AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಕಿಂಗ್ ಮಾಡುತ್ತಿದ್ದ ಮುಖ್ಯಮಂತ್ರಿಯ ಹತ್ಯೆ ಪ್ರಯತ್ನ; ಒಂದೇ ಒಂದು ಜಿಗಿತದಿಂದ ಪಾರಾದ ಬಿಪ್ಲಬ್​ ಕುಮಾರ್​ ದೇಬ್​

ಗುರುವಾರ ರಾತ್ರಿಯೇ ಆ ಮೂವರನ್ನೂ ಕೆರ್ಚೌಮುಹಾನಿ ಪ್ರದೇಶದಲ್ಲಿ ಬಂಧಿಸಲಾಗಿದೆ. ವಾಹನವನ್ನು ಜಪ್ತಿ ಮಾಡಲಾಗಿದೆ. ಮೂವರ ವಿರುದ್ಧ ಹತ್ಯೆ ಪ್ರಯತ್ನ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ವಾಕಿಂಗ್ ಮಾಡುತ್ತಿದ್ದ ಮುಖ್ಯಮಂತ್ರಿಯ ಹತ್ಯೆ ಪ್ರಯತ್ನ; ಒಂದೇ ಒಂದು ಜಿಗಿತದಿಂದ ಪಾರಾದ ಬಿಪ್ಲಬ್​ ಕುಮಾರ್​ ದೇಬ್​
ಬಿಪ್ಲಬ್ ಕುಮಾರ್ ದೇಬ್​
TV9 Web
| Edited By: |

Updated on:Aug 07, 2021 | 4:02 PM

Share

ಅಗಾರ್ತಲಾ: ಸ್ವಲ್ಪ ಮೈಮರೆತಿದ್ದರೂ ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್​ ಕುಮಾರ್ ದೇಬ್​ ಅವರ ಪ್ರಾಣ ಹೋಗುತ್ತಿತ್ತು..ಅಂದರೆ ಸಿಎಂ ಪ್ರಾಣವೇ ಹೋಗುತ್ತಿತ್ತು. ಪೊಲೀಸರು ಹೇಳಿದ ಈ ಘಟನೆಯನ್ನು ಕೇಳಿದ ಮೇಲೆ, ಇತ್ತೀಚೆಗೆ ಜಾರ್ಖಂಡದ ನ್ಯಾಯಾಧೀಶ ಉತ್ತಮ್​ ಆನಂದ್​ ಹತ್ಯೆಯಾದ ಮಾದರಿಯಲ್ಲೇ ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್​ ಕುಮಾರ್​ ದೇಬ್​ ಹತ್ಯೆಗೆ ಕೂಡ ಸಂಚು ನಡೆದಿತ್ತಾ ಎಂಬುದೊಂದು ಅನುಮಾನ ಶುರುವಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಇದು ಗುರುವಾರ ಸಂಜೆ ಹೊತ್ತಿಗೆ ನಡೆದ ಘಟನೆ. ಮುಖ್ಯಮಂತ್ರಿ ಬಿಪ್ಲಬ್​ ಕುಮಾರ್ ದೇಬ್​ ಸಂಜೆ ಹೊತ್ತು ತಮ್ಮ ಶ್ಯಾಮಪ್ರಸಾದ ಮುಖರ್ಜಿ ಮಾರ್ಗದಲ್ಲಿರುವ ಸರ್ಕಾರಿ ನಿವಾಸದ ಸಮೀಪವೇ ವಾಕಿಂಗ್​ ಮಾಡುತ್ತಿದ್ದರು. ಆಗ ಈ ಮೂವರೂ ಕಾರನ್ನು ಅವರ ಭದ್ರತಾ ವಲಯವನ್ನೂ ಮೀರಿ ಮುಖ್ಯಮಂತ್ರಿಯೆಡೆಗೇ ಭರದಿಂದ ಚಲಾಯಿಸಿಕೊಂಡು ಹೋಗಿದ್ದಾರೆ. ದೇಬ್ ಅಲ್ಲಿಂದ ಸ್ವಲ್ಪ ಹಿಂದಕ್ಕೆ ಜಿಗಿದು ಆ್ಯಕ್ಸಿಡೆಂಟ್​ ಆಗುವುದನ್ನು ತಪ್ಪಿಸಿಕೊಂಡಿದ್ದಾರೆ. ಆದರೆ ಅವರ ಭದ್ರತಾ ಸಿಬ್ಬಂದಿಯೊಬ್ಬರಿಗೆ ಸಣ್ಣಪ್ರಮಾಣದ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಆ ಕಾರಿನ ವೇಗ ಎಷ್ಟಿತ್ತೆಂದರೆ, ಮುಖ್ಯಮಂತ್ರಿಯ ಭದ್ರತಾ ಸಿಬ್ಬಂದಿ ತಡೆಯಲು ಪ್ರಯತ್ನ ಮಾಡಿದರೂ ಅದು ಸಾಧ್ಯವಾಗಲಿಲ್ಲ.

ಗುರುವಾರ ರಾತ್ರಿಯೇ ಆ ಮೂವರನ್ನೂ ಕೆರ್ಚೌಮುಹಾನಿ ಪ್ರದೇಶದಲ್ಲಿ ಬಂಧಿಸಲಾಗಿದೆ. ವಾಹನವನ್ನು ಜಪ್ತಿ ಮಾಡಲಾಗಿದೆ. ಮೂವರ ವಿರುದ್ಧ ಹತ್ಯೆ ಪ್ರಯತ್ನ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಈ ಮೂವರು ಆರೋಪಿಗಳೂ 20ವರ್ಷ ಆಸುಪಾಸಿನವರೇ ಎನ್ನಲಾಗಿದೆ.

ಇದನ್ನೂ ಓದಿ: ನನಗೆ ಬೇಕಾದ ಖಾತೆ ಸಿಕ್ಕಿಲ್ಲ, 2-3 ದಿನಗಳಲ್ಲಿ ಮುಂದಿನ ನಿರ್ಧಾರ ತಿಳಿಸುವೆ: ನೂತನ ಸಚಿವ ಎಂಟಿಬಿ ನಾಗರಾಜ್

ಕೇಳಿದ ಖಾತೆ ಕೊಡದಿದ್ದರೆ ರಾಜೀನಾಮೆ ನೀಡುವ ಪರೋಕ್ಷ ಸುಳಿವು ಕೊಟ್ಟ ನೂತನ ಸಚಿವ ಆನಂದ್ ಸಿಂಗ್

Published On - 4:00 pm, Sat, 7 August 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್