AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ತೆಲಂಗಾಣದ 28 ವರ್ಷದ ವಿದ್ಯಾರ್ಥಿಗೆ ಶೂಟ್ ಮಾಡಿ ಹತ್ಯೆ

ಅಮೆರಿಕದಲ್ಲಿ ಹತ್ಯೆಗೈದ ತೆಲಂಗಾಣದ 28 ವರ್ಷದ ವಿದ್ಯಾರ್ಥಿಯನ್ನು 28 ವರ್ಷದ ಚಂದ್ರಶೇಖರ್ ಪೋಲ್ ಎಂದು ಗುರುತಿಸಲಾಗಿದೆ. ಇವರು ಡಲ್ಲಾಸ್‌ನ ಪೆಟ್ರೋಲ್ ಬಂಕ್‌ನಲ್ಲಿ ಅರೆಕಾಲಿಕ ಕೆಲಸಗಾರನಾಗಿ ಕೆಲಸ ಮಾಡುತ್ತಿದ್ದರು. ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ಹೋಗಿದ್ದ ಹೈದರಾಬಾದ್‌ನ ವಿದ್ಯಾರ್ಥಿಯಾದ ಚಂದ್ರಶೇಖರ್ ಅವರನ್ನು ಟೆಕ್ಸಾಸ್‌ನಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಈ ಘಟನೆಯ ಬಗ್ಗೆ ಸಿಎಂ ರೇವಂತ್ ರೆಡ್ಡಿ ಕೂಡ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅಮೆರಿಕದಲ್ಲಿ ತೆಲಂಗಾಣದ 28 ವರ್ಷದ ವಿದ್ಯಾರ್ಥಿಗೆ ಶೂಟ್ ಮಾಡಿ ಹತ್ಯೆ
Chandrashekar Pole
ಸುಷ್ಮಾ ಚಕ್ರೆ
|

Updated on:Oct 04, 2025 | 9:40 PM

Share

ಹೈದರಾಬಾದ್, ಅಕ್ಟೋಬರ್ 4: ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ (America) ಹೋಗಿದ್ದ ಹೈದರಾಬಾದ್‌ನ ವಿದ್ಯಾರ್ಥಿಯನ್ನು ಟೆಕ್ಸಾಸ್‌ನಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ತೆಲಂಗಾಣದ (Telangana) ಮಾಜಿ ಸಚಿವ ಮತ್ತು ಬಿಆರ್‌ಎಸ್ ಶಾಸಕ ಟಿ ಹರೀಶ್ ರಾವ್ ತಿಳಿಸಿದ್ದಾರೆ. ಮೃತಪಟ್ಟ ಯುವಕನ ಹೆಸರು ಚಂದ್ರಶೇಖರ್ ಪೋಲ್. ಅವರು ಟೆಕ್ಸಾಸ್‌ನ ಡೆಂಟನ್‌ನಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಿ ಅರೆಕಾಲಿಕ ಕೆಲಸ ಮಾಡುತ್ತಿದ್ದರು.

ಚಂದ್ರಶೇಖರ್ ಅವರು ಹೆಚ್ಚಿನ ಅಧ್ಯಯನಕ್ಕಾಗಿ ಡಲ್ಲಾಸ್‌ಗೆ ತೆರಳುವ ಮೊದಲು ದಂತ ಶಸ್ತ್ರಚಿಕಿತ್ಸೆಯಲ್ಲಿ (ಬಿಡಿಎಸ್) ಪದವಿ ಪಡೆದಿದ್ದರು. ಹೈದರಾಬಾದ್‌ನ ಲಾಲ್ ಬಹದ್ದೂರ್ ನಗರದ ನಿವಾಸಿಯಾದ ಚಂದ್ರಶೇಖರ್, ಬ್ಯಾಚುಲರ್ ಆಫ್ ಡೆಂಟಲ್ ಸರ್ಜರಿ (ಬಿಡಿಎಸ್) ಪದವಿಯನ್ನು ಪೂರ್ಣಗೊಳಿಸಿದ್ದರು. ನಂತರ, ಅವರು ಉನ್ನತ ಅಧ್ಯಯನಕ್ಕಾಗಿ ಅಮೆರಿಕಕ್ಕೆ ತೆರಳಿದರು. ಈ ಹತ್ಯೆ ಅವರ ಕುಟುಂಬ ಸದಸ್ಯರನ್ನು ಆಘಾತಕ್ಕೀಡು ಮಾಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶದ ಫರೂಕಾಬಾದ್‌ನ ಕೋಚಿಂಗ್ ಸೆಂಟರ್‌ನಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಸಾವು

ಆರಂಭಿಕ ವರದಿಗಳ ಪ್ರಕಾರ, ಚಂದ್ರಶೇಖರ್ ಪೋಲ್ ಅವರ ಎದೆಗೆ ಎರಡು ಗುಂಡು ಹಾರಿಸಲಾಯಿತು. ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮೊದಲೇ ಅವರು ಸಾವನ್ನಪ್ಪಿದರು. ಡಲ್ಲಾಸ್ ಪೊಲೀಸರು ಶಂಕಿತರಲ್ಲಿ ಒಬ್ಬರನ್ನು ಬಂಧಿಸಿದ್ದಾರೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ಘಟನೆಯ ಬಗ್ಗೆ ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ದುಃಖ ವ್ಯಕ್ತಪಡಿಸಿದ್ದಾರೆ. ಎಕ್ಸ್​ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ರೇವಂತ್ ರೆಡ್ಡಿ, ನಮ್ಮ ಸರ್ಕಾರ ಚಂದ್ರಶೇಖರ್ ಪೋಲ್ ಅವರ ಕುಟುಂಬದೊಂದಿಗೆ ನಿಲ್ಲುತ್ತದೆ ಎಂದು ಹೇಳಿದ್ದಾರೆ. 28 ವರ್ಷದ ವ್ಯಕ್ತಿಯ ಮೃತದೇಹವನ್ನು ಹೈದರಾಬಾದ್‌ಗೆ ಮರಳಿ ತರಲು ಅಗತ್ಯವಿರುವ ಎಲ್ಲಾ ಸಹಾಯವನ್ನು ಮಾಡುವುದಾಗಿ ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:39 pm, Sat, 4 October 25

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!