AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಕಿಂಗ್ ಮಾಡುತ್ತಿದ್ದ ಮುಖ್ಯಮಂತ್ರಿಯ ಹತ್ಯೆ ಪ್ರಯತ್ನ; ಒಂದೇ ಒಂದು ಜಿಗಿತದಿಂದ ಪಾರಾದ ಬಿಪ್ಲಬ್​ ಕುಮಾರ್​ ದೇಬ್​

ಗುರುವಾರ ರಾತ್ರಿಯೇ ಆ ಮೂವರನ್ನೂ ಕೆರ್ಚೌಮುಹಾನಿ ಪ್ರದೇಶದಲ್ಲಿ ಬಂಧಿಸಲಾಗಿದೆ. ವಾಹನವನ್ನು ಜಪ್ತಿ ಮಾಡಲಾಗಿದೆ. ಮೂವರ ವಿರುದ್ಧ ಹತ್ಯೆ ಪ್ರಯತ್ನ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ವಾಕಿಂಗ್ ಮಾಡುತ್ತಿದ್ದ ಮುಖ್ಯಮಂತ್ರಿಯ ಹತ್ಯೆ ಪ್ರಯತ್ನ; ಒಂದೇ ಒಂದು ಜಿಗಿತದಿಂದ ಪಾರಾದ ಬಿಪ್ಲಬ್​ ಕುಮಾರ್​ ದೇಬ್​
ಬಿಪ್ಲಬ್ ಕುಮಾರ್ ದೇಬ್​
TV9 Web
| Updated By: Lakshmi Hegde|

Updated on:Aug 07, 2021 | 4:02 PM

Share

ಅಗಾರ್ತಲಾ: ಸ್ವಲ್ಪ ಮೈಮರೆತಿದ್ದರೂ ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್​ ಕುಮಾರ್ ದೇಬ್​ ಅವರ ಪ್ರಾಣ ಹೋಗುತ್ತಿತ್ತು..ಅಂದರೆ ಸಿಎಂ ಪ್ರಾಣವೇ ಹೋಗುತ್ತಿತ್ತು. ಪೊಲೀಸರು ಹೇಳಿದ ಈ ಘಟನೆಯನ್ನು ಕೇಳಿದ ಮೇಲೆ, ಇತ್ತೀಚೆಗೆ ಜಾರ್ಖಂಡದ ನ್ಯಾಯಾಧೀಶ ಉತ್ತಮ್​ ಆನಂದ್​ ಹತ್ಯೆಯಾದ ಮಾದರಿಯಲ್ಲೇ ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್​ ಕುಮಾರ್​ ದೇಬ್​ ಹತ್ಯೆಗೆ ಕೂಡ ಸಂಚು ನಡೆದಿತ್ತಾ ಎಂಬುದೊಂದು ಅನುಮಾನ ಶುರುವಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಇದು ಗುರುವಾರ ಸಂಜೆ ಹೊತ್ತಿಗೆ ನಡೆದ ಘಟನೆ. ಮುಖ್ಯಮಂತ್ರಿ ಬಿಪ್ಲಬ್​ ಕುಮಾರ್ ದೇಬ್​ ಸಂಜೆ ಹೊತ್ತು ತಮ್ಮ ಶ್ಯಾಮಪ್ರಸಾದ ಮುಖರ್ಜಿ ಮಾರ್ಗದಲ್ಲಿರುವ ಸರ್ಕಾರಿ ನಿವಾಸದ ಸಮೀಪವೇ ವಾಕಿಂಗ್​ ಮಾಡುತ್ತಿದ್ದರು. ಆಗ ಈ ಮೂವರೂ ಕಾರನ್ನು ಅವರ ಭದ್ರತಾ ವಲಯವನ್ನೂ ಮೀರಿ ಮುಖ್ಯಮಂತ್ರಿಯೆಡೆಗೇ ಭರದಿಂದ ಚಲಾಯಿಸಿಕೊಂಡು ಹೋಗಿದ್ದಾರೆ. ದೇಬ್ ಅಲ್ಲಿಂದ ಸ್ವಲ್ಪ ಹಿಂದಕ್ಕೆ ಜಿಗಿದು ಆ್ಯಕ್ಸಿಡೆಂಟ್​ ಆಗುವುದನ್ನು ತಪ್ಪಿಸಿಕೊಂಡಿದ್ದಾರೆ. ಆದರೆ ಅವರ ಭದ್ರತಾ ಸಿಬ್ಬಂದಿಯೊಬ್ಬರಿಗೆ ಸಣ್ಣಪ್ರಮಾಣದ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಆ ಕಾರಿನ ವೇಗ ಎಷ್ಟಿತ್ತೆಂದರೆ, ಮುಖ್ಯಮಂತ್ರಿಯ ಭದ್ರತಾ ಸಿಬ್ಬಂದಿ ತಡೆಯಲು ಪ್ರಯತ್ನ ಮಾಡಿದರೂ ಅದು ಸಾಧ್ಯವಾಗಲಿಲ್ಲ.

ಗುರುವಾರ ರಾತ್ರಿಯೇ ಆ ಮೂವರನ್ನೂ ಕೆರ್ಚೌಮುಹಾನಿ ಪ್ರದೇಶದಲ್ಲಿ ಬಂಧಿಸಲಾಗಿದೆ. ವಾಹನವನ್ನು ಜಪ್ತಿ ಮಾಡಲಾಗಿದೆ. ಮೂವರ ವಿರುದ್ಧ ಹತ್ಯೆ ಪ್ರಯತ್ನ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಈ ಮೂವರು ಆರೋಪಿಗಳೂ 20ವರ್ಷ ಆಸುಪಾಸಿನವರೇ ಎನ್ನಲಾಗಿದೆ.

ಇದನ್ನೂ ಓದಿ: ನನಗೆ ಬೇಕಾದ ಖಾತೆ ಸಿಕ್ಕಿಲ್ಲ, 2-3 ದಿನಗಳಲ್ಲಿ ಮುಂದಿನ ನಿರ್ಧಾರ ತಿಳಿಸುವೆ: ನೂತನ ಸಚಿವ ಎಂಟಿಬಿ ನಾಗರಾಜ್

ಕೇಳಿದ ಖಾತೆ ಕೊಡದಿದ್ದರೆ ರಾಜೀನಾಮೆ ನೀಡುವ ಪರೋಕ್ಷ ಸುಳಿವು ಕೊಟ್ಟ ನೂತನ ಸಚಿವ ಆನಂದ್ ಸಿಂಗ್

Published On - 4:00 pm, Sat, 7 August 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!