ್ಯಾತ ಬಾಲಕರ ಹಾಸ್ಟೆಲ್ ಗುರುಕುಲದ 27 ಮಕ್ಕಳಲ್ಲಿ ವಾಂತಿ ಕಾಣಿಸಿಕೊಂಡಿದ್ದರಿಂದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯ ಕುರಿತು ವಿವರವಾದ ತನಿಖೆಗೆ ಆದೇಶಿಸಲಾಗಿದೆ” ಎಂದು ಆದಿಲಾಬಾದ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರಭಾಕರ ರೆಡ್ಡಿ ಹೇಳಿದ್ದಾರೆ.

ಶಾಲೆಯಲ್ಲಿ ಸಿಬ್ಬಂದಿಯ ಕೊರತೆಯಿಂದಾಗಿ ಅಡುಗೆ ಮಾಡುವವರು ಅಡುಗೆ ಮಾಡುವ ಮೊದಲು ಧಾನ್ಯಗಳು ಮತ್ತು ಅಕ್ಕಿ ತೊಳೆದಿರಲಿಲ್ಲ. ಇದರಿಂದ ಈ ದುರಂತ ಘಟನೆ ನಡೆದಿದೆ. ಈ ಘಟನೆಯ ಕುರಿತು ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

ಇದನ್ನೂ ಓದಿ: Food Poison: ವಿಷಾಹಾರ ಸೇವಿಸಿ ಬೆಳಗಾವಿಯಲ್ಲಿ ತಾಯಿ, ಮಗ ಸಾವು

ಉತ್ತರ ಪ್ರದೇಶದ ಮತ್ತೊಂದು ಘಟನೆಯಲ್ಲಿ, ಹರ್ದೋಯಿಯಲ್ಲಿರುವ ಕಸ್ತೂರ್ಬಾ ಗಾಂಧಿ ಅವಾಸಿಯಾ ಬಾಲಿಕಾ ವಿದ್ಯಾಲಯದ 38 ವಿದ್ಯಾರ್ಥಿಗಳು ಭಾನುವಾರ ವೈದ್ಯಕೀಯ ಶಿಬಿರಕ್ಕೆ ಭೇಟಿ ನೀಡಿದ ನಂತರ ವಾಕರಿಕೆ ಮತ್ತು ಹೊಟ್ಟೆ ನೋವಿನಿಂದ ನರಳಾಡಿದ್ದಾರೆ. ಬಾಲಕಿಯರು ಪಿಹಾನಿ ಸಮುದಾಯ ಆರೋಗ್ಯ ಕೇಂದ್ರ (ಸಿಎಚ್‌ಸಿ) ಆರೋಗ್ಯ ಶಿಬಿರಕ್ಕೆ ತೆರಳಿದ್ದರು. ಅವರು ಅಲ್ಲಿಂದ ಹಿಂತಿರುಗಿದ ನಂತರ ಅವರಿಗೆ ವಾಂತಿ ಕಾಣಿಸಿಕೊಂಡಿತ್ತು. ಹೊಟ್ಟೆ ನೋವು ಕೂಡ ಉಂಟಾಗಿತ್ತು. ಅವರಲ್ಲಿ 32 ಮಕ್ಕಳು ಚಿಕಿತ್ಸೆಯ ನಂತರ ಆರೋಗ್ಯವಾಗಿದ್ದಾರೆ. ಅವರನ್ನು ವಾಪಸ್ ಮನೆಗೆ ಕಳುಹಿಸಲಾಗಿದೆ. ಉಳಿದ ಆರು ಮಕ್ಕಳನ್ನು ಚಿಕಿತ್ಸೆಗಾಗಿ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ: Black Anklet: ಹೆಣ್ಣುಮಕ್ಕಳು ಎಡಗಾಲಿನಲ್ಲಿ ಕಪ್ಪು ದಾರವನ್ನು ಧರಿಸುತ್ತಾರೆ ಏಕೆ? ಜ್ಯೋತಿಷ್ಯ ಏನು ಹೇಳುತ್ತೆ?

ಇಡೀ ಪ್ರಕರಣದ ಬಗ್ಗೆ ನಿಗಾ ವಹಿಸಲಾಗಿದೆ. ಈ ಘಟನೆಯ ಹಿಂದಿನ ನಿಖರವಾದ ಕಾರಣವನ್ನು ತನಿಖೆ ಮಾಡಲಾಗುವುದು ಎಂದು ಎಸ್‌ಡಿಎಂ ಶುಕ್ಲಾ ಹೇಳಿದ್ದಾರೆ. ಇದು ಆಹಾರ ವಿಷದ ಕಾರಣದಿಂದ ಸಂಭವಿಸಿದೆಯೇ ಅಥವಾ ಬೇರೆ ಔಷಧವನ್ನು ಸೇವಿಸುವುದರಿಂದ ಸಂಭವಿಸಿದೆಯೇ ಎಂಬುದನ್ನು ನಾವು ತನಿಖೆ ಮಾಡುತ್ತೇವೆ ಎಂದು ಎಸ್‌ಡಿಎಂ ಶುಕ್ಲಾ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ