AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ತೆಲಂಗಾಣದ 28 ವರ್ಷದ ವಿದ್ಯಾರ್ಥಿಗೆ ಶೂಟ್ ಮಾಡಿ ಹತ್ಯೆ

ಅಮೆರಿಕದಲ್ಲಿ ಹತ್ಯೆಗೈದ ತೆಲಂಗಾಣದ 28 ವರ್ಷದ ವಿದ್ಯಾರ್ಥಿಯನ್ನು 28 ವರ್ಷದ ಚಂದ್ರಶೇಖರ್ ಪೋಲ್ ಎಂದು ಗುರುತಿಸಲಾಗಿದೆ. ಇವರು ಡಲ್ಲಾಸ್‌ನ ಪೆಟ್ರೋಲ್ ಬಂಕ್‌ನಲ್ಲಿ ಅರೆಕಾಲಿಕ ಕೆಲಸಗಾರನಾಗಿ ಕೆಲಸ ಮಾಡುತ್ತಿದ್ದರು. ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ಹೋಗಿದ್ದ ಹೈದರಾಬಾದ್‌ನ ವಿದ್ಯಾರ್ಥಿಯಾದ ಚಂದ್ರಶೇಖರ್ ಅವರನ್ನು ಟೆಕ್ಸಾಸ್‌ನಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಈ ಘಟನೆಯ ಬಗ್ಗೆ ಸಿಎಂ ರೇವಂತ್ ರೆಡ್ಡಿ ಕೂಡ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅಮೆರಿಕದಲ್ಲಿ ತೆಲಂಗಾಣದ 28 ವರ್ಷದ ವಿದ್ಯಾರ್ಥಿಗೆ ಶೂಟ್ ಮಾಡಿ ಹತ್ಯೆ
Chandrashekar Pole
ಸುಷ್ಮಾ ಚಕ್ರೆ
|

Updated on:Oct 04, 2025 | 9:40 PM

Share

ಹೈದರಾಬಾದ್, ಅಕ್ಟೋಬರ್ 4: ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ (America) ಹೋಗಿದ್ದ ಹೈದರಾಬಾದ್‌ನ ವಿದ್ಯಾರ್ಥಿಯನ್ನು ಟೆಕ್ಸಾಸ್‌ನಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ತೆಲಂಗಾಣದ (Telangana) ಮಾಜಿ ಸಚಿವ ಮತ್ತು ಬಿಆರ್‌ಎಸ್ ಶಾಸಕ ಟಿ ಹರೀಶ್ ರಾವ್ ತಿಳಿಸಿದ್ದಾರೆ. ಮೃತಪಟ್ಟ ಯುವಕನ ಹೆಸರು ಚಂದ್ರಶೇಖರ್ ಪೋಲ್. ಅವರು ಟೆಕ್ಸಾಸ್‌ನ ಡೆಂಟನ್‌ನಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಿ ಅರೆಕಾಲಿಕ ಕೆಲಸ ಮಾಡುತ್ತಿದ್ದರು.

ಚಂದ್ರಶೇಖರ್ ಅವರು ಹೆಚ್ಚಿನ ಅಧ್ಯಯನಕ್ಕಾಗಿ ಡಲ್ಲಾಸ್‌ಗೆ ತೆರಳುವ ಮೊದಲು ದಂತ ಶಸ್ತ್ರಚಿಕಿತ್ಸೆಯಲ್ಲಿ (ಬಿಡಿಎಸ್) ಪದವಿ ಪಡೆದಿದ್ದರು. ಹೈದರಾಬಾದ್‌ನ ಲಾಲ್ ಬಹದ್ದೂರ್ ನಗರದ ನಿವಾಸಿಯಾದ ಚಂದ್ರಶೇಖರ್, ಬ್ಯಾಚುಲರ್ ಆಫ್ ಡೆಂಟಲ್ ಸರ್ಜರಿ (ಬಿಡಿಎಸ್) ಪದವಿಯನ್ನು ಪೂರ್ಣಗೊಳಿಸಿದ್ದರು. ನಂತರ, ಅವರು ಉನ್ನತ ಅಧ್ಯಯನಕ್ಕಾಗಿ ಅಮೆರಿಕಕ್ಕೆ ತೆರಳಿದರು. ಈ ಹತ್ಯೆ ಅವರ ಕುಟುಂಬ ಸದಸ್ಯರನ್ನು ಆಘಾತಕ್ಕೀಡು ಮಾಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶದ ಫರೂಕಾಬಾದ್‌ನ ಕೋಚಿಂಗ್ ಸೆಂಟರ್‌ನಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಸಾವು

ಆರಂಭಿಕ ವರದಿಗಳ ಪ್ರಕಾರ, ಚಂದ್ರಶೇಖರ್ ಪೋಲ್ ಅವರ ಎದೆಗೆ ಎರಡು ಗುಂಡು ಹಾರಿಸಲಾಯಿತು. ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮೊದಲೇ ಅವರು ಸಾವನ್ನಪ್ಪಿದರು. ಡಲ್ಲಾಸ್ ಪೊಲೀಸರು ಶಂಕಿತರಲ್ಲಿ ಒಬ್ಬರನ್ನು ಬಂಧಿಸಿದ್ದಾರೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ಘಟನೆಯ ಬಗ್ಗೆ ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ದುಃಖ ವ್ಯಕ್ತಪಡಿಸಿದ್ದಾರೆ. ಎಕ್ಸ್​ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ರೇವಂತ್ ರೆಡ್ಡಿ, ನಮ್ಮ ಸರ್ಕಾರ ಚಂದ್ರಶೇಖರ್ ಪೋಲ್ ಅವರ ಕುಟುಂಬದೊಂದಿಗೆ ನಿಲ್ಲುತ್ತದೆ ಎಂದು ಹೇಳಿದ್ದಾರೆ. 28 ವರ್ಷದ ವ್ಯಕ್ತಿಯ ಮೃತದೇಹವನ್ನು ಹೈದರಾಬಾದ್‌ಗೆ ಮರಳಿ ತರಲು ಅಗತ್ಯವಿರುವ ಎಲ್ಲಾ ಸಹಾಯವನ್ನು ಮಾಡುವುದಾಗಿ ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:39 pm, Sat, 4 October 25

ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು