AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ವರ್ಷಗಳಲ್ಲಿ ಮೂರು ದೇಶಗಳ 3117 ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ; ಸಚಿವ ನಿತ್ಯಾನಂದ ರೈ ಮಾಹಿತಿ

2014ರ ಡಿಸೆಂಬರ್​ 31ರ ಮೊದಲು ಮತ್ತು ಆ ದಿನ ಭಾರತವನ್ನು ಪ್ರವೇಶಿಸಿದ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಅಲ್ಪಸಂಖ್ಯಾತರಿಗೆ ( ಆ ದೇಶಗಳಲ್ಲಿ ಕಿರುಕುಳಕ್ಕೆ ಒಳಗಾಗಿ) ಭಾರತದ ನಾಗರಿಕತ್ವ ನೀಡುವ ಸಂಬಂಧ ಕೇಂದ್ರ ಸರ್ಕಾರ 2019ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಗೊಳಿಸಿದೆ.

3 ವರ್ಷಗಳಲ್ಲಿ ಮೂರು ದೇಶಗಳ 3117 ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ; ಸಚಿವ ನಿತ್ಯಾನಂದ ರೈ ಮಾಹಿತಿ
ಸಚಿವ ನಿತ್ಯಾನಂದ ರೈ
TV9 Web
| Edited By: |

Updated on: Dec 22, 2021 | 3:44 PM

Share

2018ರಿಂದ 2021ರವರೆಗೆ ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶದ ಒಟ್ಟು 3117 ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ ತಿಳಿಸಿದ್ದಾರೆ.  ಸಂಸತ್ತಿನಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್​ಎಸ್) ರಾಜ್ಯ ಸಭಾ ಸಂಸದ ಡಾ. ಕೆ.ಕೇಶವ ರಾವ್​ ಈ ಬಗ್ಗೆ ಪ್ರಶ್ನೆ ಕೇಳಿದ್ದರು. ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಹಿಂದೂ, ಸಿಖ್, ಜೈನ್ ಮತ್ತು ಕ್ರಿಶ್ಚಿಯನ್ನರಂತಹ ಅಲ್ಪಸಂಖ್ಯಾತ ಗುಂಪುಗಳಿಂದ 2018-2021ರವರೆಗೆ ಪಡೆದ ಒಟ್ಟು ಅರ್ಜಿಗಳು ಮತ್ತು ಎಷ್ಟು ಜನರಿಗೆ ಪೌರತ್ವ ನೀಡಲಾಗಿದೆ ಎಂಬುದರ ಬಗ್ಗೆ ಡಾ. ಕೆ.ಕೇಶವ ರಾವ್​ ಪ್ರಶ್ನೆ ಕೇಳಿದ್ದರು.  

2018-2021ರವರೆಗೆ ಕೇಂದ್ರ ಸರ್ಕಾರ, ನೆರೆರಾಷ್ಟ್ರಗಳ ಅಲ್ಪಸಂಖ್ಯಾತರಿಂದ ಒಟ್ಟು 8244 ಪೌರತ್ವ ಅರ್ಜಿಗಳನ್ನು ಸ್ವೀಕರಿಸಿದೆ. ಅವರಲ್ಲಿ 3117 ಅರ್ಜಿದಾರರಿಗೆ ಭಾರತದ ಪೌರತ್ವ ನೀಡಲಾಗಿದೆ. ಇವರಲ್ಲಿ ನಿರಾಶ್ರಿತರೂ ಸೇರಿದ್ದಾರೆ. ಇವರೆಲ್ಲರೂ ವಿದೇಶಿಯರ ಕಾಯ್ದೆ 1946, ವಿದೇಶಿಯರ ನೋಂದಣಿ ಕಾಯ್ದೆ 1939, ಪಾಸ್​ಪೋರ್ಟ್​ (ಭಾರತಕ್ಕೆ ಪ್ರವೇಶ) ಕಾಯ್ದೆ 1920 ಮತ್ತು ಪೌರತ್ವ ಕಾಯ್ದೆ  1955ರಲ್ಲಿರುವ ನಿಬಂಧನೆಗಳ ಮೂಲಕ ನಿಯಂತ್ರಿಸಲ್ಪಡುತ್ತಾರೆ ಎಂದು  ರೈ ಹೇಳಿದ್ದಾಗಿ ಪಿಟಿಐ ವರದಿ ಮಾಡಿದೆ. ಇನ್ನು ಪೆಂಡಿಂಗ್​ ಇರುವ ಪೌರತ್ವ ಅರ್ಜಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ರೈ, ಅಫ್ಘಾನಿಸ್ತಾನದಿಂದ ಬಂದಿರುವ 1152 ಅರ್ಜಿಗಳು ಬಾಕಿ ಇವೆ. 224 ಶ್ರೀಲಂಕಾ ಮತ್ತು ಯುಎಸ್​ಎ, ನೇಪಾಳ ಮೂಲದವರ 189 ಮತ್ತು ಬಾಂಗ್ಲಾದೇಶಿಗರು ಕಳಿಸಿದ ಅರ್ಜಿಗಳಲ್ಲಿ 161 ಇನ್ನೂ ಪೆಂಡಿಂಗ್​ ಇದೆ ಎಂದು ಅವರು ತಿಳಿಸಿದ್ದಾರೆ. ಅಷ್ಟೇ ಅಲ್ಲ, ಹಾಗೇ, ಚೀನಾ ಮೂಲದ 10 ಮಂದಿ ಕೂಡ ಭಾರತದ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದು, ಅವಿಷ್ಟೂ ಹಾಗೇ ಇದೆ ಎಂದು ಹೇಳಿದ್ದಾರೆ.

2014ರ ಡಿಸೆಂಬರ್​ 31ರ ಮೊದಲು ಮತ್ತು ಆ ದಿನ ಭಾರತವನ್ನು ಪ್ರವೇಶಿಸಿದ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಅಲ್ಪಸಂಖ್ಯಾತರಿಗೆ ( ಆ ದೇಶಗಳಲ್ಲಿ ಕಿರುಕುಳಕ್ಕೆ ಒಳಗಾಗಿ) ಭಾರತದ ನಾಗರಿಕತ್ವ ನೀಡುವ ಸಂಬಂಧ ಕೇಂದ್ರ ಸರ್ಕಾರ 2019ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಗೊಳಿಸಿದೆ. ಆ ಸಿಎಎ ಕಾಯ್ದೆ ವಿರೋಧಿಸಿ ಅಸ್ಸಾಂ ಸೇರಿ ಇತರ ಈಶಾನ್ಯ ರಾಜ್ಯಗಳಲ್ಲಿ ವಿಪರೀತ ಪ್ರತಿಭಟನೆ ನಡೆದಿತ್ತು. ದೆಹಲಿಯ ಶಹೀನ್​ ಬಾಗ್​ನಲ್ಲಿ 2020ರವರೆಗೂ ಪ್ರತಿಭಟನೆ ನಡೆದು, ಅದು ಹಿಂಸಾಚಾರ ಸ್ವರೂಪವನ್ನೂ ತಲುಪಿತ್ತು.

ಇದನ್ನೂ ಓದಿ: ಚಳಿಗಾಲದಲ್ಲಿ ಕಾಡುವ ಮಂಡಿನೋವಿನಿಂದ ಮುಕ್ತಿ ಪಡೆಯಲು ಈ ಕ್ರಮಗಳನ್ನು ಅನುಸರಿಸಿ

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ