AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂನಲ್ಲಿ 28 ವರ್ಷದ ಮಹಿಳೆಯನ್ನು ಕಾರಿನಿಂದ ಹೊರಗೆಳೆದು ಸಾಮೂಹಿಕ ಅತ್ಯಾಚಾರ

ಅಸ್ಸಾಂನ ಸಿಲ್ಚಾರ್ ಬೈಪಾಸ್‌ನಲ್ಲಿ 28 ವರ್ಷದ ಮಹಿಳೆಯನ್ನು ಕಾರಿನಿಂದ ಹೊರಗೆಳೆದು, ಆಕೆ ಮದುವೆಯಾಗಲಿದ್ದ ಹುಡುಗನ ಮುಂದೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಈ ಪ್ರಕರಣದಲ್ಲಿ ಈಗಾಗಲೇ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ. 28 ವರ್ಷದ ಮಹಿಳೆ ತನ್ನ ಗೆಳೆಯನೊಂದಿಗೆ ರಾತ್ರಿ ಕಾರಿನಲ್ಲಿ ಹೋಗುತ್ತಿದ್ದಾಗ ಚಾಕು ತೋರಿಸಿ ಹಲವಾರು ಪುರುಷರು ಆಕೆಯ ಮೇಲೆ ಅತ್ಯಾಚಾರ ಎಸಗಿ, ಯುವತಿಯಿಂದ 10 ಸಾವಿರ ರೂ. ಹಣವನ್ನು ಕೂಡ ಸುಲಿಗೆ ಮಾಡಿದ್ದಾರೆ.

ಅಸ್ಸಾಂನಲ್ಲಿ 28 ವರ್ಷದ ಮಹಿಳೆಯನ್ನು ಕಾರಿನಿಂದ ಹೊರಗೆಳೆದು ಸಾಮೂಹಿಕ ಅತ್ಯಾಚಾರ
Woman Abuse
ಸುಷ್ಮಾ ಚಕ್ರೆ
|

Updated on: Feb 25, 2026 | 6:42 PM

Share

ಗುವಾಹಟಿ, ಫೆಬ್ರವರಿ 25: ಅಸ್ಸಾಂನ (Assam) ಸಿಲ್ಚಾರ್ ಬೈಪಾಸ್‌ನಲ್ಲಿ ರಾತ್ರಿ ತನ್ನ ಭಾವಿ ಪತಿಯೊಂದಿಗೆ ಲಾಂಗ್ ಡ್ರೈವ್ ಹೋಗಿದ್ದ 28 ವರ್ಷದ ಯುವತಿಗೆ ಆ ರಾತ್ರಿ ದುಃಸ್ವಪ್ನವಾಗಿ ಮಾರ್ಪಟ್ಟಿತು. ಆಕೆಯ ಜೊತೆ ನಿಶ್ಚಿತಾರ್ಥವಾದ ಹುಡುಗನ ಮುಂದೆ ಯುವಕರ ಗುಂಪೊಂದು ಆಕೆಯನ್ನು ಕಾರಿನಿಂದ ಹೊರಗೆ ಎಳೆದು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದೆ. ಅಲ್ಲದೆ, 10,000 ರೂ. ಹಣ ನೀಡುವಂತೆ ಆಕೆಯನ್ನು ಒತ್ತಾಯಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅತ್ಯಾಚಾರಕ್ಕೊಳಗಾದ ಯುವತಿಯ ಹೇಳಿಕೆಯ ಪ್ರಕಾರ, ಈ ಘಟನೆ ಫೆಬ್ರವರಿ 19ರ ರಾತ್ರಿ ನಡೆದಿದೆ. ಆಕೆ ಮತ್ತು ಆಕೆಯ ಭಾವಿ ಪತಿ ಸಿಲ್ಚಾರ್‌ನ ರಾಮನಗರ ಬೈಪಾಸ್ ರಸ್ತೆಯ ಮೂಲಕ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಘಟನೆ ನಡೆದಿದೆ. 7 ಜನರು ಒಬ್ಬರಾದ ನಂತರ ಒಬ್ಬರು ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ. ನಂತರ 10,000 ರೂ.ಗಳನ್ನು ತಮ್ಮ ಖಾತೆಗೆ ವರ್ಗಾಯಿಸುವಂತೆ ಒತ್ತಾಯಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಡ್ರಗ್ಸ್, ಅತ್ಯಾಚಾರ, ಮತಾಂತರ; ಭೋಪಾಲ್​​ನ ಅಕ್ಕ-ತಂಗಿಯರ ಲೈಂಗಿಕ ಜಾಲ ಪತ್ತೆ

ಪೊಲೀಸರ ಪ್ರಕಾರ, ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಆಕೆಯ ಹೇಳಿಕೆಯನ್ನು ಸಹ ದಾಖಲಿಸಲಾಗಿದೆ. ಸಾವಿರಾರು ಸ್ಥಳೀಯರು ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ. ತೃಣಮೂಲ ಕಾಂಗ್ರೆಸ್ ನಾಯಕಿ ಮತ್ತು ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ಸೇರಿದಂತೆ ರಾಜಕೀಯ ನಾಯಕರು ಸಹ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK