AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆಟ್​ ಅಧಿವೇಶನ ಶುರುವಾಗ್ತಿದ್ದಂತೆ 3 ಬಿಜೆಪಿ ಶಾಸಕರು ಅಮಾನತು: ಪ್ರತಿಭಟಿಸಿ ಹೊರನಡೆದ ಕಾಂಗ್ರೆಸ್ ಶಾಸಕರು !

ಈ ಬಾರಿ ಬಜೆಟ್​ ಅಧಿವೇಶನದ ಪ್ರಾರಂಭದಲ್ಲಿ ರಾಜ್ಯಪಾಲರ ಭಾಷಣ ಅವಶ್ಯಕತೆ ಇಲ್ಲ ಎಂದು ಹಿಂದೆಯೇ ಟಿಆರ್​ಎಸ್​ ಹೇಳಿದೆ. ಇದನ್ನು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ವಿರೋಧಿಸುತ್ತಿವೆ.

ಬಜೆಟ್​ ಅಧಿವೇಶನ ಶುರುವಾಗ್ತಿದ್ದಂತೆ 3 ಬಿಜೆಪಿ ಶಾಸಕರು ಅಮಾನತು: ಪ್ರತಿಭಟಿಸಿ ಹೊರನಡೆದ ಕಾಂಗ್ರೆಸ್ ಶಾಸಕರು !
ಅಮಾನತುಗೊಂಡ ಬಿಜೆಪಿ ಶಾಸಕರು
TV9 Web
| Updated By: Lakshmi Hegde|

Updated on: Mar 07, 2022 | 4:47 PM

Share

ತೆಲಂಗಾಣ ಬಿಜೆಪಿ ಶಾಸಕರಾದ (BJP MLAs) ಟಿ.ರಾಜಾ ಸಿಂಗ್​, ಎಂ.ರಘುನಂದನ್​ ರಾವ್​ ಮತ್ತು ಎಟೆಲಾ ರಾಜೇಂದರ್​ ಅವರನ್ನು ತೆಲಂಗಾಣ ವಿಧಾನಸಭೆಯಿಂದ ಇಂದು ಅಮಾನತು ಮಾಡಲಾಗಿದೆ. ತಮ್ಮ ಅಮಾನತನ್ನು ವಿರೋಧಿಸಿ ಈ ಮೂರು ಶಾಸಕರು ವಿಧಾನಸಭೆಯ ಹೊರಗೆ ಕುಳಿತು ಪ್ರತಿಭಟನೆ ನಡೆಸಿದ್ದಾರೆ.  ಬಿಜೆಪಿ ಶಾಸಕರನ್ನು ಅಮಾನತು ಮಾಡುವ  ಪ್ರಸ್ತಾವನೆಯನ್ನು ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷದ ಸಚಿವ ತಲಸಾನಿ ಶ್ರೀನಿವಾಸ್ ಯಾದವ್ ಮಂಡಿಸಿದ್ದರು.

ತೆಲಂಗಾಣ ವಿಧಾನಸಭೆಯಲ್ಲಿ ಇಂದಿನಿಂದ ಬಜೆಟ್​ ಅಧಿವೇಶನ ಪ್ರಾರಂಭವಾಗಿದೆ. ಇಂದು ಮುಂಜಾನೆ ಅಧಿವೇಶನ ಪ್ರಾರಂಭವಾದ ಕೆಲವೇ ಹೊತ್ತಲ್ಲಿ, ಈ ಮೂವರೂ ಬಿಜೆಪಿ ಶಾಸಕರನ್ನು ಅಮಾನತು ಮಾಡುವ ಪ್ರಸ್ತಾಪವನ್ನು ಸಚಿವ ತಲಸಾನಿ ಶ್ರೀನಿವಾಸ್​ ಯಾದವ್ ಮಂಡಿಸಿದರು. ಅದರಂತೆ ಬಜೆಟ್ ಅಧಿವೇಶನ ಮುಗಿಯುವವರೆಗೂ ಇವರು ಅಮಾನತಿನಲ್ಲಿಯೇ ಇರುತ್ತಾರೆ. ಬಜೆಟ್​ ಅಧಿವೇಶನದ ಪ್ರಾರಂಭದಲ್ಲಿ ರಾಜ್ಯಪಾಲರ ಭಾಷಣ ನಿಗದಿ ಪಡಿಸಿಲ್ಲ ಎಂಬ ಕಾರಣಕ್ಕೆ, ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ಈ ಮೂವರೂ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸುವ ಯೋಜನೆ ಹಾಕಿಕೊಂಡಿದ್ದರು. ಪ್ರತಿಭಟನೆ ಮೂಲಕ ಅಧಿವೇಶನ ಹಾಳು ಮಾಡುತ್ತಾರೆ ಎಂಬ ಕಾರಣಕ್ಕೆ ಅವರನ್ನು ಅಮಾನತು ಮಾಡಲಾಗಿದೆ.

ಹೊರನಡೆದ ಕಾಂಗ್ರೆಸ್ ಶಾಸಕರು

ಈ ಬಜೆಟ್ ಅಧಿವೇಶನದ ವೇಳೆ ಕಾಂಗ್ರೆಸ್ ಶಾಸಕರೂ ಕೂಡ ಹೊರನಡೆದಿದ್ದಾರೆ. ವಿಧಾನಸಭೆ ಸ್ಪೀಕರ್​ ಪೋಚಾರಂ ಶ್ರೀನಿವಾಸ್ ಅವರು ಏಕಪಕ್ಷೀಯವಾಗಿ ಸದನ ನಡೆಸುತ್ತಿದ್ದಾರೆ. ಎಲ್ಲ ನಿಯಮಗಳನ್ನೂ ಉಲ್ಲಂಘಿಸುತ್ತಿದ್ದಾರೆ. ಪ್ರತಿಪಕ್ಷಗಳಿಗೆ ಮಾತನಾಡಲು ಅವಕಾಶವನ್ನೇ ಕೊಡುತ್ತಿಲ್ಲ. ಹೀಗಾಗಿ ನಾವು ಸದನದಿಂದ ಹೊರನಡೆಯುತ್ತೇವೆ ಎಂದು ಹೇಳಿದ್ದಾರೆ.

ಈ ಬಾರಿ ಬಜೆಟ್​ ಅಧಿವೇಶನದ ಪ್ರಾರಂಭದಲ್ಲಿ ರಾಜ್ಯಪಾಲರ ಭಾಷಣ ಅವಶ್ಯಕತೆ ಇಲ್ಲ ಎಂದು ಹಿಂದೆಯೇ ಟಿಆರ್​ಎಸ್​ ಹೇಳಿದೆ.  ಬಜೆಟ್​ ಅಧಿವೇಶನವೆಂದು ಹೊಸದಾಗಿ ಶುರು ಮಾಡುತ್ತಿಲ್ಲ. ಅದಕ್ಕೂ ಪೂರ್ವ ನಡೆಯುತ್ತಿದ್ದ ಅಧಿವೇಶನವನ್ನೇ ಮುಂದುವರಿಸಲಾಗಿದೆ. ಹಾಗಾಗಿ ರಾಜ್ಯಪಾಲರ ಭಾಷಣ ಬೇಡ ಎಂಬ ಸ್ಪಷ್ಟನೆ ನೀಡಿತ್ತು. ಆದರೆ ಟಿಆರ್​ಎಸ್​ನ ಈ ನಿರ್ಧಾರವನ್ನು ಬಿಜೆಪಿ-ಕಾಂಗ್ರೆಸ್​ಗಳು ಖಂಡಿಸಿವೆ. ಇದು ರಾಜ್ಯಪಾಲರಿಗೆ ಅಗೌರವ ನೀಡಿದಂತೆ ಎಂದು ಹೇಳಿವೆ.

ಇದನ್ನೂ ಓದಿ: ‘ವೇದ’ ಸಿನಿಮಾ ಮಾಡುವಾಗ ನನ್ನಲ್ಲಿ ಅಪ್ಪುನ ಹುಡಕೋ ಪ್ರಯತ್ನ ಮಾಡಿದ್ದೇನೆ; ಶಿವರಾಜ್​ಕುಮಾರ್

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?