ಅಸ್ಸಾಂ ಹಣಕಾಸು ಸಚಿವ ಹಿಮಂತ ಬಿಸ್ವ ಶರ್ಮಾ ಹತ್ಯೆಗೆ ಸಂಚು: ಮೂವರ ಬಂಧನ

Himanta Biswa Sarma: ಮಾರ್ಚ್ 8ರಂದು ಉಲ್ಫಾ ಸಂಘಟನೆಯ ನಾಯಕ ಪ್ರದೀಪ್ ಗಗೊಯಿ, ಮನಬ್ ಪಾಠಕ್ ಮತ್ತು ಕೇತು ಮುಂಡಿ ಮತ್ತು ಕೆಲವು ಸದಸ್ಯರು ಅಸ್ಸಾಂನ ಹಣಕಾಸು ಸಚಿವ ಡಾ.ಹಿಮಂತ ಬಿಸ್ವ ಶರ್ಮಾ ಅವರನ್ನು ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ಬಳಸಿ ಹತ್ಯೆ ಮಾಡಲು ಸಂಚು ರೂಪಿಸಿದ್ದರು

ಅಸ್ಸಾಂ ಹಣಕಾಸು ಸಚಿವ ಹಿಮಂತ ಬಿಸ್ವ ಶರ್ಮಾ ಹತ್ಯೆಗೆ ಸಂಚು: ಮೂವರ ಬಂಧನ
ಹಿಮಂತ ಬಿಸ್ವ ಶರ್ಮಾ (ಟ್ವಿಟರ್ ಚಿತ್ರ)
Follow us
|

Updated on: Mar 10, 2021 | 8:23 PM

ಗುವಾಹಟಿ: ಅಸ್ಸಾಂ ಸಚಿವ ಹಿಮಂತ ಬಿಸ್ವ ಶರ್ಮಾ ಅವರ ಹತ್ಯೆಗೆ ಸಂಚು ನಡೆಸಿದ ಆರೋಪದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಉಲ್ಫಾ ಸಂಘಟನೆಯ ನಾಯಕ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.ಅಪರಾಧ ಪತ್ತೆ ದಳಕ್ಕೆ ಲಭಿಸಿದ ರಹಸ್ಯ ಮಾಹಿತಿಯ ಮೇರೆಗೆ ಈ ವ್ಯಕ್ತಿಗಳನ್ನು ಬಂಧಿಸಲಾಗಿದೆ. ಮುಂಬರುವ ವಿಧಾನಸಭೆ ಚುನಾವಣೆಗೆ ಅಡ್ಡಿಯುಂಟು ಮಾಡಲು ಈ ಸಂಚು ರೂಪಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮಾರ್ಚ್ 8ರಂದು ಉಲ್ಫಾ ಸಂಘಟನೆಯ ನಾಯಕ ಪ್ರದೀಪ್ ಗಗೊಯಿ, ಮನಬ್ ಪಾಠಕ್ ಮತ್ತು ಕೇತು ಮುಂಡಿ ಮತ್ತು ಕೆಲವು ಸದಸ್ಯರು ಅಸ್ಸಾಂನ ಹಣಕಾಸು ಸಚಿವ ಡಾ.ಹಿಮಂತ ಬಿಸ್ವ ಶರ್ಮಾ ಅವರನ್ನು ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ಬಳಸಿ ಹತ್ಯೆ ಮಾಡಲು ಸಂಚು ರೂಪಿಸಿದ್ದರು. ಅಸ್ಸಾಂನ ಜನರಲ್ಲಿ ಭಯ ಹುಟ್ಟಿಸಿ ಚುನಾವಣೆಗೆ ಅಡ್ಡಿ ಪಡಿಸುವುದು ಅವರ ಉದ್ದೇಶವಾಗಿತ್ತು ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಪೊಲೀಸ್ ಅಧಿಕಾರಿಯೊಬ್ಬರು ಹೇಳಿರುವುದಾಗಿ ಎನ್​ಡಿಟಿವಿ ವರದಿ ಮಾಡಿದೆ .

ಬಂಧಿತ ಆರೋಪಿಗಳ ದೂರವಾಣಿ ಕರೆ ರೆಕಾರ್ಡಿಂಗ್​ಗಳನ್ನು ಸಾಕ್ಷ್ಯವಾಗಿ ಪರಿಗಣಿಸಲಾಗಿದೆ ಎಂದು ಅಪರಾಧ ಪತ್ತೆ ದಳ ಹೇಳಿದೆ. ಈ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು. ನಾವು ಕಳೆದ ರಾತ್ರಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿ ಬಂಧಿಸಿದ್ದೇವೆ. ನ್ಯಾಯಾಲಯ ಅವರನ್ನು ಮೂರು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿದೆ . ಪ್ರಸ್ತುತ ಸಂಚಿನಲ್ಲಿ ನಂಟು ಹೊಂದಿರುವ ಇತರ ವ್ಯಕ್ತಿಗಳಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ

ಸಿಆರ್‌ಪಿಎಫ್‌ ಜತೆಗೆ ಜೆಡ್ ಪ್ಲಸ್‌ ಭದ್ರತೆ ಹೊಂದಿರುವ ಶರ್ಮಾ ಈ ಕುರಿತು ಪ್ರತಿಕ್ರಿಯಿಸಿದ್ದು, ಸೋಮವಾರ ರಾತ್ರಿ ಡಿಜಿಪಿಯವರಿಂದ ನನಗೆ ಕರೆ ಬಂತು. ಅವರು ಎಚ್ಚರಿಕೆಯಲ್ಲಿರುವಂತೆ ನನಗೆ ತಿಳಿಸಿದರು. ಜತೆಗೆ ನನ್ನ ಭದ್ರತೆಗೆ ಕ್ರಮ ಕೈಗೊಳ್ಳುತ್ತಿರುವುದಾಗಿ ಹೇಳಿದರು ಎಂದಿದ್ದಾರೆ.

ಹತ್ಯೆ ಸಂಚು ಆರೋಪ ಹೊತ್ತಿರುವ ಈ ಮೂವರನ್ನು ‘ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (ಯುಎಪಿಎ)’ ಅಡಿಯಲ್ಲಿ ಬಂಧಿಸಲಾಗಿದೆ. ಈ ಮೂವರ ವಿರುದ್ಧ ಐಪಿಸಿಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಕ್ರಿಮಿನಲ್‌ ಸಂಚು, ಕಾನೂನುಬಾಹಿರ ಚಟುವಟಿಕೆ ನಿರ್ಬಂಧ ಕಾಯಿದೆಯಡಿಯಲ್ಲಿ ಭಯೋತ್ಪಾದನಾ ಕೃತ್ಯಕ್ಕೆ ಸಂಚು ರೂಪಿಸಿದ ಆರೋಪ ಹೊರಿಸಲಾಗಿದೆ.

ಇದನ್ನೂ ಓದಿ: Assam Elections 2021: ಅಸ್ಸಾಂನಲ್ಲೂ ಬಿಜೆಪಿ-ಕಾಂಗ್ರೆಸ್ ನಡುವೆ ಸಮರ ಜೋರು

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು