AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಕಿಂಗ್ ಮಾಡುತ್ತಿದ್ದ ಮುಖ್ಯಮಂತ್ರಿಯ ಹತ್ಯೆ ಪ್ರಯತ್ನ; ಒಂದೇ ಒಂದು ಜಿಗಿತದಿಂದ ಪಾರಾದ ಬಿಪ್ಲಬ್​ ಕುಮಾರ್​ ದೇಬ್​

ಗುರುವಾರ ರಾತ್ರಿಯೇ ಆ ಮೂವರನ್ನೂ ಕೆರ್ಚೌಮುಹಾನಿ ಪ್ರದೇಶದಲ್ಲಿ ಬಂಧಿಸಲಾಗಿದೆ. ವಾಹನವನ್ನು ಜಪ್ತಿ ಮಾಡಲಾಗಿದೆ. ಮೂವರ ವಿರುದ್ಧ ಹತ್ಯೆ ಪ್ರಯತ್ನ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ವಾಕಿಂಗ್ ಮಾಡುತ್ತಿದ್ದ ಮುಖ್ಯಮಂತ್ರಿಯ ಹತ್ಯೆ ಪ್ರಯತ್ನ; ಒಂದೇ ಒಂದು ಜಿಗಿತದಿಂದ ಪಾರಾದ ಬಿಪ್ಲಬ್​ ಕುಮಾರ್​ ದೇಬ್​
ಬಿಪ್ಲಬ್ ಕುಮಾರ್ ದೇಬ್​
TV9 Web
| Edited By: |

Updated on:Aug 07, 2021 | 4:02 PM

Share

ಅಗಾರ್ತಲಾ: ಸ್ವಲ್ಪ ಮೈಮರೆತಿದ್ದರೂ ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್​ ಕುಮಾರ್ ದೇಬ್​ ಅವರ ಪ್ರಾಣ ಹೋಗುತ್ತಿತ್ತು..ಅಂದರೆ ಸಿಎಂ ಪ್ರಾಣವೇ ಹೋಗುತ್ತಿತ್ತು. ಪೊಲೀಸರು ಹೇಳಿದ ಈ ಘಟನೆಯನ್ನು ಕೇಳಿದ ಮೇಲೆ, ಇತ್ತೀಚೆಗೆ ಜಾರ್ಖಂಡದ ನ್ಯಾಯಾಧೀಶ ಉತ್ತಮ್​ ಆನಂದ್​ ಹತ್ಯೆಯಾದ ಮಾದರಿಯಲ್ಲೇ ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್​ ಕುಮಾರ್​ ದೇಬ್​ ಹತ್ಯೆಗೆ ಕೂಡ ಸಂಚು ನಡೆದಿತ್ತಾ ಎಂಬುದೊಂದು ಅನುಮಾನ ಶುರುವಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಇದು ಗುರುವಾರ ಸಂಜೆ ಹೊತ್ತಿಗೆ ನಡೆದ ಘಟನೆ. ಮುಖ್ಯಮಂತ್ರಿ ಬಿಪ್ಲಬ್​ ಕುಮಾರ್ ದೇಬ್​ ಸಂಜೆ ಹೊತ್ತು ತಮ್ಮ ಶ್ಯಾಮಪ್ರಸಾದ ಮುಖರ್ಜಿ ಮಾರ್ಗದಲ್ಲಿರುವ ಸರ್ಕಾರಿ ನಿವಾಸದ ಸಮೀಪವೇ ವಾಕಿಂಗ್​ ಮಾಡುತ್ತಿದ್ದರು. ಆಗ ಈ ಮೂವರೂ ಕಾರನ್ನು ಅವರ ಭದ್ರತಾ ವಲಯವನ್ನೂ ಮೀರಿ ಮುಖ್ಯಮಂತ್ರಿಯೆಡೆಗೇ ಭರದಿಂದ ಚಲಾಯಿಸಿಕೊಂಡು ಹೋಗಿದ್ದಾರೆ. ದೇಬ್ ಅಲ್ಲಿಂದ ಸ್ವಲ್ಪ ಹಿಂದಕ್ಕೆ ಜಿಗಿದು ಆ್ಯಕ್ಸಿಡೆಂಟ್​ ಆಗುವುದನ್ನು ತಪ್ಪಿಸಿಕೊಂಡಿದ್ದಾರೆ. ಆದರೆ ಅವರ ಭದ್ರತಾ ಸಿಬ್ಬಂದಿಯೊಬ್ಬರಿಗೆ ಸಣ್ಣಪ್ರಮಾಣದ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಆ ಕಾರಿನ ವೇಗ ಎಷ್ಟಿತ್ತೆಂದರೆ, ಮುಖ್ಯಮಂತ್ರಿಯ ಭದ್ರತಾ ಸಿಬ್ಬಂದಿ ತಡೆಯಲು ಪ್ರಯತ್ನ ಮಾಡಿದರೂ ಅದು ಸಾಧ್ಯವಾಗಲಿಲ್ಲ.

ಗುರುವಾರ ರಾತ್ರಿಯೇ ಆ ಮೂವರನ್ನೂ ಕೆರ್ಚೌಮುಹಾನಿ ಪ್ರದೇಶದಲ್ಲಿ ಬಂಧಿಸಲಾಗಿದೆ. ವಾಹನವನ್ನು ಜಪ್ತಿ ಮಾಡಲಾಗಿದೆ. ಮೂವರ ವಿರುದ್ಧ ಹತ್ಯೆ ಪ್ರಯತ್ನ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಈ ಮೂವರು ಆರೋಪಿಗಳೂ 20ವರ್ಷ ಆಸುಪಾಸಿನವರೇ ಎನ್ನಲಾಗಿದೆ.

ಇದನ್ನೂ ಓದಿ: ನನಗೆ ಬೇಕಾದ ಖಾತೆ ಸಿಕ್ಕಿಲ್ಲ, 2-3 ದಿನಗಳಲ್ಲಿ ಮುಂದಿನ ನಿರ್ಧಾರ ತಿಳಿಸುವೆ: ನೂತನ ಸಚಿವ ಎಂಟಿಬಿ ನಾಗರಾಜ್

ಕೇಳಿದ ಖಾತೆ ಕೊಡದಿದ್ದರೆ ರಾಜೀನಾಮೆ ನೀಡುವ ಪರೋಕ್ಷ ಸುಳಿವು ಕೊಟ್ಟ ನೂತನ ಸಚಿವ ಆನಂದ್ ಸಿಂಗ್

Published On - 4:00 pm, Sat, 7 August 21

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ